AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ
ಸಿಡಿಎಸ್ ಜನರಲ್ ಬಿಪಿನ್ ರಾವತ್
TV9 Web
| Edited By: |

Updated on:Dec 08, 2021 | 3:39 PM

Share

ದೆಹಲಿ: ಕುನೂರ್ ಬಳಿ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ. ಭಾರತೀಯ ವಾಯುಪಡೆಯು ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್​ ಖರೀದಿಸಿತ್ತು. ಹೀಗಾಗಿ ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದ ಸುದ್ದಿ ತಿಳಿದು ಆಘಾತವಾಯಿತು ಎಂದಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಅದರಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ. ಪತನಗೊಂಡ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸುರಕ್ಷೆಗಾಗಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದುರ್ಘಟನೆಯ ತನಿಖೆಗೆ ಆದೇಶಿಸಲಾಗುವುದು ಎಂಬ ವಾಯುಪಡೆಯ ಟ್ವೀಟ್​ ಅನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ. ಈ ವಿಚಾರಣೆಗಳು ಆಂತರಿಕವಾಗಿ ನಡೆಯಬೇಕು ಮತ್ತು Mi-17V5 ಹೆಲಿಕಾಪ್ಟರ್​ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ ಸುದ್ದಿ ಕೇಳಿ ಆಘಾತವಾಯಿತು ಎಂದು ಕೂ ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Published On - 3:38 pm, Wed, 8 December 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?