AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್​ ಮನೆಯ ಸಿಸಿಟಿವಿ ಫೂಟೇಜ್​ ಖಾಲಿ ಖಾಲಿ, ಐಫೋನ್​ ಪಾಸ್​ವರ್ಡ್​ ಕೊಡುತ್ತಿಲ್ಲ ವಿಭವ್

ಸ್ವಾತಿ ಮಲಿವಾಲ್ ಅವರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿದ್ದ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಅಲ್ಲದೆ, ವಿಭವ್​ನನ್ನು ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ, ವಿಭವ್ ತನ್ನ ಐಫೋನ್‌ನ ಪಾಸ್‌ವರ್ಡ್ ಅನ್ನು ಸಹ ಹೇಳುತ್ತಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್​ ಮನೆಯ ಸಿಸಿಟಿವಿ ಫೂಟೇಜ್​ ಖಾಲಿ ಖಾಲಿ, ಐಫೋನ್​ ಪಾಸ್​ವರ್ಡ್​ ಕೊಡುತ್ತಿಲ್ಲ ವಿಭವ್
ಸ್ವಾತಿ ಮಲಿವಾಲ್Image Credit source: Hindustan Times
ನಯನಾ ರಾಜೀವ್
|

Updated on: May 19, 2024 | 8:46 AM

Share

ಆಮ್​ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್(Swathi Maliwal) ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ನಿವಾಸದಲ್ಲಿ ನಡೆದ ಹಲ್ಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ಆಯಾಮವನ್ನು ಪಡೆದುಕೊಳ್ಳುತ್ತಿದೆ. ಒಂದು ಕಡೆ ತೀಸ್ ಹಜಾರಿ ನ್ಯಾಯಾಲಯವು ಪ್ರಕರಣದ ಆರೋಪಿ ವಿಭವ್ ಕುಮಾರ್ ಅವರನ್ನು ಐದು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಕಳುಹಿಸಿದೆ. ಇನ್ನೊಂದು ಕಡೆ ಕೇಜ್ರಿವಾಲ್ ನಿವಾಸದ ಸಿಸಿಟಿವಿ ದೃಶ್ಯಾವಳಿಗಳು ನಾಪತ್ತೆಯಾಗಿವೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಆಮ್​ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ವಿಭವ್ ಕುಮಾರ್ ಅವರನ್ನು ಪೊಲೀಸರು ಶನಿವಾರ ರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಭವ್ ಅವರನ್ನು ಅರುಣಾ ಅಸಫ್ ಅಲಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ದೆಹಲಿ ಪೊಲೀಸರು ಈ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ನಾವು ಡಿವಿಆರ್​ ಕೇಳಿದ್ದೇವೆ ಅದನ್ನು ಪೆನ್​ಡ್ರೈವ್​ನಲ್ಲಿ ನೀಡಲಾಗಿದೆ. ಅದರಲ್ಲಿ ದೃಶ್ಯಾವಳಿಗಳು ಖಾಲಿ ಇವೆ. ಪೊಲೀಸರಿಗೆ ಐಫೋನ್ ಕೊಟ್ಟಿದ್ದು ಆರೋಪಿ ಪಾಸ್​ವರ್ಡ್​ ಹೇಳುತ್ತಿಲ್ಲ, ಫೋನ್​ ಫಾರ್ಮ್ಯಾಟ್​ ಮಾಡಲಾಗಿದೆ.

ವಿಭವ್​ ಮೊದಲು ನನಗೆ ನಿರ್ದಯಿಯಾಗಿ ಹೊಡೆದರು, ಕಪಾಳಮೋಕ್ಷ ಮಾಡಿ ಒದ್ದರು ಎಂದು ಹೇಳಿದ್ದರು. ವಿಭವ್ ಕುಮಾರ್ ಅವರನ್ನು ಶನಿವಾರ ಇಲ್ಲಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಅಲ್ಲಿ ಪೊಲೀಸರು ಮಲಿವಾಲ್ ಮೇಲಿನ ದಾಳಿಯ ಹಿಂದಿನ ಕಾರಣದ ಬಗ್ಗೆ ವಿಚಾರಣೆ ನಡೆಸಲು ಅವರನ್ನು ಪೊಲೀಸ್​ ಕಸ್ಟಡಿಗೆ ನೀಡುವುದು ಅಗತ್ಯ ಎಂದು ವಾದಿಸಿದರು.

ಮತ್ತಷ್ಟು ಓದಿ: ಕೇಜ್ರಿವಾಲ್ ಮನೆಯ ಸ್ವಾತಿ ಮಲಿವಾಲ್ ಮತ್ತೊಂದು ವಿಡಿಯೋ ರಿಲೀಸ್; ನಿಜಕ್ಕೂ ಆ ದಿನ ನಡೆದಿದ್ದೇನು?

ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ವಿಭವ್ ಕುಮಾರ್ ಅವರ ಬಂಧನದ ಬಗ್ಗೆ ವಾದ ಮಂಡಿಸಿದರು. ಸಿಎಂ ನಿವಾಸದಲ್ಲಿ ಸಾಕ್ಷ್ಯ ನಾಶಪಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾವು ಸಿಸಿಟಿವಿಯ ಡಿವಿಆರ್ ಕೇಳಿದ್ದೆವು, ಪೆನ್ ಡ್ರೈವ್ ನಲ್ಲಿ ನೀಡಲಾಗಿದೆ ಎಂದು ಹೇಳಿದರು. ಫೂಟೇಜ್ ಖಾಲಿ ಕಂಡುಬಂದಿದೆ. ಪೊಲೀಸರಿಗೆ ಐಫೋನ್ ಕೊಟ್ಟಿದ್ದು, ಈಗ ಆರೋಪಿ ಪಾಸ್ ವರ್ಡ್ ಹೇಳುತ್ತಿಲ್ಲ. ಫೋನ್ ಅನ್ನು ಫಾರ್ಮ್ಯಾಟ್ ಮಾಡಲಾಗಿದೆ. ಆರೋಪಿಯು ಇಂದಿಗೂ ಘಟನೆ ನಡೆದ ಸ್ಥಳದಲ್ಲಿಯೇ ಇದ್ದ ಎಂದು ಪ್ರಾಸಿಕ್ಯೂಟರ್ ಹೇಳುತ್ತಾರೆ.

ಮತ್ತೊಂದೆಡೆ, ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಭವ್ ಕುಮಾರ್ ಪರ ವಕೀಲ ರಾಜೀವ್ ಮೋಹನ್ ಆರೋಪಿಸಿದ್ದಾರೆ. ಆಕೆಗೆ ನಿಜವಾಗಿಯೂ ದೇಹದಲ್ಲಿ ನೋವು ಇದ್ದಿದ್ದರೆ ಮಾಧ್ಯಮಗಳಲ್ಲಿ ಈ ಬಗ್ಗೆ ಹೇಳಿಕೆ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ