AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ
ಸಿಡಿಎಸ್ ಜನರಲ್ ಬಿಪಿನ್ ರಾವತ್
TV9 Web
| Edited By: |

Updated on:Dec 08, 2021 | 3:39 PM

Share

ದೆಹಲಿ: ಕುನೂರ್ ಬಳಿ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ. ಭಾರತೀಯ ವಾಯುಪಡೆಯು ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್​ ಖರೀದಿಸಿತ್ತು. ಹೀಗಾಗಿ ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದ ಸುದ್ದಿ ತಿಳಿದು ಆಘಾತವಾಯಿತು ಎಂದಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಅದರಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ. ಪತನಗೊಂಡ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸುರಕ್ಷೆಗಾಗಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದುರ್ಘಟನೆಯ ತನಿಖೆಗೆ ಆದೇಶಿಸಲಾಗುವುದು ಎಂಬ ವಾಯುಪಡೆಯ ಟ್ವೀಟ್​ ಅನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ. ಈ ವಿಚಾರಣೆಗಳು ಆಂತರಿಕವಾಗಿ ನಡೆಯಬೇಕು ಮತ್ತು Mi-17V5 ಹೆಲಿಕಾಪ್ಟರ್​ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ ಸುದ್ದಿ ಕೇಳಿ ಆಘಾತವಾಯಿತು ಎಂದು ಕೂ ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Published On - 3:38 pm, Wed, 8 December 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ