AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS chopper crash: ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಅಪಘಾತಕ್ಕೆ ಕೆಟ್ಟ ಹವಾಮಾನ ಕಾರಣ ಸಾಧ್ಯತೆ

ಸಶಸ್ತ್ರ ಪಡೆಗಳಲ್ಲಿ ದೇಶದ ಉನ್ನತ ಹೆಲಿಕಾಪ್ಟರ್ ಪೈಲಟ್ ಆಗಿರುವ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತ್ರಿ-ಸೇವಾ ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯದ ವಿಚಾರಣೆಯನ್ನು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ವಹಿಸಿದ್ದರು.

CDS chopper crash: ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಅಪಘಾತಕ್ಕೆ ಕೆಟ್ಟ ಹವಾಮಾನ ಕಾರಣ ಸಾಧ್ಯತೆ
ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ದುರಂತ ಘಟನಾ ಸ್ಥಳದ ದೃಶ್ಯಗಳು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 02, 2022 | 5:14 PM

Share

ದೆಹಲಿ: ಕಳೆದ ತಿಂಗಳು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter crash in Tamil Nadu) ದೇಶದ ಮೊದಲ ರಕ್ಷಣಾ ಸಿಬ್ಬಂದಿ ಜನರಲ್ ಬಿಪಿನ್ ರಾವತ್ (General Bipin Rawat) ಮತ್ತು ಇತರ 13 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಅಂತಿಮ ವರದಿಯನ್ನು ಜನವರಿಯಲ್ಲಿ ವಾಯುಪಡೆ ಮುಖ್ಯಸ್ಥರಿಗೆ ಸಲ್ಲಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಇದುವರೆಗೆ ತನಿಖೆಯ ಕುರಿತು ವಾಯುಪಡೆಯಿಂದ (Air Force) ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಸಂಭವನೀಯ ಕಾರಣವು ಮಾನವ ಅಥವಾ ತಾಂತ್ರಿಕ ದೋಷವಲ್ಲ. ಆದರೆ ಪೈಲಟ್ ಉದ್ದೇಶಪೂರ್ವಕ ಅಲ್ಲದೆ ಮೇಲ್ಮೈಗೆ ಹೊಡೆದಾಗ ಅದನ್ನು  ಸಿಎಫ್ಐ​ಟಿ(CFIT-Controlled Flight into Terrain) ಎಂದು ಕರೆಯಲಾಗುತ್ತದೆ ಎಂದು ಮೂಲಗಳು ಸೂಚಿಸಿವೆ. CFIT ಎಂದರೆ ಹೆಲಿಕಾಪ್ಟರ್ ಹಾರಾಟಕ್ಕೆ ಯೋಗ್ಯವಾಗಿತ್ತು ಮತ್ತು ಪೈಲಟ್ ತಪ್ಪಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಕೂನೂರು ಪ್ರದೇಶದಲ್ಲಿ ಕೆಟ್ಟ ಹವಾಮಾನದಿಂದಾಗಿ ಗೋಚರತೆ ಕಡಿಮೆಯಾಗಿದೆ. ಇದು ಒಂದು ಕಾರಣವಾಗಿರಬಹುದು ಎಂದು ಅವರು ಹೇಳಿದರು. ಜಾಗತಿಕವಾಗಿ ವಿಮಾನ ಅಪಘಾತಗಳಿಗೆ CIFT ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಅಂತಿಮ ವರದಿಯು ಅಪಘಾತದ ವಿವರಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ದೇಶದ ಉನ್ನತ ಹೆಲಿಕಾಪ್ಟರ್ ಪೈಲಟ್ ಆಗಿರುವ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತ್ರಿ-ಸೇವಾ ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯದ ವಿಚಾರಣೆಯನ್ನು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ವಹಿಸಿದ್ದರು. ಸಲ್ಲಿಸುವ ಮೊದಲು, ತನಿಖೆಯಲ್ಲಿ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಸಂಶೋಧನೆಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುತ್ತದೆ.

ಅಪಘಾತದ ನಂತರ ಹೆಲಿಕಾಪ್ಟರ್‌ನ ಬ್ಲಾಕ್ ಬಾಕ್ಸ್ ಪತ್ತೆ ಹಚ್ಚಲಾಗಿತ್ತು. ಫ್ಲೈಟ್ ಡೇಟಾ ರೆಕಾರ್ಡರ್ (ಎಫ್‌ಡಿಆರ್) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್)ನ್ನೂ ತನಿಖೆಗೆ ಒಳಪಡಿಸಲಾಗಿತ್ತು. ಬಿಪಿನ್ ರಾವತ್, ಅವರ ಪತ್ನಿ ಮತ್ತು ಹನ್ನೆರಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ವಾಯುಪಡೆಯ Mi-17v5 ಹೆಲಿಕಾಪ್ಟರ್‌ನಲ್ಲಿ 13 ಇತರರು ಸಂಚರಿಸಿದ್ದ ಹೆಲಿಕಾಪ್ಟರ್ ಡಿಸೆಂಬರ್ 8 ರಂದು ಪ್ರತಿಕೂಲ ಹವಾಮಾನದ ನಡುವೆ ಇಳಿಯುತ್ತಿದ್ದಾಗ ಪತನಗೊಂಡಿತ್ತು. ಜನರಲ್ ರಾವತ್ ಅವರು ವೆಲ್ಲಿಂಗ್ಟನ್‌ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿಗೆ ತೆರಳುತ್ತಿದ್ದರು.

ಡಿಸೆಂಬರ್ 9 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ಬೆಳಿಗ್ಗೆ 11.48 ಕ್ಕೆ ಟೇಕಾಫ್ ಆಗಿದ್ದು, ಮಧ್ಯಾಹ್ನ 12.15 ರ ವೇಳೆಗೆ ವೆಲ್ಲಿಂಗ್ಟನ್‌ಗೆ ಇಳಿಯುವ ನಿರೀಕ್ಷೆಯಿತ್ತು ಎಂದು ಸಂಸತ್ ಗೆ ಮಾಹಿತಿ ನೀಡಿದ್ದರು. ಸೂಲೂರು ವಾಯುನೆಲೆಯಲ್ಲಿನ ಏರ್ ಟ್ರಾಫಿಕ್ ಕಂಟ್ರೋಲ್ 12.08 ರ ಸುಮಾರಿಗೆ ಹೆಲಿಕಾಪ್ಟರ್ ಸಂಪರ್ಕ ಕಳೆದುಕೊಂಡಿತು. ಸ್ಥಳೀಯ ನಿವಾಸಿಗಳು ಕೂನೂರು ಬಳಿಯ ಕಾಡಿನಲ್ಲಿ ಬೆಂಕಿಯನ್ನು ಗಮನಿಸಿದರು ಮತ್ತು ಅವರು ಸ್ಥಳಕ್ಕೆ ಧಾವಿಸಿದಾಗ ಅವರು ಉರಿಯುತ್ತಿರುವ ಹೆಲಿಕಾಪ್ಟರ್‌ನ ಅವಶೇಷಗಳನ್ನು ವೀಕ್ಷಿಸಿದರು ಎಂದು ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:  ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ತನಿಖೆ ಪೂರ್ಣ; ಅಪಘಾತಕ್ಕೆ ಸಿಎಫ್ಐಟಿ ಕಾರಣ ಎಂದ ತನಿಖಾ ತಂಡ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ