AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?

CDSCOನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡಿಸಿಜಿಐಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ.

ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ಸಿಗುತ್ತಾ? ನಾಳೆ ನಡೆಯುವ ಸಭೆ ದೇಶಕ್ಕೆ ಎಷ್ಟು ಮುಖ್ಯ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:31 PM

Share

ದೆಹಲಿ: ಕೊರೊನಾ ಲಸಿಕೆಯ ತುರ್ತು ಬಳಕೆಗೆ ಒಪ್ಪಿಗೆ ನೀಡುವ ಬಗ್ಗೆ ನಾಳೆ (ಡಿ.9) ದೆಹಲಿಯಲ್ಲಿ ಸಭೆ ನಡೆಯಲಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (CDSCO) ಸಭೆಯಲ್ಲಿ ತಜ್ಞರ ಸಮಿತಿ ಪಾಲ್ಗೊಳ್ಳಲಿದೆ. ಕೊವಿಡ್ ಲಸಿಕೆ ತಯಾರಿಕಾ ಔಷಧ ಕಂಪನಿಗಳು ಸಲ್ಲಿಸಿರುವ ಅರ್ಜಿಯ ಬಗ್ಗೆ ಪರಿಶೀಲನೆ ನಡೆಯಲಿದೆ.

CDSCO ನ ವಿಷಯ ತಜ್ಞರ ಸಮಿತಿಯೇ ಲಸಿಕೆ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI)ಗೆ ಶಿಫಾರಸು ನೀಡಲಿದೆ. ನಂತರವಷ್ಟೇ ಲಸಿಕೆಯ ತುರ್ತು ಬಳಕೆಗೆ ಅನುಮತಿ ನಿರ್ಧಾರವಾಗಲಿದೆ. ಆದ್ದರಿಂದ, ನಾಳೆಯ ಸಭೆಯು ವಿಶೇಷ ಮಹತ್ವ ಪಡೆದುಕೊಂಡಿದೆ.

ತಜ್ಞರ ಸಮಿತಿಯಿಂದ ಲಸಿಕೆಯ ಪರಿಶೀಲನೆ ಸಂಸ್ಥೆಯ ತಜ್ಞರು ಫೈಝರ್, ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿ ಲಸಿಕೆಗಳ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ರೋಗ ನಿರೋಧಕ ಶಕ್ತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ತುರ್ತು ಬಳಕೆಗೆ ಅನುಮತಿ ಕೋರಿರುವ ಮೂರು ಲಸಿಕೆಗಳ ಬಗ್ಗೆ ತಜ್ಞರ ಸಮಿತಿ ಪರಿಶೀಲನೆ ನಡೆಸಲಿದ್ದು, ಲಸಿಕೆಯನ್ನು ಬಳಕೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ನಂತರ ಡಿಸಿಜಿಐಗೆ ಶಿಫಾರಸು ಮಾಡಲಿದೆ.

ಸೆರಮ್ ಸಂಸ್ಥೆಯ ಲಸಿಕೆ ಸಿಗಬಹುದಾ? ಸೆರಮ್ ಸಂಸ್ಥೆಯಿಂದ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಜೊತೆಗೆ ಒಪ್ಪಂದ ಆಗಿದ್ದು, ಅದರಂತೆ, ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆಯನ್ನು ಭಾರತದಲ್ಲಿ ಸೆರಮ್ ಸಂಸ್ಥೆ ಉತ್ಪಾದಿಸಲಿದೆ. ಆದರೆ ಆಕ್ಸ್‌ಫರ್ಡ್ ವಿವಿ ಅಸ್ಟ್ರಾಜೆನೆಕಾ ಕಂಪನಿಯ ಲಸಿಕೆ ಬಳಕೆಗೆ ಇಂಗ್ಲೆಂಡ್​ನಲ್ಲಿ ಇನ್ನೂ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ಭಾರತದಲ್ಲಿ ಈಗಲೇ ಆಕ್ಸ್‌ಫರ್ಡ್ ವಿವಿ ಲಸಿಕೆಗೆ ಅನುಮತಿ ದೊರಕುವುದು ಕಷ್ಟ ಎಂಬ ಅಭಿಪ್ರಾಯವಿದೆ.

ಫೈಝರ್ ಲಸಿಕೆ ತುರ್ತು ಬಳಕೆಗೆ ಲಭ್ಯವಾಗುತ್ತಾ? ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಇನ್ನೂ 3ನೇ ಹಂತದ ಪ್ರಯೋಗದಲ್ಲಿದೆ. ಫೈಝರ್ ಕಂಪನಿಯ ಲಸಿಕೆಯನ್ನು ತುರ್ತು ಬಳಕೆಗೆ ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆ.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ

Published On - 9:37 pm, Tue, 8 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ