AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ
ಸಿಡಿಎಸ್ ಜನರಲ್ ಬಿಪಿನ್ ರಾವತ್
TV9 Web
| Edited By: |

Updated on:Dec 08, 2021 | 3:39 PM

Share

ದೆಹಲಿ: ಕುನೂರ್ ಬಳಿ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ. ಭಾರತೀಯ ವಾಯುಪಡೆಯು ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್​ ಖರೀದಿಸಿತ್ತು. ಹೀಗಾಗಿ ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದ ಸುದ್ದಿ ತಿಳಿದು ಆಘಾತವಾಯಿತು ಎಂದಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಅದರಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ. ಪತನಗೊಂಡ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸುರಕ್ಷೆಗಾಗಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದುರ್ಘಟನೆಯ ತನಿಖೆಗೆ ಆದೇಶಿಸಲಾಗುವುದು ಎಂಬ ವಾಯುಪಡೆಯ ಟ್ವೀಟ್​ ಅನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ. ಈ ವಿಚಾರಣೆಗಳು ಆಂತರಿಕವಾಗಿ ನಡೆಯಬೇಕು ಮತ್ತು Mi-17V5 ಹೆಲಿಕಾಪ್ಟರ್​ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ ಸುದ್ದಿ ಕೇಳಿ ಆಘಾತವಾಯಿತು ಎಂದು ಕೂ ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Published On - 3:38 pm, Wed, 8 December 21

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?