CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 08, 2021 | 3:39 PM

ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

CDS Bipin Rawat: ಸಿಡಿಎಸ್ ಬಿಪಿನ್ ರಾವತ್ ಸುರಕ್ಷೆಗಾಗಿ ಗಣ್ಯರ ಪ್ರಾರ್ಥನೆ: ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಗೆ ಒಳಪಡಿಸಲು ಕಾಂಗ್ರೆಸ್ ಆಗ್ರಹ
ಸಿಡಿಎಸ್ ಜನರಲ್ ಬಿಪಿನ್ ರಾವತ್
Follow us on

ದೆಹಲಿ: ಕುನೂರ್ ಬಳಿ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದಾರೆ. ಅವರು ಶೀಘ್ರ ಗುಣಮುಖರಾಗಬೇಕು ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ. ಭಾರತೀಯ ವಾಯುಪಡೆಯು ಇತ್ತೀಚೆಗಷ್ಟೇ ಈ ಹೆಲಿಕಾಪ್ಟರ್​ ಖರೀದಿಸಿತ್ತು. ಹೀಗಾಗಿ ಹೆಲಿಕಾಪ್ಟರ್ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತದ ಸುದ್ದಿ ತಿಳಿದು ಆಘಾತವಾಯಿತು ಎಂದಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಅದರಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುವೆ ಎಂದಿದ್ದಾರೆ. ಪತನಗೊಂಡ ಹೆಲಿಕಾಪ್ಟರ್​ನಲ್ಲಿದ್ದ ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸುರಕ್ಷೆಗಾಗಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ದುರ್ಘಟನೆಯ ತನಿಖೆಗೆ ಆದೇಶಿಸಲಾಗುವುದು ಎಂಬ ವಾಯುಪಡೆಯ ಟ್ವೀಟ್​ ಅನ್ನು ರಿಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಈ ಹೆಲಿಕಾಪ್ಟರ್​ಗಳನ್ನು ಇತ್ತೀಚೆಗಷ್ಟೇ ಖರೀದಿಸಲಾಗಿತ್ತು. ಹೀಗಾಗಿ ಸಮರ್ಪಕ ತನಿಖೆ ಮತ್ತು ವಿಚಾರಣೆಗಳು ನಡೆಯಬೇಕಿದೆ. ಈ ವಿಚಾರಣೆಗಳು ಆಂತರಿಕವಾಗಿ ನಡೆಯಬೇಕು ಮತ್ತು Mi-17V5 ಹೆಲಿಕಾಪ್ಟರ್​ ತಯಾರಕರನ್ನೂ ತನಿಖೆಯ ಭಾಗವಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಪತನ ಸುದ್ದಿ ಕೇಳಿ ಆಘಾತವಾಯಿತು ಎಂದು ಕೂ ಸಾಮಾಜಿಕ ಮಾಧ್ಯಮದಲ್ಲಿ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Published On - 3:38 pm, Wed, 8 December 21