AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ
ಸಿಡಿಎಸ್ ಜನರಲ್ ಬಿಪಿನ್ ರಾವತ್
TV9 Web
| Edited By: |

Updated on:Dec 08, 2021 | 3:39 PM

Share

ದೆಹಲಿ: ಕುನೂರ್ ಬಳಿ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ. ಭಾರತೀಯ ವಾಯುಪಡೆಯು ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್​ ಖರೀದಿಸಿತ್ತು. ಹೀಗಾಗಿ ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದ ಸುದ್ದಿ ತಿಳಿದು ಆಘಾತವಾಯಿತು ಎಂದಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಅದರಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ. ಪತನಗೊಂಡ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸುರಕ್ಷೆಗಾಗಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದುರ್ಘಟನೆಯ ತನಿಖೆಗೆ ಆದೇಶಿಸಲಾಗುವುದು ಎಂಬ ವಾಯುಪಡೆಯ ಟ್ವೀಟ್​ ಅನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ. ಈ ವಿಚಾರಣೆಗಳು ಆಂತರಿಕವಾಗಿ ನಡೆಯಬೇಕು ಮತ್ತು Mi-17V5 ಹೆಲಿಕಾಪ್ಟರ್​ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ ಸುದ್ದಿ ಕೇಳಿ ಆಘಾತವಾಯಿತು ಎಂದು ಕೂ ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Published On - 3:38 pm, Wed, 8 December 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ