AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಖಾಸಗೀಕರಣಗೊಳ್ಳುವುದು ಹೆಚ್ಚುಕಡಿಮೆ ಖಚಿತ

‘ಆತ್ಮನಿರ್ಭರ್ ಭಾರತ್’ ಗಾಗಿ ಹೊಸ ಸಾರ್ವಜನಿಕ ವಲಯದ ಉದ್ಯಮ ನೀತಿಯ ಪ್ರಕಾರ, ಕಾರ್ಯತಂತ್ರದ ಕ್ಷೇತ್ರಗಳಲ್ಲಿನ ಖಾಸಗಿ ವಲಯದ ಘಟಕಗಳ (ಪಿಎಸ್​ಯು) ಹೆಸರುಗಳನ್ನು ವಿಲೀನ, ಖಾಸಗೀಕರಣ ಅಥವಾ ಇತರ ಪಿಎಸ್​ಯುಗಳ ಅಂಗಸಂಸ್ಥೆಗಳನ್ನಾಗಿ ಮಾಡುವ ಪ್ರಕ್ರಿಯೆಯ ಜವಾಬ್ದಾರಿಯನ್ನು ನೀತಿ ಅಯೋಗಕ್ಕೆ ವಹಿಸಲಾಗಿತ್ತು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಖಾಸಗೀಕರಣಗೊಳ್ಳುವುದು ಹೆಚ್ಚುಕಡಿಮೆ ಖಚಿತ
ಸಾಂದರ್ಭಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on:Jun 22, 2021 | 12:55 AM

Share

ನವದೆಹಲಿ:  ಸರ್ಕಾರೀ ಸ್ವಾಮ್ಯದ ಎರಡು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರವು ಮಾನ್ಸೂನ್ ಅಧಿವೇಶನದಲ್ಲಿ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಮತ್ತು ಬ್ಯಾಂಕಿಂಗ್ ಕಾನೂನು ಕಾಯ್ದೆಯಲ್ಲಿ ತಿದ್ದುಪಡಿ ತರುವ ಸಾಧ್ಯತೆಯಿದೆ. ನಂಬಲರ್ಹ ಮೂಲಗಳ ಪ್ರಕಾರ ನೀತಿ ಅಯೋಗವು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಈ ಯೋಜನೆಗಾಗಿ ಗುರುತು ಮಾಡಿದೆ. ಸದನದಲ್ಲಿ ಬಜೆಟ್ 2021 ಮಂಡಿಸುವಾಗ, ಕೇಂದ್ರ ಹಣಕಾಸು ಸಚಿವೆ ಕೇಂದ್ರ ನಿರ್ಮಲಾ ಸೀತಾರಾಮನ್ ಅವರು 2021-22ರಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು (ಪಿಎಸ್‌ಬಿ) ಖಾಸಗೀಕರಣಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು .

‘ಆತ್ಮನಿರ್ಭರ್ ಭಾರತ್’ ಗಾಗಿ ಹೊಸ ಸಾರ್ವಜನಿಕ ವಲಯದ ಉದ್ಯಮ ನೀತಿಯ ಪ್ರಕಾರ, ಕಾರ್ಯತಂತ್ರದ ಕ್ಷೇತ್ರಗಳಲ್ಲಿನ ಖಾಸಗಿ ವಲಯದ ಘಟಕಗಳ (ಪಿಎಸ್​ಯು) ಹೆಸರುಗಳನ್ನು ವಿಲೀನ, ಖಾಸಗೀಕರಣ ಅಥವಾ ಇತರ ಪಿಎಸ್​ಯುಗಳ ಅಂಗಸಂಸ್ಥೆಗಳನ್ನಾಗಿ ಮಾಡುವ ಪ್ರಕ್ರಿಯೆಯ ಜವಾಬ್ದಾರಿಯನ್ನು ನೀತಿ ಅಯೋಗಕ್ಕೆ ವಹಿಸಲಾಗಿತ್ತು. ಸರ್ಕಾರದ ಥಿಂಕ್-ಟ್ಯಾಂಕ್ ಇತ್ತೀಚೆಗೆ ಹೂಡಿಕೆದಾರರ ಪ್ರಮುಖ ಗುಂಪಿನ ಕಾರ್ಯದರ್ಶಿಗಳಿಗೆ ಈ ಎರಡು ಬ್ಯಾಂಕುಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಖಾಸಗೀಕರಣ ಮಾಡಲಿರುವುದನ್ನು ವಿವರಿಸಿ ವರದಿಯೊಂದನ್ನು ಸಲ್ಲಿಸಿದೆ.

ಕೋರ್ ಗ್ರೂಪ್ ಸಮಿತಿಯ ಇತರ ಸದಸ್ಯರೆಂದರೆ; ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ, ಕಂದಾಯ ಕಾರ್ಯದರ್ಶಿ, ವೆಚ್ಚ ಕಾರ್ಯದರ್ಶಿ, ಕಾರ್ಪೊರೇಟ್ ವ್ಯವಹಾರಗಳ ಕಾರ್ಯದರ್ಶಿ, ಕಾರ್ಯದರ್ಶಿ ಕಾನೂನು ವ್ಯವಹಾರಗಳು, ಸಾರ್ವಜನಿಕ ಉದ್ಯಮಗಳ ಇಲಾಖೆ ಕಾರ್ಯದರ್ಶಿ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಕಾರ್ಯದರ್ಶಿ (ಡಿಐಪಿಎಎಂ) ಮತ್ತು ಆಡಳಿತ ವಿಭಾಗದ ಕಾರ್ಯದರ್ಶಿ. ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಕಾರ್ಯದರ್ಶಿಗಳ ಪ್ರಮುಖ ಗುಂಪು ಹೆಸರುಗಳನ್ನು ತೆರವುಗೊಳಿಸಿದ ನಂತರ, ವರದಿಯು ಅದರ ಅನುಮೋದನೆಗಾಗಿ ಪರ್ಯಾಯ ಕಾರ್ಯವಿಧಾನಕ್ಕೆ (ಎಎಮ್) ಹೋಗುತ್ತದೆ ಮತ್ತು ಅಂತಿಮ ಅನುಮೋದನೆಗಾಗಿ ಪ್ರಧಾನ ಮಂತ್ರಿ ನೇತೃತ್ವದ ಕ್ಯಾಬಿನೆಟ್​ಗೆ ಹೋಗುತ್ತದೆ.

‘ಖಾಸಗೀಕರಣಗೊಳ್ಳುವ ಬ್ಯಾಂಕ್​ಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳ, ವೇತನಶ್ರೇಣಿ ಅಥವಾ ನಿವೃತ್ತಿ ವೇತನ ಮೊದಲಾದವುಗಳ ಬಗ್ಗೆ ಕಾಳಜಿವಹಿಸಲಾಗುವುದು. ಅವರ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು,’ ಎಂದು ಇತ್ತೀಚಿಗೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದರು. ಬ್ಯಾಂಕ್​ಗಳನ್ನು ಖಾಸಗೀಕರಣಗೊಳಿಸುತ್ತಿರುವ ಹಿಂದಿನ ಉದ್ದೇಶದ ಬಗ್ಗೆ ಮಾತಾಡಿದ್ದ ಸಚಿವೆ, ದೇಶಕ್ಕೆ ಭಾರತೀಯ ಸ್ಟೇಟ್​ ಬ್ಯಾಂಕ್​ನಂಥ (ಎಸ್​ಬಿಐ) ದೊಡ್ಡ ಬ್ಯಾಂಕ್​ಗಳ ಆವಶ್ಯಕತೆ ದೇಶಕ್ಕಿದೆ ಎಂದಿದ್ದರು.

“ನಮಗೆ ಬೃಹತ್ ಪ್ರಮಾಣದ ಬ್ಯಾಂಕುಗಳ ಅವಶ್ಯಕತೆಯಿದೆ. ದೇಶದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪೂರೈಸಲು ಸಾಧ್ಯವಾಗುವಂತಹ ಬ್ಯಾಂಕುಗಳು ನಮಗೆ ಬೇಕು” ಎಂದು ಸೀತಾರಾಮನ್ ಹೇಳಿದ್ದರು. ಬ್ಯಾಂಕ್​ಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರಕ್ಕೆ ಬರುವ ಮೊದಲು ಬಹಳಷ್ಟು ಯೋಚಿಸಿಲಾಗಿದೆ ಎಂದು ಅವರು ಹೇಳಿದ್ದರು. ಪಿಟಿಐ ಸುದ್ದಿಸಂಸ್ಥೆ ವರದಿ ಮಾಡುವ ಪ್ರಕಾರ, ಈ ಎರಡು ಬ್ಯಾಂಕ್​ಗಳು ತಮ್ಮ ಉದ್ಯೋಗಿಗಳಿಗೆ ಒಂದು ಅತ್ಯಾಕರ್ಷಕ ಸ್ವಯಂ ನಿವೃತ್ತಿ ಯೋಜನೆ (ವಿಆರ್​ಎಸ್) ಪ್ರಕಟಿಸಲಿವೆ. ‘ಈ ಬ್ಯಾಂಕ್​ಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಒಂದು ಅಕರ್ಷಕ ವಿಆರ್​ಎಸ್ ಯೋಜನೆಯನ್ನು ಘೋಷಿಸಲಿರುವುದರಿಂದ ಬ್ಯಾಂಕಿಂಗ್​ ಕ್ಷೇತ್ರವನ್ನು ಪ್ರವೇಶಿಸಲು ಉತ್ಸುಕವಾಗಿರುವ ಖಾಸಗಿ ಸಂಸ್ಥೆಗಳಿಗೆ ಟೇಕ್​ ಓವರ್ ಪ್ರಕ್ರಿಯೆ ಸುಲಭವಾಗಲಿದೆ,’ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಎಲ್‌ಐಸಿ ನಿಯಂತ್ರಣದಲ್ಲಿರುವ ಐಡಿಬಿಐ ಬ್ಯಾಂಕ್‌ ಅನ್ನು ಸಹ ಖಾಸಗೀಕರಣಗೊಳಿಸಲು ಸರ್ಕಾರ ಯೋಚಿಸುತ್ತಿದೆ. ಕಳೆದ ತಿಂಗಳು, ಕೇಂದ್ರ ಸಚಿವ ಸಂಪುಟವು ಐಡಿಬಿಐ ಬ್ಯಾಂಕಿನಲ್ಲಿ ನಿರ್ವಹಣಾ ನಿಯಂತ್ರಣದ ವರ್ಗಾವಣೆಯೊಂದಿಗೆ ಕಾರ್ಯತಂತ್ರದ ಹೂಡಿಕೆಗಾಗಿ ತಾತ್ವಿಕವಾಗಿ ಅನುಮೋದನೆ ನೀಡಿತು. ಕೇಂದ್ರ ಸರ್ಕಾರ ಮತ್ತು ಎಲ್‌ಐಸಿ ಒಟ್ಟಾಗಿ ಐಡಿಬಿಐ ಬ್ಯಾಂಕಿನ ಶೇಕಡಾ 94 ಕ್ಕಿಂತ ಹೆಚ್ಚು ಷೇರುಗಳನ್ನು ಹೊಂದಿವೆ. ಮ್ಯಾನೇಜ್ಮೆಂಟ್ ಕಂಟ್ರೋಲ್ ಹೊಂದಿರುವ ಐಡಿಬಿಐ ಬ್ಯಾಂಕಿನ ಪ್ರಮೋಟರ್​ ಆಗಿರುವ ಎಲ್ಐಸಿ ಶೇ 49.21 ರಷ್ಟು ಪಾಲನ್ನು ಹೊಂದಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕ್​ಗಳ ಖಾಸಗೀಕರಣ ಮಾಡಲ್ಲ; ಸ್ಪಷ್ಟನೆ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Published On - 10:33 pm, Mon, 21 June 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ