AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?

CDSCOನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡಿಸಿಜಿಐಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:31 PM

Share

ದೆಹಲಿ: ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡುವ ಬಗ್ಗೆ ನಾಳೆ (ಡಿ.9) ದೆಹಲಿಯಲ್ಲಿ ಸಭೆ ನಡೆಯಲಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (CDSCO) ಸಭೆಯಲ್ಲಿ ತಜ್ಞರ ಸಮಿತಿ ಪಾಲ್ಗೊಳ್ಳಲಿದೆ. ಕೊವಿಡ್ ಲಸಿಕೆ ತಯಾರಿಕಾ ಔಷಧ ಕಂಪನಿಗಳು ಸಲ್ಲಿಸಿರುವ ಅರ್ಜಿಯ ಬಗ್ಗೆ ಪರಿಶೀಲನೆ ನಡೆಯಲಿದೆ.

CDSCO ನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ. ಆದ್ದರಿಂದ, ನಾಳೆಯ ಸಭೆಯು ವಿಶೇಷ ಮಹತ್ವ ಪಡೆದುಕೊಂಡಿದೆ.

ತಜ್ಞರ ಸಮಿತಿಯಿಂದ ಲಸಿಕೆಯ ಪರಿಶೀಲನೆ ಸಂಸ್ಥೆಯ ತಜ್ಞರು ಫೈಝರ್, ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿ ಲಸಿಕೆಗಳ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ರೋಗ ನಿರೋಧಕ ಶಕ್ತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ತುರ್ತು ಬಳಕೆಗೆ ಅನುಮತಿ ಕೋರಿರುವ ಮೂರು ಲಸಿಕೆಗಳ ಬಗ್ಗೆ ತಜ್ಞರ ಸಮಿತಿ ಪರಿಶೀಲನೆ ನಡೆಸಲಿದ್ದು, ಲಸಿಕೆಯನ್ನು ಬಳಕೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ನಂತರ ಡಿಸಿಜಿಐಗೆ ಶಿಫಾರಸು ಮಾಡಲಿದೆ.

ಸೆರಮ್ ಸಂಸ್ಥೆಯ ಲಸಿಕೆ ಸಿಗಬಹುದಾ? ಸೆರಮ್ ಸಂಸ್ಥೆಯಿಂದ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಜೊತೆಗೆ ಒಪ್ಪಂದ ಆಗಿದ್ದು, ಅದರಂತೆ, ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆಯನ್ನು ಭಾರತದಲ್ಲಿ ಸೆರಮ್ ಸಂಸ್ಥೆ ಉತ್ಪಾದಿಸಲಿದೆ. ಆದರೆ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆ ಬಳಕೆಗೆ ಇಂಗ್ಲೆಂಡ್​ನಲ್ಲಿ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ಭಾರತದಲ್ಲಿ ಈಗಲೇ ಆಕ್ಸ್‌ಫರ್ಡ್ ವಿವಿ ಲಸಿಕೆಗೆ ಅನುಮತಿ ದೊರಕುವುದು ಕಷ್ಟ ಎಂಬ ಅಭಿಪ್ರಾಯವಿದೆ.

ಫೈಝರ್ ಲಸಿಕೆ ತುರ್ತು ಬಳಕೆಗೆ ಲಭ್ಯವಾಗುತ್ತಾ? ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಇನ್ನೂ 3ನೇ ಹಂತದ ಪ್ರಯೋಗದಲ್ಲಿದೆ. ಫೈಝರ್ ಕಂಪನಿಯ ಲಸಿಕೆಯನ್ನು ತುರ್ತು ಬಳಕೆಗೆ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆ.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ

Published On - 9:37 pm, Tue, 8 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ