AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್ ಬಳಿ ಕಾದು ಗುಂಡು ಹಾರಿಸಿ ಕೊಲೆ; ಪಾಟ್ನಾದಲ್ಲಿ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಸಿಸಿಟಿವಿ ವಿಡಿಯೋದಲ್ಲಿ ಸೆರೆ

ಗೇಟ್ ಬಳಿ ಕಾದು ಕುಳಿತಿದ್ದ ಬೈಕ್ ಸವಾರ ಗುಂಡು ಹಾರಿಸಿ ಪಾಟ್ನಾದಲ್ಲಿ ಗೋಪಾಲ್ ಖೇಮ್ಕಾ ಅವರನ್ನು ಕೊಲೆ ಮಾಡಿದ್ದಾರೆ. ಅವರ ಹತ್ಯೆಯಾದ ಕ್ಷಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ಮಧ್ಯರಾತ್ರಿ ಅವರ ನಿವಾಸದ ಹೊರಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಬೆಳಕಿಗೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಪಾಟ್ನಾ ನಿವಾಸದ ಹೊರಗೆ ಗುಂಡಿಕ್ಕಿ ಕೊಂದ ಕ್ಷಣ ಶುಕ್ರವಾರ ರಾತ್ರಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗೇಟ್ ಬಳಿ ಕಾದು ಗುಂಡು ಹಾರಿಸಿ ಕೊಲೆ; ಪಾಟ್ನಾದಲ್ಲಿ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಸಿಸಿಟಿವಿ ವಿಡಿಯೋದಲ್ಲಿ ಸೆರೆ
Gopal Khemka
ಸುಷ್ಮಾ ಚಕ್ರೆ
|

Updated on:Jul 05, 2025 | 4:53 PM

Share

ಪಾಟ್ನಾ, ಜುಲೈ 5: ಕಪ್ಪು ಹೆಲ್ಮೆಟ್ ಮತ್ತು ನೀಲಿ ಶರ್ಟ್ ಧರಿಸಿದ ಬೈಕ್ ಸವಾರನೊಬ್ಬ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ್ ಖೇಮ್ಕಾ (Gopal Khemka) ಅವರ ನಿವಾಸದ ಮುಖ್ಯ ದ್ವಾರದಲ್ಲಿ ಕಾಯುತ್ತಿರುವುದನ್ನು ನೋಡಬಹುದು. ಗೇಟ್ ಮುಚ್ಚಿದ್ದರಿಂದ ಮತ್ತೊಂದು ಕಾರು ಉದ್ಯಮಿಯ ಕಾರು ಪಾರ್ಕಿಂಗ್ ಸ್ಥಳಕ್ಕೆ ಬಂದು ನಿಂತಾಗ, ಬೈಕ್ ಸವಾರ ಆ ಅವಕಾಶವನ್ನು ಪಡೆದುಕೊಂಡು ಮೊದಲ ಕಾರಿನಲ್ಲಿ ಚಾಲಕನ ಸೀಟಿನಲ್ಲಿ ಕುಳಿತಿದ್ದ ಗೋಪಾಲ್ ಖೇಮ್ಕಾ ಮೇಲೆ ಗುಂಡು ಹಾರಿಸಿದ. ದಾಳಿ ನಡೆಸಿದವನನ್ನು ಸೆರೆಹಿಡಿಯುವ ಮೊದಲೇ ಆತ ಆ ಸ್ಥಳದಿಂದ ಪರಾರಿಯಾಗಿದ್ದ.

ನಂತರ ಸೆಕ್ಯುರಿಟಿ ಮನೆಯ ಒಳಗಿನಿಂದ ಗೇಟ್ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಗೇಟ್ ತೆರೆಯುತ್ತಿದ್ದಂತೆ ಗೋಪಾಲ್ ಖೇಮ್ಕಾ ನಿರ್ಜೀವವಾಗಿ ಬಿದ್ದಿರುವುದು ಕಂಡುಬಂದಿದೆ. ಗೋಪಾಲ್ ಖೇಮ್ಕಾ ಅವರ ಕಾರಿನ ಹಿಂದೆ ಇದ್ದ ಎರಡನೇ ಕಾರಿನಲ್ಲಿದ್ದ ಪುರುಷ ಮತ್ತು ಮಹಿಳೆ ಭಯಭೀತರಾಗಿ ತಮ್ಮ ವಾಹನದಿಂದ ಹೊರಗೆ ಓಡುತ್ತಿರುವುದು ಕಂಡುಬಂದಿದೆ. ಬಿಜೆಪಿ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲದಲ್ಲಿ ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಬಳಿಯ ಪನಾಚೆ ಹೋಟೆ ಬಳಿಯ ಅವರ ನಿವಾಸದ ಹೊರಗೆ ಈ ಕೊಲೆ ನಡೆದಿದೆ. ಅವರು ಟ್ವಿನ್ ಟವರ್ ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ಈ ಸ್ಥಳದಿಂದ ಗುಂಡು ಮತ್ತು ಶೆಲ್ ಪತ್ತೆಯಾಗಿದೆ. ಈ ಘಟನೆಯ ತನಿಖೆಗಾಗಿ ಪೊಲೀಸರು ಎಸ್‌ಐಟಿ ರಚಿಸಿದ್ದಾರೆ ಮತ್ತು ಅಪರಾಧದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಇದೇ ರೀತಿ ಉದ್ಯಮಿಯ ಮಗ ಗುಂಜನ್ ಖೇಮ್ಕಾ ಅವರನ್ನು ಡಿಸೆಂಬರ್ 2018ರಲ್ಲಿ ಹಾಜಿಪುರದಲ್ಲಿ ಕೊಲ್ಲಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:51 pm, Sat, 5 July 25

ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್