48 ಗಂಟೆಯಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುವುದಾಗಿ ಹೇಳಿ 8 ಗಂಟೆಯಲ್ಲೇ ಮಣ್ಣು ಮುಕ್ಕಿದ್ದ ಪಾಕಿಸ್ತಾನ

ಪಾಕಿಸ್ತಾನ(Pakistan)ವು 48 ಗಂಟೆಗಳಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುತ್ತೇವೆ ಎಂದು ಹೇಳಿ 8 ಗಂಟೆಗಳಲ್ಲೇ ಮಣ್ಣು ಮುಕ್ಕಿದೆ. ಈ ಕುರಿತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ( ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದ ಐದು ನಿಮಿಷಗಳ ನಂತರ ಭಾರತ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂದು ಅವರು ಹೇಳಿದ್ದಾರೆ. ಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನಕ್ಕೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಸರ್ಕಾರ ಅಪರಾಧ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

48 ಗಂಟೆಯಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುವುದಾಗಿ ಹೇಳಿ 8 ಗಂಟೆಯಲ್ಲೇ ಮಣ್ಣು ಮುಕ್ಕಿದ್ದ ಪಾಕಿಸ್ತಾನ
ಅನಿಲ್ ಚೌಹಾಣ್

Updated on: Jun 05, 2025 | 9:21 AM

ನವದೆಹಲಿ, ಜೂನ್ 05: ಪಾಕಿಸ್ತಾನ(Pakistan)ವು 48 ಗಂಟೆಗಳಲ್ಲಿ ಭಾರತವನ್ನು ಮಂಡಿಯೂರುವಂತೆ ಮಾಡುತ್ತೇವೆ ಎಂದು ಹೇಳಿ 8 ಗಂಟೆಗಳಲ್ಲೇ ಮಣ್ಣು ಮುಕ್ಕಿತ್ತು. ಈ ಕುರಿತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ( ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದ ಐದು ನಿಮಿಷಗಳ ನಂತರ ಭಾರತ ಪಾಕಿಸ್ತಾನಕ್ಕೆ ಮಾಹಿತಿ ನೀಡಿತ್ತು ಎಂದು ಅವರು ಹೇಳಿದ್ದಾರೆ. ಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನಕ್ಕೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ಸರ್ಕಾರ ಅಪರಾಧ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಡಿಎಸ್ ಈ ಮಾಹಿತಿ ನೀಡಿದ್ದಾರೆ.

ಮೇ 7 ರಂದು ಆಪರೇಷನ್ ಸಿಂಧೂರ್ ಅಡಿಯಲ್ಲಿ ದಾಳಿ ನಡೆಸಿದ ದಿನದಂದು ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂದು ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ. ದಾಳಿಯನ್ನು ಬೆಳಗಿನ ಜಾವ 1 ರಿಂದ 1.30 ರ ನಡುವೆ ನಡೆಸಲಾಗಿದೆ ಎಂದು ಅವರು ಹೇಳಿದರು. ಕಾರ್ಯಾಚರಣೆ ಮುಗಿದ ಐದು ನಿಮಿಷಗಳ ನಂತರ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಕಿಸ್ತಾನಕ್ಕೆ ಫೋನ್ ಮೂಲಕ ತಿಳಿಸಲಾಯಿತು.

ಗಡಿಯಾಚೆಗಿನ ದಾಳಿಯ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ತೀವ್ರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿದವು ಎಂದು ಜನರಲ್ ಚೌಹಾಣ್ ಹೇಳಿದರು. ಅವರು ಭಯೋತ್ಪಾದಕ ಅಡಗುತಾಣಗಳನ್ನು ಮಾತ್ರ ಗುರಿಯಾಗಿಸಿಕೊಂಡರು ಮತ್ತು ನಾಗರಿಕ ಪ್ರದೇಶಗಳು ಅಥವಾ ಮಿಲಿಟರಿ ನೆಲೆಗಳನ್ನು ತಪ್ಪಿಸಲಾಗಿತ್ತು.

ಇದನ್ನೂ ಓದಿ
ವಿಮಾನಕ್ಕೆ ಹದ್ದು ಡಿಕ್ಕಿಯಾಗಿ ತುರ್ತು ಭೂಸ್ಪರ್ಶ; 175 ಪ್ರಯಾಣಿಕರು ಪಾರು
ರಷ್ಯಾದಿಂದ ಬಾಕಿ ಎಸ್-400 ಕ್ಷಿಪಣಿ ವ್ಯವಸ್ಥೆಗಳು ಭಾರತಕ್ಕೆ 2026ಕ್ಕೆ ಲಭ್ಯ
ಉಕ್ರೇನ್‌ ಡ್ರೋನ್ ದಾಳಿಯಲ್ಲಿ ಯುದ್ಧ ವಿಮಾನ ಪತನದ ಬಗ್ಗೆ ಮೌನ ಮುರಿದ ರಷ್ಯಾ
ಪಾಕಿಸ್ತಾನ ಭಿಕ್ಷಾ ಪಾತ್ರೆ ಹಿಡಿದು ದೇಶಗಳ ಸುತ್ತುತ್ತಿದೆ

ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂದು ಮಾಹಿತಿ ನೀಡಿದ್ದ ಕೆಲವೇ ದಿನಗಳಲ್ಲಿ ಆಗಿರುವ ನಷ್ಟ ಮುಖ್ಯವಲ್ಲ, ಫಲಿತಾಂಶವಷ್ಟೇ ಮುಖ್ಯ ಎಂದು ಸಿಡಿಎಸ್ ಹೇಳಿದ್ದಾರೆ. ಯುದ್ಧದಲ್ಲಿ, ಹಿನ್ನಡೆಗಳಿದ್ದರೂ ಸಹ ನೈತಿಕತೆಯು ಉನ್ನತ ಮಟ್ಟದಲ್ಲಿರುವುದು ಮುಖ್ಯ.

ಮತ್ತಷ್ಟು ಓದಿ: ನಷ್ಟ ಎಷ್ಟಾಯ್ತು ಎಂಬುದಕ್ಕಿಂತ ಫಲಿತಾಂಶ ಮುಖ್ಯ; ಆಪರೇಷನ್ ಸಿಂಧೂರ್ ಕುರಿತು ಸಿಡಿಎಸ್ ಅನಿಲ್ ಚೌಹಾಣ್

ಕಳೆದ ವಾರ, ಪಾಕಿಸ್ತಾನ ಮತ್ತು ಪೋಕ್‌ನಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ದಾಳಿ ಮಾಡುವಾಗ ಭಾರತವು ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿತು ಮತ್ತು ಅದರ ಪರಿಣಾಮವಾಗಿ ಮೇ 7 ರಂದು ಪ್ರತೀಕಾರ ತೀರಿಸಿಕೊಂಡಿತು ಎಂದು ಚೌಹಾಣ್ ಹೇಳಿಕೊಂಡಿದ್ದರು. ದೇಶವು ಭಯೋತ್ಪಾದನೆ ಮತ್ತು ಪರಮಾಣು ಬೆದರಿಕೆಯ ನೆರಳಿನಲ್ಲಿ ಬದುಕುವುದಿಲ್ಲ.

ಪಹಲ್ಗಾಮ್‌ನಲ್ಲಿ ತೀವ್ರ ಕ್ರೌರ್ಯ ನಡೆದಿತ್ತು. ಆಪರೇಷನ್ ಸಿಂಧೂರ್‌ನ ಹಿಂದಿನ ಉದ್ದೇಶ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸುವುದಾಗಿತ್ತು. ಯುದ್ಧದಲ್ಲಿ, ಫಲಿತಾಂಶಗಳು ಮುಖ್ಯ, ನಷ್ಟಗಳಲ್ಲ. ಭಾರತದ ಡ್ರೋನ್ ಸಾಮರ್ಥ್ಯ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ.

ಪಾಕಿಸ್ತಾನದ ಗುರಿ 48 ಗಂಟೆಗಳಲ್ಲಿ ಭಾರತಕ್ಕೆ ಭಾರೀ ಹಾನಿಯನ್ನುಂಟುಮಾಡುವುದಾಗಿತ್ತು. ಗಡಿಯಾಚೆಯಿಂದ ಅನೇಕ ದಾಳಿಗಳನ್ನು ನಡೆಸಲಾಯಿತು. ಪಾಕಿಸ್ತಾನ ಈ ಸಂಘರ್ಷವನ್ನು ಹೆಚ್ಚಿಸಿತು. ನಾವು ಭಯೋತ್ಪಾದಕ ಅಡಗುತಾಣಗಳನ್ನು ಮಾತ್ರ ಗುರಿಯಾಗಿಸಿಕೊಂಡಿದ್ದೆವ ಎಂದಿದ್ದಾರೆ. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪಾಕಿಸ್ತಾನ ಮೂಲದ ಉಗ್ರರು ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:21 am, Thu, 5 June 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us