‘ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕದ ಸಂಭ್ರಮ; ಮೋದಿ ವಿಡಿಯೋ ಹಂಚಿಕೊಂಡ ಹೆಚ್​ಡಿ ಕುಮಾರಸ್ವಾಮಿ

2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ಸ್ವಚ್ಛ ಭಾರತ ಮಿಷನ್​ಗೆ 10 ವರ್ಷಗಳಾಗಿವೆ. ಈ ಹಿನ್ನೆಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಯವರು ತಮ್ಮ ಎಕ್ಸ್​ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

'ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕದ ಸಂಭ್ರಮ; ಮೋದಿ ವಿಡಿಯೋ ಹಂಚಿಕೊಂಡ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ, ನರೇಂದ್ರ ಮೋದಿ
Follow us
ಆಯೇಷಾ ಬಾನು
|

Updated on:Oct 02, 2024 | 9:38 AM

ಬೆಂಗಳೂರು, ಅ.02: ದೇಶವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ‘ಸ್ವಚ್ಛ ಭಾರತ್‌ ಮಿಷನ್‌’ (Swachh Bharat Mission) ಯೋಜನೆ ಜಾರಿಯಾಗಿ ಇಂದಿಗೆ (ಅ.2) 10 ವರ್ಷಗಳು ಪೂರ್ಣಗೊಂಡಿವೆ. ಈ ಸಂಬಂಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಯವರು (HD Kumaraswamy) ತಮ್ಮ ಎಕ್ಸ್​ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಭವಿಷ್ಯದ ಪೀಳಿಗೆಗಾಗಿ ಸ್ವಚ್ಛ, ಸುಂದರ ಮತ್ತು ಸಮರ್ಥ ಭಾರತಕ್ಕಾಗಿ ಕೆಲಸ ಮಾಡುತ್ತಲೇ ಇರೋಣ ಎಂದು ಬರೆದುಕೊಂಡಿದ್ದಾರೆ.

ನಾವು ಸ್ವಚ್ಛ ಭಾರತ್‌ ಮಿಷನ್‌ನ 10 ವರ್ಷಗಳನ್ನು ಮತ್ತು ಮಹಾತ್ಮ ಗಾಂಧಿಯವರ 155 ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ, ನಾವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಂದ ಪರಿವರ್ತನೆಯನ್ನು ಗೌರವಿಸುತ್ತೇವೆ. ಮೋದಿಯವರ ದೃಷ್ಟಿ. ಅವರ ನಾಯಕತ್ವವು ಗಾಂಧೀಜಿಯವರ ಸ್ವಚ್ಛ, ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸಿದೆ. ರಾಷ್ಟ್ರದಾದ್ಯಂತ ಲಕ್ಷಾಂತರ ಜನರನ್ನು ಸಬಲೀಕರಣಗೊಳಿಸಿದೆ. ಭವಿಷ್ಯದ ಪೀಳಿಗೆಗಾಗಿ ಸ್ವಚ್ಛ, ಸುಂದರ ಮತ್ತು ಸಮರ್ಥ ಭಾರತಕ್ಕಾಗಿ ಕೆಲಸ ಮಾಡುತ್ತಲೇ ಇರೋಣ ಎಂದು ಹೆಚ್​ಡಿ ಕುಮಾರಸ್ವಾಮಿಯವರು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿಯವರ ಟ್ವೀಟ್ ಹೀಗಿದೆ

ಇದನ್ನೂ ಓದಿ: Gandhi Jayanti 2024: ಮಹಾತ್ಮ ಗಾಂಧೀಜಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳಿವು

ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ “ಸ್ವಚ್ಛ ಭಾರತ್ ದಿವಸ 2024” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೋದಿಯವರು 9,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನೈರ್ಮಲ್ಯ ಮತ್ತು ಸ್ವಚ್ಛತೆಗೆ ಸಂಬಂಧಿಸಿದ ಹಲವಾರು ನೂತನ ಯೋಜನೆಗಳಿಗೆ ಚಾಲನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದು ಅಮೃತ್ ಮತ್ತು ಅಮೃತ್ 2.0 ಅಡಿಯಲ್ಲಿ 6,800 ಕೋಟಿ ರೂಪಾಯಿ ಮೌಲ್ಯದ ನಗರ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಉತ್ತಮಗೊಳಿಸುವ/ಹೆಚ್ಚಿಸುವ ಗುರಿಯನ್ನು ಹೊಂದಿರುವ ಯೋಜನೆಗಳನ್ನು ಕೂಡ ಒಳಗೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Wed, 2 October 24

ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ