AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Board Exams 2021: ಈ ವರ್ಷದ ಸಿಬಿಎಸ್​ಇ ಪರೀಕ್ಷೆ ದಿನಾಂಕ ಮುಂದೂಡಲ್ಪಡುವ ಸಂಭವ

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಬಳಿ ಈ ಮುನ್ನ ಕೈಗೊಳ್ಳಲಾಗಿದ್ದ ನಿರ್ಣಯವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದರು.

CBSE Board Exams 2021: ಈ ವರ್ಷದ ಸಿಬಿಎಸ್​ಇ ಪರೀಕ್ಷೆ ದಿನಾಂಕ ಮುಂದೂಡಲ್ಪಡುವ ಸಂಭವ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Apr 14, 2021 | 6:09 AM

Share

CBSE Board Exams 2021 | ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ವೈರಾಣುವಿನ ಉಪಟಳದಿಂದ ಸಿಬಿಎಸ್​ಇ ಬೋರ್ಡ್​ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಿಸಿದ್ದ ತನ್ನ ನಿರ್ಧಾರವನ್ನು ಮರು ಪರಿಶೀಲಿಸಲು ತೀರ್ಮಾನಿಸಿದೆ. ಈ ಮುನ್ನ ಮೇ 4ರಂದು ಪರೀಕ್ಷೆ ನಡೆಸುವುದಾಗಿ ಸಿಬಿಎಸ್​ಇ ಮಂಡಳಿ ಘೋಷಿಸಿತ್ತು. ಕೇಂದ್ರ ಶಿಕ್ಷಣ ಇಲಾಖೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಕ್ಸಾಮಿನೇಶನ್ ಈ ಕುರಿತು ಚರ್ಚೆ ನಡೆಸಿದ್ದು, ಕೊವಿಡ್ 19ರ ಹೆಚ್ಚಳದಿಂದ ಸಿಬಿಎಸ್​ಇ ತರಗತಿಗಳಲ್ಲಿ ಬದಲಾವಣೆ ಆಗಲಿದೆ ಎಂದು ತಿಳಿಸಿದೆ. ಆದರೆ ಪರೀಕ್ಷೆಗಳು ಯಾವಾಗ ನಡೆಯಲಿವೆ ಎಂದು ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ.

ಕೊರೊನಾ ಸೋಂಕಿನ ಹೆಚ್ಚಳದಿಂದ ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. #cancelboardexam2021 ಎಂಬ ಹ್ಯಾಷ್​ಟ್ಯಾಗ್​ನಡಿ ಪರೀಕ್ಷೆ ರದ್ದುಗೊಳಿಸಲು ಟ್ವಿಟರ್​ನಲ್ಲಿ ಆಗ್ರಹಿಸಲಾಗಿತ್ತು. ಈ ಹ್ಯಾಷ್​ಟ್ಯಾಗ್​ನಡಿ ಕಳೆದ ರವಿವಾರ ಒಂದೇ ದಿನ 5 ಲಕ್ಷಕ್ಕೂ ಹೆಚ್ಚು ಟ್ವೀಟ್​ಗಳನ್ನು ಮಾಡಲಾಗಿತ್ತು.

ಈ ಮುನ್ನ ಬಿಡುಗಡೆಯಾಗಿದ್ದ ವೇಳಾಪಟ್ಟಿಯ ಪ್ರಕಾರ ಮೇ 4ರಿಂದ ಜೂನ್​ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಮೊದಲ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು. ಆದರೆ ಈ ವೇಳಾಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸುವುದಾಗಿ ಸಿಬಿಎಸ್​ಇ ಬೋರ್ಡ್ ತಿಳಿಸಿದೆ.

ಸಿಬಿಎಸ್​ಇ ವಿದ್ಯಾರ್ಥಿಗಳ ಆಗ್ರಹಕ್ಕೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿಯವರ ಬೆಂಬಲವೂ ದೊರಕಿತ್ತು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರ ಬಳಿ ಈ ಮುನ್ನ ಕೈಗೊಳ್ಳಲಾಗಿದ್ದ ನಿರ್ಣಯವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದರು.

ಇದನ್ನೂ ಓದಿ: Karnataka Exam 2021 News: ಎಲ್ಲವೂ ಸರಿಹೋದ ತಕ್ಷಣ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ; ಡಾ.ಅಶ್ವತ್ಥ ನಾರಾಯಣ

ಮದುವೆಯಾದ ಮರುದಿನವೇ ಹೆಂಡತಿಗೆ ಕನ್ಯತ್ವ ಪರೀಕ್ಷೆ; ಫೇಲ್ ಆದವಳಿಗೆ ಗಂಡ ಮಾಡಿದ್ದೇನು?

(CBSE 2021 exam date likely to postpone as surge of Covid Cases in India)

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ