AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?

CDSCOನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡಿಸಿಜಿಐಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 07, 2022 | 5:31 PM

Share

ದೆಹಲಿ: ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡುವ ಬಗ್ಗೆ ನಾಳೆ (ಡಿ.9) ದೆಹಲಿಯಲ್ಲಿ ಸಭೆ ನಡೆಯಲಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (CDSCO) ಸಭೆಯಲ್ಲಿ ತಜ್ಞರ ಸಮಿತಿ ಪಾಲ್ಗೊಳ್ಳಲಿದೆ. ಕೊವಿಡ್ ಲಸಿಕೆ ತಯಾರಿಕಾ ಔಷಧ ಕಂಪನಿಗಳು ಸಲ್ಲಿಸಿರುವ ಅರ್ಜಿಯ ಬಗ್ಗೆ ಪರಿಶೀಲನೆ ನಡೆಯಲಿದೆ.

CDSCO ನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ. ಆದ್ದರಿಂದ, ನಾಳೆಯ ಸಭೆಯು ವಿಶೇಷ ಮಹತ್ವ ಪಡೆದುಕೊಂಡಿದೆ.

ತಜ್ಞರ ಸಮಿತಿಯಿಂದ ಲಸಿಕೆಯ ಪರಿಶೀಲನೆ ಸಂಸ್ಥೆಯ ತಜ್ಞರು ಫೈಝರ್, ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿ ಲಸಿಕೆಗಳ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ರೋಗ ನಿರೋಧಕ ಶಕ್ತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ತುರ್ತು ಬಳಕೆಗೆ ಅನುಮತಿ ಕೋರಿರುವ ಮೂರು ಲಸಿಕೆಗಳ ಬಗ್ಗೆ ತಜ್ಞರ ಸಮಿತಿ ಪರಿಶೀಲನೆ ನಡೆಸಲಿದ್ದು, ಲಸಿಕೆಯನ್ನು ಬಳಕೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ನಂತರ ಡಿಸಿಜಿಐಗೆ ಶಿಫಾರಸು ಮಾಡಲಿದೆ.

ಸೆರಮ್ ಸಂಸ್ಥೆಯ ಲಸಿಕೆ ಸಿಗಬಹುದಾ? ಸೆರಮ್ ಸಂಸ್ಥೆಯಿಂದ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಜೊತೆಗೆ ಒಪ್ಪಂದ ಆಗಿದ್ದು, ಅದರಂತೆ, ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆಯನ್ನು ಭಾರತದಲ್ಲಿ ಸೆರಮ್ ಸಂಸ್ಥೆ ಉತ್ಪಾದಿಸಲಿದೆ. ಆದರೆ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆ ಬಳಕೆಗೆ ಇಂಗ್ಲೆಂಡ್​ನಲ್ಲಿ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ಭಾರತದಲ್ಲಿ ಈಗಲೇ ಆಕ್ಸ್‌ಫರ್ಡ್ ವಿವಿ ಲಸಿಕೆಗೆ ಅನುಮತಿ ದೊರಕುವುದು ಕಷ್ಟ ಎಂಬ ಅಭಿಪ್ರಾಯವಿದೆ.

ಫೈಝರ್ ಲಸಿಕೆ ತುರ್ತು ಬಳಕೆಗೆ ಲಭ್ಯವಾಗುತ್ತಾ? ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಇನ್ನೂ 3ನೇ ಹಂತದ ಪ್ರಯೋಗದಲ್ಲಿದೆ. ಫೈಝರ್ ಕಂಪನಿಯ ಲಸಿಕೆಯನ್ನು ತುರ್ತು ಬಳಕೆಗೆ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆ.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ

Published On - 9:37 pm, Tue, 8 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!