AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಜ್ಯದಲ್ಲಿ ಹಸುವಿನ ಸಗಣಿ ಅತ್ಯಮೂಲ್ಯ ವಸ್ತು; ಕಳ್ಳತನ ಆಗದಂತೆ ತಪ್ಪಿಸಲು ಸಿಸಿಟಿವಿ ಕ್ಯಾಮರಾ ಕಣ್ಗಾವಲು

ರೈತರಿಂದ ಸಗಣಿಯನ್ನು ಸ್ಥಳೀಯ ಪುರಸಭೆ, ತಾಲೂಕು ಆಡಳಿತಾಧಿಕಾರಿಗಳು ಖರೀದಿಸುತ್ತಾರೆ. ಖರೀದಿಸಿದ ಸಗಣಿಯನ್ನು ಸಂಗ್ರಹಿಸಿಡಲು ಗೋದಾಮುಗಳನ್ನೂ ನಿರ್ಮಿಸಲಾಗಿದೆ. ಆದರೆ ಈ ಗೋದಾಮುಗಳಿಂದಲೇ ಸಗಣಿ ನಾಪತ್ತೆಯಾಗುತ್ತಿರುವುದು ದೊಡ್ಡತಲೆನೋವಾಗಿ ಪರಿಣಮಿಸಿದೆ.

ಈ ರಾಜ್ಯದಲ್ಲಿ ಹಸುವಿನ ಸಗಣಿ ಅತ್ಯಮೂಲ್ಯ ವಸ್ತು; ಕಳ್ಳತನ ಆಗದಂತೆ ತಪ್ಪಿಸಲು ಸಿಸಿಟಿವಿ ಕ್ಯಾಮರಾ ಕಣ್ಗಾವಲು
ಹಸುಗಳ ಸಗಣಿ (ಪ್ರಾತಿನಿಧಿಕ ಚಿತ್ರ)
Lakshmi Hegde
|

Updated on: Mar 02, 2021 | 6:06 PM

Share

ಸಿಸಿಟಿವಿ ಕ್ಯಾಮರಾಗಳನ್ನು ಹೆಚ್ಚಾಗಿ ಎಲ್ಲೆಲ್ಲಿ ಬಳಸಬಹದು? ರಸ್ತೆಗಳಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರನ್ನು ಪತ್ತೆ ಹಚ್ಚಲು, ಬಹುತೇಕ ಎಲ್ಲ ಕಚೇರಿಗಳು, ಕಂಪನಿ, ಅಂಗಡಿಗಳಲ್ಲಿ ಯಾವುದೇ ರೀತಿಯ ಕಳ್ಳತನ ಮತ್ತಿತರ ಅಪರಾಧಗಳನ್ನು ತಪ್ಪಿಸಲು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತದೆ. ಈಗಂತೂ ಬಹುತೇಕ ಮನೆಗಳಲ್ಲೂ ಕ್ಯಾಮರಾ ಫಿಕ್ಸ್​ ಮಾಡಿರುತ್ತಾರೆ. ಆದರೆ ಚತ್ತೀಸ್​ಗಢ್​​ದಲ್ಲಿ ರೈತರು ಹಸುಗಳ ಸಗಣಿಯ ರಕ್ಷಣೆಗಾಗಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದಾರೆ ! ಇದೇನು ಹಸುವಿನ ಸಗಣಿಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಾ? ಯಾಕೆ ಹೀಗೆ ಮಾಡ್ತಿದ್ದಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿದ್ದರೆ .. ಉತ್ತರ ತಿಳಿಯಲು ಈ ಸ್ಟೋರಿ ಓದಿ..

ಚತ್ತೀಸ್​ಗಢ್​ ಸರ್ಕಾರ 2020ರಲ್ಲಿ ಗೋಧನ್​ ನಯಾ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಯಡಿ ಸರ್ಕಾರ ರೈತರು ಮತ್ತು ಪಶುಸಂಗೋಪನೆ ಮಾಡುತ್ತಿರುವವರಿಂದ ಹಸುವಿನ ಸಗಣಿಯನ್ನು ಕೆಜಿಗೆ 2 ರೂ.ನಂತೆ ಖರೀದಿ ಮಾಡುತ್ತಿದೆ. ಹೀಗೆ ಖರೀದಿ ಮಾಡಿದ ಸಗಣಿಯನ್ನು ಕೆಲವು ಸಹಕಾರಿ ಸಂಘಗಳಿಗೆ ನೀಡಲಾಗುತ್ತವೆ. ಅವು ಅದನ್ನು ವರ್ಮಿಕಾಂಪೋಸ್ಟ್​ ಆಗಿ ಬದಲಿಸಿ ಅಗತ್ಯ ಇರುವ ರೈತರಿಗೆ ಮಾರಾಟ ಮಾಡುತ್ತವೆ. ವರ್ಮಿಕಾಂಪೋಸ್ಟ್​ ತಯಾರಿಕೆಗಾಗಿ ಸಹಕಾರಿ ಸಂಘಗಳಿಗೆ ಸರ್ಕಾರದಿಂದ ಸಾಲವನ್ನೂ ಕೂಡ ನೀಡಲಾಗುತ್ತದೆ. ಹಾಗಾಗಿ ಇದೀಗ ಚತ್ತೀಸ್​ಗಢ್​​ದಲ್ಲಿ ಸಗಣಿಗೆ ಭರ್ಜರಿ ಬೇಡಿಕೆಯಿದ್ದು, ಅಮೂಲ್ಯ ವಸ್ತುಗಳಲ್ಲಿ ಒಂದಾಗಿ ಬದಲಾಗಿದೆ. ಇದೇ ಕಾರಣಕ್ಕೆ ಸಗಣಿಯ ಕಳ್ಳತನವೂ ಹೆಚ್ಚಾಗಿದೆ.

ರೈತರಿಂದ ಸಗಣಿಯನ್ನು ಸ್ಥಳೀಯ ಪುರಸಭೆ, ತಾಲೂಕು ಆಡಳಿತಾಧಿಕಾರಿಗಳು ಖರೀದಿಸುತ್ತಾರೆ. ಖರೀದಿಸಿದ ಸಗಣಿಯನ್ನು ಸಂಗ್ರಹಿಸಿಡಲು ಗೋದಾಮುಗಳನ್ನೂ ನಿರ್ಮಿಸಲಾಗಿದೆ. ಆದರೆ ಈ ಗೋದಾಮುಗಳಿಂದಲೇ ಸಗಣಿ ನಾಪತ್ತೆಯಾಗುತ್ತಿರುವುದು ದೊಡ್ಡತಲೆನೋವಾಗಿ ಪರಿಣಮಿಸಿದೆ. ಇತ್ತೀಚೆಗೆ ಅಂಬಿಕಾಪುರ ಪುರಸಭೆಯ ಗೋಡೋನ್​ನಲ್ಲಿದ್ದ ಸುಮಾರು 45 ಕೆಜಿ ಸಗಣಿಯನ್ನು ಐವರು ಮಹಿಳೆಯರು ಕಳವು ಮಾಡಿ, ಸಿಕ್ಕಿಬಿದ್ದಿದ್ದರು. ಹಾಗಾಗಿ ಸ್ಥಳೀಯ ಆಡಳಿತಾಧಿಕಾರಿಗಳು ಸಂಗ್ರಹವಾದ ಸಗಣಿ ಮೇಲೆ ಬಲವಾದ ಕಣ್ಗಾವಲು ಇಡಲು ನಿರ್ಧರಿಸಿದ್ದಾರೆ. ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮರಾವನ್ನೂ ಅಳವಡಿಸಿದ್ದಾರೆ. ರಾಜ್ಯಾದ್ಯಂತ ಬಹುತೇಕ ಎಲ್ಲ ಸಗಣಿ ಗೋದಾಮುಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಇದಕ್ಕೂ ಮೀರಿ ಸೆಕ್ಯೂರಿಟಿ ಸಿಬ್ಬಂದಿ ನೇಮಕ ಮಾಡಲೂ ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ: ಕಾಮೋತ್ತೇಜಕವಂತೆ ಕತ್ತೆ ಮಾಂಸ; ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿಬಿಟ್ಟಿದೆ ಈಗ ಈ ಮೂಕಪ್ರಾಣಿಗೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ