AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಾಪ್ ಹೊಸ ಪ್ರೈವೆಸಿ ಪಾಲಿಸಿ ವಿವಾದ: ತನಿಖೆ ನಡೆಸಿ, 60 ದಿನಗಳಲ್ಲಿ ವರದಿ ಸಲ್ಲಿಸಲು ಆ್ಯಪ್​ನ ನಿರ್ದೇಶಕರಿಗೆ ಸೂಚನೆ

Whatsapp New Privacy Policy: ಹೊಸ ಖಾಸಗಿತನದ ನೀತಿಯು, ಮೇಲ್ನೋಟಕ್ಕೆ ಭಾರತದ ಸ್ಪರ್ಧಾ ಕಾಯ್ದೆ 2000ರ ಉಲಂಘನೆಗೆ ಪುಷ್ಟಿ ನೀಡಿರುವುದು ಕಂಡುಬಂದಿರುವ ಹಿನ್ನೆಲೆ ತನಿಖೆ ನಡೆಸಿ 60 ದಿನಗಳಲ್ಲಿ ವರದಿ ಸಲ್ಲಿಸಲು ಡೈರೆಕ್ಟರ್ ಜನರಲ್​ಗೆ ಸಿಸಿಐ ಸೂಚನೆ ನೀಡಿದೆ.

ವಾಟ್ಸಾಪ್ ಹೊಸ ಪ್ರೈವೆಸಿ ಪಾಲಿಸಿ ವಿವಾದ: ತನಿಖೆ ನಡೆಸಿ, 60 ದಿನಗಳಲ್ಲಿ ವರದಿ ಸಲ್ಲಿಸಲು ಆ್ಯಪ್​ನ ನಿರ್ದೇಶಕರಿಗೆ ಸೂಚನೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 1:13 PM

ಬೆಂಗಳೂರು: ವಾಟ್ಸಾಪ್​ನಲ್ಲಿ ಹೊಸ ಪ್ರೈವಸಿ ಪಾಲಿಸಿ ವಿವಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾತ್ಮಕ ಆಯೋಗ (Competition Commission of India- CCI) ಆದೇಶಿಸಿದೆ. ವಾಟ್ಸಾಪ್ ಹೊಸ ಪ್ರೈವಸಿ ಪಾಲಿಸಿಯಲ್ಲಿ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿದೆ. ಹಾಗಾಗಿ, ವಿವಾದಾತ್ಮಕ ಅಂಶಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಸಿಸಿಐ ಆದೇಶ ನೀಡಿದೆ.

ಹೊಸ ಖಾಸಗಿತನದ ನೀತಿಯು, ಮೇಲ್ನೋಟಕ್ಕೆ ಭಾರತದ ಸ್ಪರ್ಧಾ ಕಾಯ್ದೆ 2000ರ ಉಲಂಘನೆಗೆ ಪುಷ್ಟಿ ನೀಡಿರುವುದು ಕಂಡುಬಂದಿರುವ ಹಿನ್ನೆಲೆ ತನಿಖೆ ನಡೆಸಿ 60 ದಿನಗಳಲ್ಲಿ ವರದಿ ಸಲ್ಲಿಸಲು ಡೈರೆಕ್ಟರ್ ಜನರಲ್​ಗೆ ಸೂಚನೆ ನೀಡಿದೆ. ವಾಟ್ಸಾಪ್ ಹೊಸ ಖಾಸಗಿತನದ ನೀತಿಯು ಪಾರದರ್ಶಕವಾಗಿಲ್ಲ, ಬಳಕೆದಾರರ ಒಪ್ಪಿಗೆಯನ್ನು ಪಡೆದಿಲ್ಲ. ವಾಟ್ಸಾಪ್ ಬಳಕೆದಾರರ ಮಾಹಿತಿಯನ್ನು ಫೇಸ್‌ಬುಕ್‌ ಕಂಪನಿಗಳ‌ ಜೊತೆಗೆ ಹಂಚಿಕೊಳ್ಳುತ್ತದೆ. ಇದು ಕಾಯ್ದೆಯ ಉಲಂಘನೆ ಎಂದು ಸಿಸಿಐ ತಿಳಿಸಿದೆ.

ವಾಟ್ಸಾಪ್​​ನಿಂದ ಖಾಸಗಿತನ ನಿಯಮಾವಳಿಗಳ ಅಪ್​ಡೇಟ್ ಮಾಡುವುದಕ್ಕೆ ತಡೆ ನೀಡಬೇಕು. ಅವುಗಳು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಕ್ಕಂತೆ ಇಲ್ಲ ಎಂದು ಕೇಂದ್ರ ಸರ್ಕಾರವು ಶುಕ್ರವಾರ ದೆಹಲಿ ಹೈಕೋರ್ಟ್​​ನಲ್ಲಿ ಕೇಳಿಕೊಂಡಿತ್ತು. ಈ ಬಗ್ಗೆ ಅಫಿಡವಿಟ್ ಸಲ್ಲಿಸಿರುವ ಸರ್ಕಾರ, ಪ್ರಸ್ತಾವಿತ ದತ್ತಾಂಶ ಸುರಕ್ಷತಾ ಮಸೂದೆ, 2019ಕ್ಕೆ ಇನ್ನೂ ಸಂಸತ್​​ನಲ್ಲಿ ಅನುಮೋದನೆ ಪಡೆಯಬೇಕಿದೆ. ಈ ಮಸೂದೆಯು ವಾಟ್ಸಾಪ್​ನಂಥ ಸೇವಾ ಪೂರೈಕೆದಾರರು ಖಾಸಗಿತನ ನಿಯಮವನ್ನು ನೀಡುವ ಸಾಮರ್ಥ್ಯ ಮಿತಿಗೊಳಿಸುತ್ತದೆ. ಅವುಗಳು ಸೂಕ್ತ ಗುಣಮಟ್ಟದ ಭದ್ರತೆ ಹಾಗೂ ದತ್ತಾಂಶ ರಕ್ಷಣಾ ವ್ಯವಸ್ಥೆಯನ್ನು ಹೊಂದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ವಾಟ್ಸಾಪ್ ಖಾಸಗಿತನ ನಿಯಮಾವಳಿಗಳ ಅಪ್​ಡೇಟ್​ಗೆ ದೆಹಲಿ ಹೈಕೋರ್ಟ್​ನಲ್ಲಿ ತಡೆ ಕೋರಿದ ಸರ್ಕಾರ

Tv9 Facebook Live | ವಾಟ್ಸಾಪ್​ ಹೊಸ ಪ್ರೈವೆಸಿ ಪಾಲಿಸಿ; ಸಾಧಕ-ಬಾಧಕ

Published On - 10:36 pm, Wed, 24 March 21

ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ