AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Census India: ಜನಗಣತಿಗೆ ಸಿದ್ಧತೆ: ಮತ್ತೊಮ್ಮೆ ಜಾತಿ ಆಧರಿತ ಮಾಹಿತಿ ಸಂಗ್ರಹಿಸುವ ಉದ್ದೇಶವಿಲ್ಲ ಎಂದ ಕೇಂದ್ರ ಸರ್ಕಾರ

ಭಾರತದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಮೊದಲ ಡಿಜಿಟಲ್ ಗಣತಿ ಆಗಿರಲಿದೆ. ಇದೇ ಮೊದಲ ಬಾರಿಗೆ ಸ್ವಯಂ ದೃಢೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ.

Census India: ಜನಗಣತಿಗೆ ಸಿದ್ಧತೆ: ಮತ್ತೊಮ್ಮೆ ಜಾತಿ ಆಧರಿತ ಮಾಹಿತಿ ಸಂಗ್ರಹಿಸುವ ಉದ್ದೇಶವಿಲ್ಲ ಎಂದ ಕೇಂದ್ರ ಸರ್ಕಾರ
ಸಂಸತ್ ಭವನ
TV9 Web
| Edited By: |

Updated on: Aug 11, 2021 | 8:23 PM

Share

ದೆಹಲಿ: ಜಾತಿ ಗಣತಿಗಾಗಿ ಮತ್ತೊಮ್ಮೆ ಯಾವುದೇ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರವು ಬುಧವಾರ ಸಂಸತ್ತಿಗೆ ಮಾಹಿತಿ ನೀಡಿದೆ. 2011ರ ಸಾಮಾಜಿಕ ಆರ್ಥಿಕ ಗಣತಿ ವೇಳೆ ಸಂಗ್ರಹಿಸಿದ್ದ ಜಾತಿಗೆ ಸಂಬಂಧಿಸಿದ ಕಚ್ಚಾ ಮಾಹಿತಿಯು ರಿಜಿಸ್ಟ್ರಾರ್​ ಜನರಲ್ ಆಫ್ ಇಂಡಿಯಾ (ಆರ್​ಜಿಐ) ಕಚೇರಿಯಲ್ಲಿದೆ. ಈ ಮಾಹಿತಿಯು ಹಳೆಯದಾಗಿರುವುದರಿಂದ ಮತ್ತು ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಳಸಲು ಆಗದು ಎಂಬ ಅಭಿಪ್ರಾಯವನ್ನು ಆರ್​ಜಿಐ ವ್ಯಕ್ತಪಡಿಸಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.

ಪ್ರಸ್ತಕ ಸಾಲಿನಲ್ಲಿ (2021) ನಡೆಯುವ ಜನಗಣತಿಯ ವೇಳೆ, 1950ರ ಸಂವಿಧಾನಾತ್ಮಕ ಆದೇಶದ ಅನ್ವಯ ಕೇವಲ ಪರಿಶಿಷ್ಟ ಜಾತಿ ಮತ್ತು ವರ್ಗದ ಮಾಹಿತಿ ಸಂಗ್ರಹಿಸುತ್ತಾರೆ. ಕೇಂದ್ರ ಸಚಿವ ನಿತ್ಯಾನಂದ ರೈ ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

‘1950ರ ಸಂವಿಧಾನ (ಪರಿಶಿಷ್ಟ ಜಾತಿ) ಆದೇಶದ ಅನ್ವಯ ಯಾವೆಲ್ಲಾ ಜಾತಿ ಮತ್ತು ವರ್ಗಗಳನ್ನು ಪರಿಶಿಷ್ಟ ಎಂದು ಘೋಷಿಸಲಾಗಿದೆಯೋ ಅಂಥ ಜಾತಿ ಮತ್ತು ವರ್ಗಗಳ ಮಾಹಿತಿಯನ್ನು ಜನಗಣತಿಯ ವೇಳೆ ಸಂಗ್ರಹಿಸಲಾಗುವುದು. 2011ರಲ್ಲಿ ಅಂದಿನ ಗ್ರಾಮೀಣ ಅಭಿವೃದ್ಧಿ, ವಸತಿ ಹಾಗೂ ನಗರ ಬಡತನ ನಿರ್ಮೂಲನಾ ಸಚಿವಾಲಯವು ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ನಡೆಸಿತ್ತು. ಈ ಪೈಕಿ ಜಾತಿ ವಿವರ ಹೊರತುಪಡಿಸಿ ಉಳಿದೆಲ್ಲ ಮಾಹಿತಿಯನ್ನು ಸಂಸ್ಕರಿಸಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕವಾಗಿ ಪ್ರಕಟಿಸಿತ್ತು ಎಂದು ಸಚಿವರು ಸಂಸತ್ತಿನಲ್ಲಿ ತಿಳಿಸಿದರು.

ಜನಗಣತಿಯ ಸಮಯವನ್ನು ವಿವಿಧ ರಾಜ್ಯ ಸರ್ಕಾರಗಳೂ ಸೇರಿದಂತೆ ವಿವಿಧ ಸಹಭಾಗಿಗಳೊಂದಿಗೆ ಕೂಲಂಕಶ ಸಮಾಲೋಚನೆಯ ನಂತರವೇ ನಿಗದಿಪಡಿಸಲಾಗಿದೆ. 2021ರಲ್ಲಿ ಗಣತಿ ಮಾಡಬೇಕು ಎನ್ನುವ ನಿರ್ಧಾರವನ್ನು ಕೇಂದ್ರ ಸರ್ಕಾರವು ಮಾರ್ಚ್ 28, 2019ರಂದು ಗೆಜೆಟ್ ಅಧಿಸೂಚನೆಯ ಮೂಲಕ ಪ್ರಕಟಿಸಿತ್ತು. ಆದರೆ ಕೊವಿಡ್ ಕಾರಣದಿಂದ ಗಣತಿಗೆ ಸಂಬಂಧಿಸಿದ ಸಿದ್ಧತಾ ಕಾರ್ಯಗಳು ಮುಂದೆ ಹೋಗಿದ್ದವು ಎಂದು ಸಚಿವರು ಸದನಕ್ಕೆ ತಿಳಿಸಿದರು.

ಜನಗಣತಿಯ ವೇಳೆ ವಿವಿಧ ಸಾಮಾಜಿಕ ಮತ್ತು ಆರ್ಥಿಕ ಮಾನದಂಡಗಳ ಆಧಾರದ ಮೇಲೆ ಮಾಹಿತಿ ಸಂಗ್ರಹಿಸಲಾಗುವುದು. ಜನರ ಶಿಕ್ಷಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಧರ್ಮ, ಭಾಷೆ, ಮದುವೆ, ಮಕ್ಕಳ ವಿವರ, ಅಂಗವೈಕಲ್ಯ, ವೃತ್ತಿ, ವಲಸೆಯ ಮಾಹಿತಿ ಸಂಗ್ರಹಿಸಲಾಗುವುದು ಎಂದು ಹೇಳಿದರು.

ಭಾರತದಲ್ಲಿ ಈ ಬಾರಿ ನಡೆಯಲಿರುವ ಜನಗಣತಿಯು ಮೊದಲ ಡಿಜಿಟಲ್ ಗಣತಿ ಆಗಿರಲಿದೆ. ಇದೇ ಮೊದಲ ಬಾರಿಗೆ ಸ್ವಯಂ ದೃಢೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ದತ್ತಾಂಶ ಸಂಗ್ರಹಕ್ಕಾಗಿ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುವುದು. ಗಣತಿಗೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಿರ್ವಹಿಸಲು ವಿಶೇಷ ಪೋರ್ಟಲ್ ರೂಪಿಸಲಾಗುವುದು ಎಂದು ಹೇಳಿದರು.

(Census Preparation Started Will Not Collect Caste Based Data Again Centre Tells Parliament)

ಇದನ್ನೂ ಓದಿ: ಸಿದ್ದರಾಮಯ್ಯರನ್ನ ಮೂಲೆಗುಂಪಾಗಿಸಿದ್ದ ಜಾತಿಗಣತಿ ಬ್ರಹ್ಮಾಸ್ತ್ರ ಮತ್ತೆ ಮುನ್ನೆಲೆಗೆ; 2023ರ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್!?

ಇದನ್ನೂ ಓದಿ: OBC Reservation Bill: ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸಲು ರಾಜ್ಯಕ್ಕೆ ಅಧಿಕಾರ; ರಾಜ್ಯಸಭೆಯಲ್ಲೂ ಮಸೂದೆ ಅಂಗೀಕಾರ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್