AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NTA ಟ್ರಂಕ್‌ನಿಂದ NEET-UG ಪ್ರಶ್ನೆ ಪತ್ರಿಕೆ ಕದ್ದ ವ್ಯಕ್ತಿಗಳನ್ನು ಬಂಧಿಸಿದ ಸಿಬಿಐ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಮಂಗಳವಾರ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್‌ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪ್ರಶ್ನೆ ಪತ್ರಿಕೆಯನ್ನು ಕದ್ದು ಹಂಚುವಲ್ಲಿ ಇಬ್ಬರೂ ಭಾಗಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ಸಿಬಿಐ ಪ್ರಮುಖ ಆರೋಪಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಿಹಾರದ ನಳಂದಾದಲ್ಲಿ ಬಂಧಿಸಿತ್ತು.

NTA ಟ್ರಂಕ್‌ನಿಂದ NEET-UG ಪ್ರಶ್ನೆ ಪತ್ರಿಕೆ ಕದ್ದ ವ್ಯಕ್ತಿಗಳನ್ನು ಬಂಧಿಸಿದ ಸಿಬಿಐ
ನೀಟ್ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on:Jul 16, 2024 | 5:19 PM

Share

ದೆಹಲಿ ಜುಲೈ 16: ನೀಟ್ (NEET-UG) ಪ್ರಶ್ನೆ ಪತ್ರಿಕೆ ಕದ್ದ ಇಬ್ಬರನ್ನು ಕೇಂದ್ರ ತನಿಖಾ ದಳ (CBI) ಮಂಗಳವಾರ ಬಂಧಿಸಿದೆ. ಬಂಧಿತರಲ್ಲಿ ಒಬ್ಬರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಟ್ರಂಕ್‌ನಿಂದ NEET-UG ಪೇಪರ್ ಅನ್ನು ಕದ್ದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್‌ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪ್ರಶ್ನೆ ಪತ್ರಿಕೆಯನ್ನು ಕದ್ದು ಹಂಚುವಲ್ಲಿ ಇಬ್ಬರೂ ಭಾಗಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ಸಿಬಿಐ ಪ್ರಮುಖ ಆರೋಪಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಿಹಾರದ ನಳಂದಾದಲ್ಲಿ ಬಂಧಿಸಿತ್ತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಕೇಶ್ ರಂಜನ್ ಪ್ರಮುಖರು ಎಂದು ನಂಬಲಾಗಿದೆ. ರಂಜನ್ ನನ್ನು ಬಂಧಿಸಲು ಸಿಬಿಐ ಬಲೆ ಬೀಸಿ ಪಾಟ್ನಾ ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿತು. ಪ್ರಸ್ತುತ ಪ್ರಕರಣದಲ್ಲಿ ತನಿಖಾ ಸಂಸ್ಥೆ ಇದುವರೆಗೆ ಹನ್ನೆರಡು ಜನರನ್ನು ಬಂಧಿಸಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ ಬಂಧಿಸಲು ಸಿಬಿಐ ಸುಧಾರಿತ ತನಿಖಾ ತಂತ್ರಗಳನ್ನು ಬಳಸುತ್ತಿದೆ.

“ಐಪಿ ವಿಳಾಸಗಳು ಮತ್ತು ಇಮೇಲ್ ಸಂವಹನಗಳು ಸೇರಿದಂತೆ ಡಿಜಿಟಲ್ ಹೆಜ್ಜೆಗುರುತುಗಳ ವಿವರವಾದ ವಿಶ್ಲೇಷಣೆಯ ಮೂಲಕ ರಂಜನ್ ಅವರನ್ನು ಪತ್ತೆಹಚ್ಚಲಾಗಿದೆ. ಭ್ರಷ್ಟಾಚಾರ ಮತ್ತು ವಂಚನೆಯನ್ನು ಎದುರಿಸಲು ತನ್ನ ಪ್ರಯತ್ನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವಲ್ಲಿ ಏಜೆನ್ಸಿಯ ಸಮರ್ಪಣೆಯನ್ನು ಒತ್ತಿಹೇಳುತ್ತದೆ” ಎಂದು ಅಧಿಕಾರಿಯೊಬ್ಬರು  ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ

ಮೇ 5, 2024 ರಂದು ನಡೆದ NEET-UG ಪರೀಕ್ಷೆಯಲ್ಲಿ ವಂಚನೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ನಡಿದಿದೆ ಎಂಬ ಆರೋಪ ಕೇಳಿ ಬಂದಿತ್ತು.  ಪ್ರಕ್ರಿಯೆಯಲ್ಲಿಯೂ ವ್ಯತ್ಯಾಸಗಳಿದ್ದು, 67 ಆಕಾಂಕ್ಷಿಗಳು 720/ 720 ಅಂಕಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಬಿಎಂಡಬ್ಲ್ಯು ಗುದ್ದೋಡು ಪ್ರಕರಣ: ಆರೋಪಿ ಮಿಹಿರ್ ಶಾಗೆ ಜುಲೈ 30ರವರೆಗೆ ನ್ಯಾಯಾಂಗ ಬಂಧನ

ಪರೀಕ್ಷೆಯನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತೀವ್ರ ಟೀಕೆಗಳಿಗೆ ಗುರಿಯಾಗಿದ್ದು ಸರ್ಕಾರವು NTA ಮುಖ್ಯಸ್ಥರನ್ನು ತೆಗೆದುಹಾಕಿತು. ಅದೇ ವೇಳ  ಅದರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಮತ್ತು ಸುಧಾರಿಸಲು ಸಮಿತಿಯನ್ನು ರಚಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Tue, 16 July 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ