AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ದಿನಗಳಲ್ಲಿ ಆರಂಭವಾಗಲಿದೆ ಜನಗಣತಿಯ ಕಾರ್ಯಕಲಾಪ

ಜನಗಣತಿಗೆ ಸಂಬಂಧಿಸಿದ ಕ್ಷೇತ್ರಕಾರ್ಯದ ರಚನೆ, ಸ್ವರೂಪ ಹೇಗೆಲ್ಲ ನಡೆಯಬೇಕು ಎಂಬ ಯೋಜನೆ ಇನ್ನೂ ಅಂತಿಮಗೊಂಡಿಲ್ಲ. ಇನ್ನೇನು ಕೆಲ ದಿನಗಳಲ್ಲಿ ಜನಗಣತಿ ನಡೆಸುವ ಸ್ವರೂಪ ಅಂತಿಮಗೊಳ್ಳಬೇಕಿದ್ದು, ಕೊರೊನಾ ಸೋಂಕಿನ ನಡುವೆಯೇ ಜನಗಣತಿ ನಡೆಸುವುದು ಸವಾಲಾಗಿದೆ.

ಕೆಲ ದಿನಗಳಲ್ಲಿ ಆರಂಭವಾಗಲಿದೆ ಜನಗಣತಿಯ ಕಾರ್ಯಕಲಾಪ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on: Mar 16, 2021 | 3:33 PM

ದೆಹಲಿ: 2021ನೇ ಸಾಲಿನ ಜನಗಣತಿಯ ಕಾರ್ಯ ಕಲಾಪಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದು ಗೃಹ ಸಚಿವಾಲಯ ಸಂಸತ್​ ಸಮಿತಿಗೆ ತಿಳಿಸಿದೆ. ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ 2011ರಲ್ಲಿ ನಡೆದಿತ್ತು. ಅದೇ ಪ್ರಕಾರ ಈ ವರ್ಷ ಮತ್ತೊಮ್ಮೆ ಜನಗಣತಿ ನಡೆಯಬೇಕಿತ್ತು. 2021ರ ಜನಗಣತಿಗೆ 2020ರ ಸೆಪ್ಟೆಂಬರ್​ ತಿಂಗಳಿನಿಂದಲೇ ತಯಾರಿ ಪ್ರಕ್ರಿಯೆ ಆರಂಭವಾಗಬೇಕಿತ್ತಾದರೂ, ಕೊರೊನಾ ಸೋಂಕು ಪಿಡುಗಿನಿಂದ ಜನಗಣತಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಸ್ಥಗಿತಗೊಂಡಿದ್ದವು. ಇದೀಗ ಜನಗಣತಿಗೆ ಸಂಬಂಧಿಸಿ ಹಾಕಿಕೊಂಡ 2021-22ರಿಂದ 2024-25ರವರೆಗಿನ 5 ವರ್ಷಗಳ ಯೋಜನೆಗೆ ಕೆಲ ದಿನಗಳಲ್ಲಿ ಚಾಲನೆ ದೊರೆಯುವುದು ಖಚಿತವಾದಂತಾಗಿದೆ.  

ಜನಗಣತಿಗೆ ಸಂಬಂಧಿಸಿದ ಕ್ಷೇತ್ರಕಾರ್ಯದ ರಚನೆ, ಸ್ವರೂಪ ಹೇಗೆಲ್ಲ ನಡೆಯಬೇಕು ಎಂಬ ಯೋಜನೆ ಇನ್ನೂ ಅಂತಿಮಗೊಂಡಿಲ್ಲ. ಇನ್ನೇನು ಕೆಲ ದಿನಗಳಲ್ಲಿ ಜನಗಣತಿ ನಡೆಸುವ ಸ್ವರೂಪ ಅಂತಿಮಗೊಳ್ಳಬೇಕಿದ್ದು, ಕೊರೊನಾ ಸೋಂಕಿನ ನಡುವೆಯೇ ಜನಗಣತಿ ನಡೆಸುವುದು ಸವಾಲಾಗಿದೆ.

ದೇಶದಲ್ಲಿ ಕೊರೊನಾ ಸ್ಥಿತಿಗತಿ ದೇಶಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಹೆಚ್ಚುತ್ತಿದ್ದು, ಸೋಂಕಿತರ ಪ್ರಮಾಣ ನಿಧಾನವಾಗಿ ಏರುಗತಿಯಲ್ಲಿ ಸಾಗಲಾರಂಭಿಸಿದೆ. ಕಳೆದ 24 ಗಂಟೆಯಲ್ಲಿ ದೇಶದ 24,492 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,14,09,831ಕ್ಕೆ ಏರಿಕೆ ಆಗಿದೆ. ಕಳೆದೊಂದು ದಿನದಲ್ಲಿ ಒಟ್ಟು 131 ಜನ ಸೋಂಕಿತರು ಸಾವಿಗೀಡಾಗುವ ಮೂಲಕ ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 1,58,856ಕ್ಕೆ ತಲುಪಿದೆ.

ಸದ್ಯ ದೇಶದಲ್ಲಿ 2,23,432 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಆರೋಗ್ಯ ಇಲಾಖೆ ಸೋಂಕಿತರ ಮೇಲೆ ತೀವ್ರ ನಿಗಾವಹಿಸಿದೆ. ಕೊರೊನಾ ಸೋಂಕಿನಿಂದ ಈವರೆಗೆ 1,10,27,543 ಜನರು ಗುಣಮುಖರಾಗಿರುವುದು ಆಶಾದಾಯಕ ಬೆಳವಣಿಗೆ ಎಂದೆನಿಸಿದರೂ ಎರಡನೇ ಅಲೆ ಆರಂಭವಾದರೆ ಪರಿಣಾಮ ತೀವ್ರವಾಗಿರಬಹುದು ಎಂಬ ಆತಂಕವೂ ವ್ಯಕ್ತವಾಗುತ್ತಿದೆ. ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಎರಡು ತಿಂಗಳು ಪೂರೈಸುತ್ತಿದ್ದು, ಈವರೆಗೆ 3,29,47,432 ಡೋಸ್ ಕೊರೊನಾ ಲಸಿಕೆಯನ್ನು ನೀಡಲಾಗಿದೆ.

ಅಂತೆಯೇ ನಿನ್ನೆ ಒಂದೇ ದಿನ 8,73,350 ಕೊವಿಡ್​ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಮೂಲಕ ಇದುವರೆಗೆ ಒಟ್ಟು 22,82,80,763 ಮಾದರಿಗಳನ್ನು ಪರಿಶೀಲಿಸಿದಂತಾಗಿದೆ. ಕೊವಿಡ್​ 19 ಪರೀಕ್ಷೆಯ ಬಗ್ಗೆ ಐಸಿಎಂಆರ್​ ಈ ಎಲ್ಲಾ ಮಾಹಿತಿಗಳನ್ನು ಹಂಚಿಕೊಂಡಿದ್ದು, ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಏರುತ್ತಿರುವುದು ಸ್ಪಷ್ಟವಾಗಿದೆ. ಕೊರೊನಾ ಎರಡನೇ ಅಲೆ ಭೀತಿಯ ಬಗ್ಗೆ ಎಲ್ಲಾ ರಾಜ್ಯಗಳು ಈಗಾಗಲೇ ಕಟ್ಟೆಚ್ಚರ ವಹಿಸುತ್ತಿದ್ದು, ಮಾರ್ಚ್​ 17ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಂಸತ್​ ಭವನದ ಬಳಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಿ: ರೈತ ಮುಖಂಡ ರಾಕೇಶ್ ಟಿಕಾಯತ್ ಆಪೇಕ್ಷೆ

Explainer | ಟಿಬೆಟ್​ನ ದೇಶಭ್ರಷ್ಟ ಸಂಸತ್​ಗೆ ಚುನಾವಣೆ: ಹೇಗಿರುತ್ತೆ ಪ್ರತಿನಿಧಿಗಳ ಆಯ್ಕೆ? ಮತದಾನ ಪ್ರಕ್ರಿಯೆ?

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್