AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಜ್ಯದಲ್ಲಿ ಹಸುವಿನ ಸಗಣಿ ಅತ್ಯಮೂಲ್ಯ ವಸ್ತು; ಕಳ್ಳತನ ಆಗದಂತೆ ತಪ್ಪಿಸಲು ಸಿಸಿಟಿವಿ ಕ್ಯಾಮರಾ ಕಣ್ಗಾವಲು

ರೈತರಿಂದ ಸಗಣಿಯನ್ನು ಸ್ಥಳೀಯ ಪುರಸಭೆ, ತಾಲೂಕು ಆಡಳಿತಾಧಿಕಾರಿಗಳು ಖರೀದಿಸುತ್ತಾರೆ. ಖರೀದಿಸಿದ ಸಗಣಿಯನ್ನು ಸಂಗ್ರಹಿಸಿಡಲು ಗೋದಾಮುಗಳನ್ನೂ ನಿರ್ಮಿಸಲಾಗಿದೆ. ಆದರೆ ಈ ಗೋದಾಮುಗಳಿಂದಲೇ ಸಗಣಿ ನಾಪತ್ತೆಯಾಗುತ್ತಿರುವುದು ದೊಡ್ಡತಲೆನೋವಾಗಿ ಪರಿಣಮಿಸಿದೆ.

ಈ ರಾಜ್ಯದಲ್ಲಿ ಹಸುವಿನ ಸಗಣಿ ಅತ್ಯಮೂಲ್ಯ ವಸ್ತು; ಕಳ್ಳತನ ಆಗದಂತೆ ತಪ್ಪಿಸಲು ಸಿಸಿಟಿವಿ ಕ್ಯಾಮರಾ ಕಣ್ಗಾವಲು
ಹಸುಗಳ ಸಗಣಿ (ಪ್ರಾತಿನಿಧಿಕ ಚಿತ್ರ)
Lakshmi Hegde
|

Updated on: Mar 02, 2021 | 6:06 PM

Share

ಸಿಸಿಟಿವಿ ಕ್ಯಾಮರಾಗಳನ್ನು ಹೆಚ್ಚಾಗಿ ಎಲ್ಲೆಲ್ಲಿ ಬಳಸಬಹದು? ರಸ್ತೆಗಳಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರನ್ನು ಪತ್ತೆ ಹಚ್ಚಲು, ಬಹುತೇಕ ಎಲ್ಲ ಕಚೇರಿಗಳು, ಕಂಪನಿ, ಅಂಗಡಿಗಳಲ್ಲಿ ಯಾವುದೇ ರೀತಿಯ ಕಳ್ಳತನ ಮತ್ತಿತರ ಅಪರಾಧಗಳನ್ನು ತಪ್ಪಿಸಲು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತದೆ. ಈಗಂತೂ ಬಹುತೇಕ ಮನೆಗಳಲ್ಲೂ ಕ್ಯಾಮರಾ ಫಿಕ್ಸ್​ ಮಾಡಿರುತ್ತಾರೆ. ಆದರೆ ಚತ್ತೀಸ್​ಗಢ್​​ದಲ್ಲಿ ರೈತರು ಹಸುಗಳ ಸಗಣಿಯ ರಕ್ಷಣೆಗಾಗಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದಾರೆ ! ಇದೇನು ಹಸುವಿನ ಸಗಣಿಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಾ? ಯಾಕೆ ಹೀಗೆ ಮಾಡ್ತಿದ್ದಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿದ್ದರೆ .. ಉತ್ತರ ತಿಳಿಯಲು ಈ ಸ್ಟೋರಿ ಓದಿ..

ಚತ್ತೀಸ್​ಗಢ್​ ಸರ್ಕಾರ 2020ರಲ್ಲಿ ಗೋಧನ್​ ನಯಾ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಯಡಿ ಸರ್ಕಾರ ರೈತರು ಮತ್ತು ಪಶುಸಂಗೋಪನೆ ಮಾಡುತ್ತಿರುವವರಿಂದ ಹಸುವಿನ ಸಗಣಿಯನ್ನು ಕೆಜಿಗೆ 2 ರೂ.ನಂತೆ ಖರೀದಿ ಮಾಡುತ್ತಿದೆ. ಹೀಗೆ ಖರೀದಿ ಮಾಡಿದ ಸಗಣಿಯನ್ನು ಕೆಲವು ಸಹಕಾರಿ ಸಂಘಗಳಿಗೆ ನೀಡಲಾಗುತ್ತವೆ. ಅವು ಅದನ್ನು ವರ್ಮಿಕಾಂಪೋಸ್ಟ್​ ಆಗಿ ಬದಲಿಸಿ ಅಗತ್ಯ ಇರುವ ರೈತರಿಗೆ ಮಾರಾಟ ಮಾಡುತ್ತವೆ. ವರ್ಮಿಕಾಂಪೋಸ್ಟ್​ ತಯಾರಿಕೆಗಾಗಿ ಸಹಕಾರಿ ಸಂಘಗಳಿಗೆ ಸರ್ಕಾರದಿಂದ ಸಾಲವನ್ನೂ ಕೂಡ ನೀಡಲಾಗುತ್ತದೆ. ಹಾಗಾಗಿ ಇದೀಗ ಚತ್ತೀಸ್​ಗಢ್​​ದಲ್ಲಿ ಸಗಣಿಗೆ ಭರ್ಜರಿ ಬೇಡಿಕೆಯಿದ್ದು, ಅಮೂಲ್ಯ ವಸ್ತುಗಳಲ್ಲಿ ಒಂದಾಗಿ ಬದಲಾಗಿದೆ. ಇದೇ ಕಾರಣಕ್ಕೆ ಸಗಣಿಯ ಕಳ್ಳತನವೂ ಹೆಚ್ಚಾಗಿದೆ.

ರೈತರಿಂದ ಸಗಣಿಯನ್ನು ಸ್ಥಳೀಯ ಪುರಸಭೆ, ತಾಲೂಕು ಆಡಳಿತಾಧಿಕಾರಿಗಳು ಖರೀದಿಸುತ್ತಾರೆ. ಖರೀದಿಸಿದ ಸಗಣಿಯನ್ನು ಸಂಗ್ರಹಿಸಿಡಲು ಗೋದಾಮುಗಳನ್ನೂ ನಿರ್ಮಿಸಲಾಗಿದೆ. ಆದರೆ ಈ ಗೋದಾಮುಗಳಿಂದಲೇ ಸಗಣಿ ನಾಪತ್ತೆಯಾಗುತ್ತಿರುವುದು ದೊಡ್ಡತಲೆನೋವಾಗಿ ಪರಿಣಮಿಸಿದೆ. ಇತ್ತೀಚೆಗೆ ಅಂಬಿಕಾಪುರ ಪುರಸಭೆಯ ಗೋಡೋನ್​ನಲ್ಲಿದ್ದ ಸುಮಾರು 45 ಕೆಜಿ ಸಗಣಿಯನ್ನು ಐವರು ಮಹಿಳೆಯರು ಕಳವು ಮಾಡಿ, ಸಿಕ್ಕಿಬಿದ್ದಿದ್ದರು. ಹಾಗಾಗಿ ಸ್ಥಳೀಯ ಆಡಳಿತಾಧಿಕಾರಿಗಳು ಸಂಗ್ರಹವಾದ ಸಗಣಿ ಮೇಲೆ ಬಲವಾದ ಕಣ್ಗಾವಲು ಇಡಲು ನಿರ್ಧರಿಸಿದ್ದಾರೆ. ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮರಾವನ್ನೂ ಅಳವಡಿಸಿದ್ದಾರೆ. ರಾಜ್ಯಾದ್ಯಂತ ಬಹುತೇಕ ಎಲ್ಲ ಸಗಣಿ ಗೋದಾಮುಗಳಲ್ಲೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಇದಕ್ಕೂ ಮೀರಿ ಸೆಕ್ಯೂರಿಟಿ ಸಿಬ್ಬಂದಿ ನೇಮಕ ಮಾಡಲೂ ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ: ಕಾಮೋತ್ತೇಜಕವಂತೆ ಕತ್ತೆ ಮಾಂಸ; ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿಬಿಟ್ಟಿದೆ ಈಗ ಈ ಮೂಕಪ್ರಾಣಿಗೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್