AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 12th Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದಿಲ್ಲ; ಜೂನ್ 1ರಂದು ಅಂತಿಮ ತೀರ್ಮಾನ ಪ್ರಕಟಗೊಳ್ಳುವ ಸಂಭವ

ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ 2021: ಅಲ್ಲದೇ, ಕಿರು ಅವಧಿಯ ಪರೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖ 19 ವಿಷಯಗಳಿಗೆ 90 ನಿಮಿಶಗಳ ಕಿರು ಅವಧಿಯ ಪರೀಕ್ಷೆ ನಡೆಸಿ, ಮಿಕ್ಕ ವಿಷಯಗಳಿಗೆ ವಿದ್ಯಾರ್ಥಿಗಳ ಈವರೆಗಿನ ಆಧಾರದ ಮೇಲೆ ಅಂಕಗಳನ್ನು ನೀಡುವ ಕುರಿತೂ ಚರ್ಚಿಸಲಾಯಿತು.

CBSE 12th Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದಿಲ್ಲ; ಜೂನ್ 1ರಂದು  ಅಂತಿಮ ತೀರ್ಮಾನ  ಪ್ರಕಟಗೊಳ್ಳುವ ಸಂಭವ
ಸಾಂದರ್ಭಿಕ ಚಿತ್ರ
Follow us
guruganesh bhat
| Updated By: Digi Tech Desk

Updated on:May 23, 2021 | 5:15 PM

ದೆಹಲಿ: ಕೊವಿಡ್ ಪಿಡುಗಿನ ನಡುವೆ ಸಿಬಿಎಸ್​ಇ 12 ತರಗತಿ ಪರೀಕ್ಷೆ ನಡೆಸುವ ಕುರಿತು ಇಂದು ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಒಮ್ಮತದ ನಿರ್ಧಾರ ಹೊರಹೊಮ್ಮಲಿಲ್ಲ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್​ ಜೂನ್ 1ರಂದು ಪರೀಕ್ಷೆ ನಡೆಸುವ ಪದ್ಧತಿಯ ಬಗ್ಗೆ ಸುದ್ದಿಗೋಷ್ಠಿ ನಡೆಸಿ ವಿವರಿಸಲಿದ್ದಾರೆ ಎಂದು ಹೇಳಲಾಗಿದೆ.ಸಭೆಯಲ್ಲಿ ಚರ್ಚೆಯಾದ ಅಬಿಪ್ರಾಯಗಳ ಸಾರಾಂಶವನ್ನು ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ತಲುಪಿಸಲಾಗಿದ್ದು, ಪ್ರಧಾನ ಮಂತ್ರಿಗಳ ಕಚೇರಿಯಿಂದ ಅಂತಿಮ ನಿರ್ಣಯ ಹೊರಬೀಳಲಿದೆ ಎಂದು ಸಹ ಹೇಳಲಾಗಿದೆ.

ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್​ ಮತ್ತು ಎಲ್ಲಾ ರಾಜ್ಯ ಸರ್ಕಾರಗಳ ಶಿಕ್ಷಣ ಸಚಿವರು ಭಾಗವಹಿಸಿದ್ದ ಸಭೆಯಲ್ಲಿ ಆಫ್​ಲೈನ್ ಪರೀಕ್ಷೆಗಳನ್ನು ನಡೆಸುವ ಕುರಿತು ಎರಡು ಅಭಿಪ್ರಾಯಗಳು ವ್ಯಕ್ತವಾದವು. ಕೊವಿಡ್ ಒಂದು ಹಂತಕ್ಕೆ ಹತೋಟಿಗೆ ಬಂದ ನಂತರ ಜುಲೈನಲ್ಲಿ ಸಿಬಿಎಸ್​​ಇ 12ನೇ ತರಗತಿ ಪರೀಕ್ಷೆ ಸಾಧ್ಯತೆಯ ಕುರಿತು ಹೆಚ್ಚಿನವರ ಒಲವು ವ್ಯಕ್ತವಾಯಿತು. ಅಲ್ಲದೇ, ಪರೀಕ್ಷೆಗಳನ್ನು ನಡೆಸಲು 3 ತಿಂಗಳ ಕಾಲಾವಧಿ ಬಳಸಿಕೊಳ್ಳಬೇಕು. ಮೊದಲ ತಿಂಗಳಲ್ಲಿ ಪರೀಕ್ಷಾ ಪೂರ್ವ ಸಿದ್ಧತೆಗೆ, ಇನ್ನುಳಿದ ಎರಡು ತಿಂಗಳನ್ನು ಪರೀಕ್ಷೆ ನಡೆಸಲು ಮತ್ತು ಫಲಿತಾಂಶ ಘೋಷಣೆಗೆ ಬಳಸಿಕೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಅಲ್ಲದೇ, ಕಿರು ಅವಧಿಯ ಪರೀಕ್ಷೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖ 19 ವಿಷಯಗಳಿಗೆ 90 ನಿಮಿಶಗಳ ಕಿರು ಅವಧಿಯ ಪರೀಕ್ಷೆ ನಡೆಸಿ, ಮಿಕ್ಕ ವಿಷಯಗಳಿಗೆ ವಿದ್ಯಾರ್ಥಿಗಳ ಈವರೆಗಿನ ಆಧಾರದ ಮೇಲೆ ಅಂಕಗಳನ್ನು ನೀಡುವ ಕುರಿತೂ ಚರ್ಚಿಸಲಾಯಿತು.

ಇದನ್ನೂ ಓದಿ: Karnataka PUC Exam 2021: ದ್ವಿತೀಯ ಪಿಯು ಪರೀಕ್ಷೆ ಅನಿವಾರ್ಯ,ಕೊವಿಡ್ ನಂತರ ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ಸಿದ್ಧವಿದೆ: ಸಚಿವ ಸುರೇಶ್ ಕುಮಾರ್

Bengaluru Air: ಲಾಕ್​ಡೌನ್ ಪರಿಣಾಮ: ಬೆಂಗಳೂರು ನಗರದಲ್ಲಿ ಗಾಳಿಯ ಶುದ್ಧತೆ ಹೆಚ್ಚಳ (CBSE board Exams 2021 not cancelled likely held in July Says Ramesh Pokhriyal)

Published On - 5:12 pm, Sun, 23 May 21

ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ