AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ
ಸಿಡಿಎಸ್ ಜನರಲ್ ಬಿಪಿನ್ ರಾವತ್
TV9 Web
| Edited By: |

Updated on:Dec 08, 2021 | 3:39 PM

Share

ದೆಹಲಿ: ಕುನೂರ್ ಬಳಿ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ. ಭಾರತೀಯ ವಾಯುಪಡೆಯು ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್​ ಖರೀದಿಸಿತ್ತು. ಹೀಗಾಗಿ ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದ ಸುದ್ದಿ ತಿಳಿದು ಆಘಾತವಾಯಿತು ಎಂದಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಅದರಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ. ಪತನಗೊಂಡ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸುರಕ್ಷೆಗಾಗಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದುರ್ಘಟನೆಯ ತನಿಖೆಗೆ ಆದೇಶಿಸಲಾಗುವುದು ಎಂಬ ವಾಯುಪಡೆಯ ಟ್ವೀಟ್​ ಅನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ. ಈ ವಿಚಾರಣೆಗಳು ಆಂತರಿಕವಾಗಿ ನಡೆಯಬೇಕು ಮತ್ತು Mi-17V5 ಹೆಲಿಕಾಪ್ಟರ್​ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ ಸುದ್ದಿ ಕೇಳಿ ಆಘಾತವಾಯಿತು ಎಂದು ಕೂ ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Published On - 3:38 pm, Wed, 8 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ