AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?

CDSCOನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡಿಸಿಜಿಐಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:31 PM

Share

ದೆಹಲಿ: ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡುವ ಬಗ್ಗೆ ನಾಳೆ (ಡಿ.9) ದೆಹಲಿಯಲ್ಲಿ ಸಭೆ ನಡೆಯಲಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (CDSCO) ಸಭೆಯಲ್ಲಿ ತಜ್ಞರ ಸಮಿತಿ ಪಾಲ್ಗೊಳ್ಳಲಿದೆ. ಕೊವಿಡ್ ಲಸಿಕೆ ತಯಾರಿಕಾ ಔಷಧ ಕಂಪನಿಗಳು ಸಲ್ಲಿಸಿರುವ ಅರ್ಜಿಯ ಬಗ್ಗೆ ಪರಿಶೀಲನೆ ನಡೆಯಲಿದೆ.

CDSCO ನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ. ಆದ್ದರಿಂದ, ನಾಳೆಯ ಸಭೆಯು ವಿಶೇಷ ಮಹತ್ವ ಪಡೆದುಕೊಂಡಿದೆ.

ತಜ್ಞರ ಸಮಿತಿಯಿಂದ ಲಸಿಕೆಯ ಪರಿಶೀಲನೆ ಸಂಸ್ಥೆಯ ತಜ್ಞರು ಫೈಝರ್, ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿ ಲಸಿಕೆಗಳ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ರೋಗ ನಿರೋಧಕ ಶಕ್ತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ತುರ್ತು ಬಳಕೆಗೆ ಅನುಮತಿ ಕೋರಿರುವ ಮೂರು ಲಸಿಕೆಗಳ ಬಗ್ಗೆ ತಜ್ಞರ ಸಮಿತಿ ಪರಿಶೀಲನೆ ನಡೆಸಲಿದ್ದು, ಲಸಿಕೆಯನ್ನು ಬಳಕೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ನಂತರ ಡಿಸಿಜಿಐಗೆ ಶಿಫಾರಸು ಮಾಡಲಿದೆ.

ಸೆರಮ್ ಸಂಸ್ಥೆಯ ಲಸಿಕೆ ಸಿಗಬಹುದಾ? ಸೆರಮ್ ಸಂಸ್ಥೆಯಿಂದ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಜೊತೆಗೆ ಒಪ್ಪಂದ ಆಗಿದ್ದು, ಅದರಂತೆ, ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆಯನ್ನು ಭಾರತದಲ್ಲಿ ಸೆರಮ್ ಸಂಸ್ಥೆ ಉತ್ಪಾದಿಸಲಿದೆ. ಆದರೆ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆ ಬಳಕೆಗೆ ಇಂಗ್ಲೆಂಡ್​ನಲ್ಲಿ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ಭಾರತದಲ್ಲಿ ಈಗಲೇ ಆಕ್ಸ್‌ಫರ್ಡ್ ವಿವಿ ಲಸಿಕೆಗೆ ಅನುಮತಿ ದೊರಕುವುದು ಕಷ್ಟ ಎಂಬ ಅಭಿಪ್ರಾಯವಿದೆ.

ಫೈಝರ್ ಲಸಿಕೆ ತುರ್ತು ಬಳಕೆಗೆ ಲಭ್ಯವಾಗುತ್ತಾ? ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಇನ್ನೂ 3ನೇ ಹಂತದ ಪ್ರಯೋಗದಲ್ಲಿದೆ. ಫೈಝರ್ ಕಂಪನಿಯ ಲಸಿಕೆಯನ್ನು ತುರ್ತು ಬಳಕೆಗೆ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆ.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ

Published On - 9:37 pm, Tue, 8 December 20

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ