AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ

Bipin Rawat: ಅದರಲ್ಲೂ ಈಗ ಸಿಡಿಎಸ್​ ಜನರಲ್​ ಬಿಪಿನ್​ ರಾವತ್​​ರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕಿದೆ. ಸದ್ಯ ಮೂಲಗಳ ಪ್ರಕಾರ ಬಿಪಿನ್​ ರಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Tamil Nadu Chopper Crash: ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್ ರಾವತ್ ಪತ್ನಿ ದುರ್ಮರಣ; ರಾವತ್ ಸ್ಥಿತಿ ಗಂಭೀರ
ಬಿಪಿನ್ ರಾವತ್​ ಮತ್ತು ಅವರ ಪತ್ನಿ ಮಧುಲಿಕಾ ರಾವತ್​
TV9 Web
| Edited By: |

Updated on:Dec 08, 2021 | 3:54 PM

Share

ಇಂದು ತಮಿಳುನಾಡಿನ ಕುನೂರ್​ ಬಳಿ Mi-17V5 ಸೇನಾ ಹೆಲಿಕಾಪ್ಟರ್​ ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಿಡಿಎಸ್​ ಜನರಲ್​ ಬಿಪಿನ್​ ರಾವತ್​ ಪತ್ನಿ ಮಧುಲಿಕಾ ರಾವತ್ ಸೇರಿ 5 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇನ್ನು ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಒಟ್ಟಾರೆ ಇದರಲ್ಲಿ 14 ಜನ ಇದ್ದರು ಎಂದು ಮೂಲಗಳು ತಿಳಿಸಿವೆ. ಅದರಲ್ಲೀಗ 5 ಮಂದಿಯ ಮೃತದೇಹ ಪತ್ತೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದರೂ, ಇನ್ನೂ ಮೃತರು ಯಾರ್ಯಾರು? ಗಾಯಗೊಂಡವರು ಯಾರು ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.

ಅದರಲ್ಲೂ ಈಗ ಸಿಡಿಎಸ್​ ಜನರಲ್​ ಬಿಪಿನ್​ ರಾವತ್​​ರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕಿದೆ. ಸದ್ಯ ಮೂಲಗಳ ಪ್ರಕಾರ ಬಿಪಿನ್​ ರಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಇನ್ನು ಸೇನಾ ವಿಮಾನ ಪತನವಾಗಿದ್ದು ನೀಲಗಿರಿ ಬೆಟ್ಟ ಪ್ರದೇಶದಲ್ಲಿ ಆಗಿದ್ದರಿಂದ ರಕ್ಷಣಾ ಕಾರ್ಯಾಚರಣೆಯೂ ತುಸು ತೊಡಕಾಗಿದೆ. ಸ್ಥಳೀಯರ ಸಹಾಯದಿಂದ ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಮತ್ತು ಮೃತರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ಕಳಿಸಲಾಗಿದೆ. ತಮಿಳುನಾಡು ಸರ್ಕಾರದ ಉನ್ನತ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಕೂಡ ಅಪಘಾತವಾದ ಸ್ಥಳಕ್ಕೆ ಧಾವಿಸಿದ್ದಾರೆ.  ಅಂದಹಾಗೆ ಈ ಹೆಲಿಕಾಪ್ಟರ್​ ದೆಹಲಿಯಿಂದ ಸುಲುರ್​ಗೆ ಹೊರಟಿತ್ತು ಎಂದು ಮಾಹಿತಿ ಲಭ್ಯವಾಗಿದೆ.

ರಾಹುಲ್ ಗಾಂಧಿ ಟ್ವೀಟ್ ಮಿಲಿಟರಿ ವಿಮಾನ ಪತನದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಸಿಡಿಎಸ್​ ಬಿಪಿನ್ ರಾವತ್​, ಅವರ ಪತ್ನಿ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇನ್ನಿತರ ಸಿಬ್ಬಂದಿ ಸುರಕ್ಷಿತವಾಗಿರಲಿ ಎಂದು ಆಶಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕೇಂದ್ರ ಸಚಿವ ನಿತಿನ್​ ಗಡ್ಕರಿ ಟ್ವೀಟ್ ಮಾಡಿದ್ದು, ಈ ಹೆಲಿಕಾಪ್ಟರ್​ ಪತನದಿಂದ ಶಾಕ್​ ಆಗಿದೆ. ಎಲ್ಲರೂ ಬದುಕಿ ಬರಲಿ, ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಗಾಗಲೇ ತಮಿಳುನಾಡಿಗೆ ಹೊರಟಿದ್ದಾರೆ.

ಇದನ್ನೂ ಓದಿ: CDS Bipin Rawat: ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ: ಪ್ರಧಾನಿ ಮೋದಿ ಹಾಗೂ ಸಂಸತ್​ಗೆ ರಾಜನಾಥ್ ಸಿಂಗ್ ವಿವರ

Published On - 3:01 pm, Wed, 8 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ