Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಾಸನಕ್ಕೆ ಸ್ಪರ್ಧಾತ್ಮಕ ಕ್ರೀಡೆಯ ಪಟ್ಟ: ಇನ್ಮುಂದೆ ಸರ್ಕಾರದಿಂದ ಸಿಗಲಿದೆ ಧನಸಹಾಯ

ಯೋಗಾಸನ ತುಂಬ ವರ್ಷಗಳಿಂದಲೂ ಒಂದು ಸ್ಪರ್ಧಾತ್ಮಕ ಕ್ರೀಡೆಯಾಗಿಯೇ ಇದೆ. ಆದರೆ ಕೇಂದ್ರ ಸರ್ಕಾರ ಅಧಿಕೃತವಾಗಿ ಅದನ್ನು ಗುರುತಿಸಿರಲಿಲ್ಲ. ಆದರೆ ಇಂದು ನಾವದನ್ನು ಮಾಡುತ್ತಿದ್ದೇವೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.

ಯೋಗಾಸನಕ್ಕೆ ಸ್ಪರ್ಧಾತ್ಮಕ ಕ್ರೀಡೆಯ ಪಟ್ಟ: ಇನ್ಮುಂದೆ ಸರ್ಕಾರದಿಂದ ಸಿಗಲಿದೆ ಧನಸಹಾಯ
ಇಂದಿನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವರು..
Follow us
Lakshmi Hegde
|

Updated on: Dec 17, 2020 | 6:53 PM

ದೆಹಲಿ: ದೇಶದಲ್ಲಿ ಈಗಾಗಲೇ ಹೆಚ್ಚು ಪ್ರಾಶಸ್ತ್ಯ ಪಡೆದಿರುವ ಯೋಗಕ್ಕೆ ಈಗ ಕೇಂದ್ರ ಸರ್ಕಾರ ಮತ್ತೊಂದು ಹಂತದ ಪ್ರಾಮುಖ್ಯತೆ ನೀಡಿದೆ. ಇಂದು ಯೋಗವನ್ನು ಒಂದು ಸ್ಪರ್ಧಾತ್ಮಕ ಕ್ರೀಡೆಯೆಂದು ಕೇಂದ್ರ ಅಧಿಕೃತವಾಗಿ ಮಾನ್ಯ ಮಾಡಿದ್ದು, ಇದರಿಂದ ಇನ್ಮುಂದೆ ಯೋಗ ಸ್ಪರ್ಧೆಗೆ ಸರ್ಕಾರದಿಂದ ಹಣಕಾಸು ನೆರವು ಸಿಗಲಿದೆ.

ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ಕಿರಣ್​ ರಿಜಿಜು ಮತ್ತು ಆಯುಷ್​ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಜಂಟಿಯಾಗಿ, ಯೋಗಾಸನಕ್ಕೆ ಸ್ಪರ್ಧಾತ್ಮಕ ಕ್ರೀಡೆಯ ಸ್ಥಾನ ನೀಡಿದ್ದಾರೆ. ಯೋಗವನ್ನು ಪ್ರೋತ್ಸಾಹಿಸಿ, ಅದರ ಬಗ್ಗೆ ಅರಿವು ಹೆಚ್ಚಿಸುವ ಜತೆ, ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸುವಲ್ಲಿ ಯೋಗದ ಎಷ್ಟು ಸಹಕಾರಿ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡುವ ಪ್ರಯತ್ನದ ಭಾಗವಾಗಿ ಕೇಂದ್ರ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ತಿಳಿಸಿದ್ದಾರೆ.

ಯೋಗಾಸನ ತುಂಬ ವರ್ಷಗಳಿಂದಲೂ ಒಂದು ಸ್ಪರ್ಧಾತ್ಮಕ ಕ್ರೀಡೆಯಾಗಿಯೇ ಇದೆ. ಆದರೆ ಕೇಂದ್ರ ಸರ್ಕಾರ ಅಧಿಕೃತವಾಗಿ ಅದನ್ನು ಗುರುತಿಸಿರಲಿಲ್ಲ. ಆದರೆ ಇಂದು ನಾವದನ್ನು ಮಾಡುತ್ತಿದ್ದೇವೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.

ಯೋಗಾಸನ ಪದ್ಧತಿಯನ್ನು ಉಳಿಸಲು ಮತ್ತು ಬೆಳೆಸಲು ಕಳೆದ ವರ್ಷ ಬಾಬಾ ರಾಮದೇವ್​ ಅಧ್ಯಕ್ಷತೆಯಲ್ಲಿ ಕಳೆದ ವರ್ಷ ನವೆಂಬರ್​ನಲ್ಲಿ ರಾಷ್ಟ್ರೀಯ ಯೋಗಾಸನಾ ಸ್ಪೋರ್ಟ್ಸ್​ ಫೆಡರೇಶನ್ ಆಫ್ ಇಂಡಿಯಾ (NYSFI) ಸ್ಥಾಪಿಸಲಾಗಿದೆ. ಅದನ್ನು ಈ ಕಳೆದ ತಿಂಗಳು ಕ್ರೀಡಾ ಸಚಿವಾಲಯ NSF (ನ್ಯಾಷನಲ್​ ಸ್ಪೋರ್ಟ್ಸ್​ ಫೆಡರೇಶನ್) ಎಂದು ಮರು ನಾಮಕಾರಣ ಮಾಡಿ, ಮಾನ್ಯ ಮಾಡಿದೆ. ಹಾಗೇ ಇನ್ನು ಮುಂದೆ, NYSFI ನಿಂದ ಆಯೋಜಿಸುವ ತರಬೇತಿಗೆ ಹಣಕಾಸು ನೆರವು ನೀಡುವುದಾಗಿ ಕ್ರೀಡಾ ಸಚಿವಾಲಯ ತಿಳಿಸಿದೆ.

ರಾಜ್ಯಗಳ ಸುಧಾರಣೆಗಾಗಿ ಕೇಂದ್ರ ಸರ್ಕಾರದ ನೆರವು; ಕರ್ನಾಟಕಕ್ಕೆ ಲಭಿಸಲಿದೆ 4,509 ಕೋಟಿ ಹೆಚ್ಚುವರಿ ಸಂಪನ್ಮೂಲ

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?