CDS Bipin Rawat ಬಿಪಿನ್ ರಾವತ್ ಅಂತ್ಯ ಸಂಸ್ಕಾರ ಇಂದು; ಉಳಿದ 10 ಸೇನಾ ಸಿಬ್ಬಂದಿ‌ ಗುರುತು ಪತ್ತೆ ಬಳಿಕ ಮೃತದೇಹಗಳ ಹಸ್ತಾಂತರ

ರಾಷ್ಟ್ರದ ಅತ್ಯಂತ ಹಿರಿಯ ಸೇನಾಧಿಕಾರಿ ಜನರಲ್ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಶುಕ್ರವಾರ ಮಧ್ಯಾಹ್ನ ನಡೆಯಲಿದೆ.

CDS Bipin Rawat ಬಿಪಿನ್ ರಾವತ್ ಅಂತ್ಯ ಸಂಸ್ಕಾರ ಇಂದು; ಉಳಿದ 10 ಸೇನಾ ಸಿಬ್ಬಂದಿ‌ ಗುರುತು ಪತ್ತೆ ಬಳಿಕ ಮೃತದೇಹಗಳ ಹಸ್ತಾಂತರ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Dec 10, 2021 | 10:47 AM

ದೆಹಲಿ: ತಮಿಳುನಾಡಿನ ಕೂನೂರ್(Coonoor) ಬಳಿ ಬುಧವಾರ ನಡೆದ ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ (IAF helicopter crash) ಮಧುಲಿಕಾ ರಾವತ್  ಮತ್ತು 11 ಸಶಸ್ತ್ರ ಪಡೆಗಳ ಸಿಬ್ಬಂದಿಯೊಂದಿಗೆ ಹುತಾತ್ಮರಾದ ಸಿಡಿಎಸ್ ಜನರಲ್ ಬಿಪಿನ್ ರಾವತ್(Chief of Defence Staff General Bipin Rawat) ಅವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಶುಕ್ರವಾರ ಮಧ್ಯಾಹ್ನ ನಡೆಯಲಿದೆ. ಅಪಘಾತದಲ್ಲಿ ಮಡಿದವರ ಮೃತದೇಹಗಳನ್ನು ಗುರುವಾರ ಸಂಜೆ ಕೊಯಮತ್ತೂರು ಬಳಿಯ ಸೂಲೂರಿನಿಂದ ಪಾಲಮ್ ವಾಯುನೆಲೆಗೆ  (Palam air base)ತರಲಾಗಿತ್ತು. ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 13 ಶವಪೆಟ್ಟಿಗೆಗಳಿಗೆ ಮಾಲಾರ್ಪಣೆ ಮತ್ತು ಹೂದಳಗಳನ್ನು ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಮೂರು ಸೇನಾಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಜನರಲ್ ರಾವತ್ ಅವರ ಪುತ್ರಿಯರು ಮತ್ತು ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್ ಅವರ ಪತ್ನಿ, ಮಗಳು ಮತ್ತು ಕುಟಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅಗಲಿದವರಿಗೆ ನಾನು ಗೌರವ ಸಲ್ಲಿಸಿದ್ದೇನೆ. ಭಾರತವು ಅವರ ಕೊಡುಗೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಬ್ರಿಗೇಡಿಯರ್ ಲಿಡ್ಡರ್ ಪಾರ್ಥಿವ ಶರೀರವನ್ನು ಇಲ್ಲಿಯವರೆಗೆ ಗುರುತಿಸಲಾಗಿದ್ದು, ಅವರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಸೇನೆ ತಿಳಿಸಿದೆ. ಉಳಿದ 10 ಮಂದಿಯ ಮೃತದೇಹಗಳನ್ನು ಗುರುತಿಸುವ ವರೆಗೆ ಸೇನಾನೆಲೆಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗುವುದು. ನಂತರ ಮೃತದೇಹಗಳನ್ನು ಅವರ ಕುಟುಂಬಗಳಿಗೆ ಅಂತಿಮ ವಿಧಿವಿಧಾನಗಳಿಗಾಗಿ ಹಸ್ತಾಂತರಿಸಲಾಗುವುದು.

ವೈಜ್ಞಾನಿಕ ಕ್ರಮಗಳ ಜೊತೆಗೆ ಸಕಾರಾತ್ಮಕ ಗುರುತಿಸುವಿಕೆಗಾಗಿ ನಿಕಟ ಕುಟುಂಬ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಲಾಗುವುದು. ಸಕಾರಾತ್ಮಕ ಗುರುತಿನ ನಂತರವೇ ಮೃತದೇಹಗಳನ್ನು  ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಅದು ಹೇಳಿದೆ. ಇದಕ್ಕೂ ಮೊದಲು 13 ಮಂದಿಯ ಪಾರ್ಥಿವ ಶರೀರವನ್ನು ವೆಲ್ಲಿಂಗ್ಟನ್‌ನಿಂದ ಸುಲೂರ್ ಏರ್ ಫೋರ್ಸ್ ಸ್ಟೇಷನ್‌ಗೆ ರಸ್ತೆ ಮೂಲಕ ಕೊಂಡೊಯ್ಯಲಾಯಿತು. ಸೂಲೂರಿನಿಂದ ಅವರನ್ನು ಸಿ-17 ಗ್ಲೋಬ್‌ಮಾಸ್ಟರ್‌ನಲ್ಲಿ ದೆಹಲಿಗೆ ತರಲಾಯಿತು.

ಇದನ್ನೂ ಓದಿ: CDS Bipin Rawat: ಸಿಡಿಎಸ್ ಬಿಪಿನ್ ರಾವತ್, ಇತರರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರಿಂದ ಅಂತಿಮ ನಮನ

Published On - 10:28 am, Fri, 10 December 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್