AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NTA ಟ್ರಂಕ್‌ನಿಂದ NEET-UG ಪ್ರಶ್ನೆ ಪತ್ರಿಕೆ ಕದ್ದ ವ್ಯಕ್ತಿಗಳನ್ನು ಬಂಧಿಸಿದ ಸಿಬಿಐ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಮಂಗಳವಾರ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್‌ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪ್ರಶ್ನೆ ಪತ್ರಿಕೆಯನ್ನು ಕದ್ದು ಹಂಚುವಲ್ಲಿ ಇಬ್ಬರೂ ಭಾಗಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ಸಿಬಿಐ ಪ್ರಮುಖ ಆರೋಪಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಿಹಾರದ ನಳಂದಾದಲ್ಲಿ ಬಂಧಿಸಿತ್ತು.

NTA ಟ್ರಂಕ್‌ನಿಂದ NEET-UG ಪ್ರಶ್ನೆ ಪತ್ರಿಕೆ ಕದ್ದ ವ್ಯಕ್ತಿಗಳನ್ನು ಬಂಧಿಸಿದ ಸಿಬಿಐ
ನೀಟ್ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on:Jul 16, 2024 | 5:19 PM

ದೆಹಲಿ ಜುಲೈ 16: ನೀಟ್ (NEET-UG) ಪ್ರಶ್ನೆ ಪತ್ರಿಕೆ ಕದ್ದ ಇಬ್ಬರನ್ನು ಕೇಂದ್ರ ತನಿಖಾ ದಳ (CBI) ಮಂಗಳವಾರ ಬಂಧಿಸಿದೆ. ಬಂಧಿತರಲ್ಲಿ ಒಬ್ಬರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಟ್ರಂಕ್‌ನಿಂದ NEET-UG ಪೇಪರ್ ಅನ್ನು ಕದ್ದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಬಂಧಿತರನ್ನು ಪಾಟ್ನಾದ ಪಂಕಜ್ ಕುಮಾರ್ ಮತ್ತು ಹಜಾರಿಬಾಗ್‌ನ ರಾಜು ಸಿಂಗ್ ಎಂದು ಗುರುತಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪ್ರಶ್ನೆ ಪತ್ರಿಕೆಯನ್ನು ಕದ್ದು ಹಂಚುವಲ್ಲಿ ಇಬ್ಬರೂ ಭಾಗಿಯಾಗಿದ್ದರು. ಈ ತಿಂಗಳ ಆರಂಭದಲ್ಲಿ ಸಿಬಿಐ ಪ್ರಮುಖ ಆರೋಪಿ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಿಹಾರದ ನಳಂದಾದಲ್ಲಿ ಬಂಧಿಸಿತ್ತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಕೇಶ್ ರಂಜನ್ ಪ್ರಮುಖರು ಎಂದು ನಂಬಲಾಗಿದೆ. ರಂಜನ್ ನನ್ನು ಬಂಧಿಸಲು ಸಿಬಿಐ ಬಲೆ ಬೀಸಿ ಪಾಟ್ನಾ ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿತು. ಪ್ರಸ್ತುತ ಪ್ರಕರಣದಲ್ಲಿ ತನಿಖಾ ಸಂಸ್ಥೆ ಇದುವರೆಗೆ ಹನ್ನೆರಡು ಜನರನ್ನು ಬಂಧಿಸಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ ಬಂಧಿಸಲು ಸಿಬಿಐ ಸುಧಾರಿತ ತನಿಖಾ ತಂತ್ರಗಳನ್ನು ಬಳಸುತ್ತಿದೆ.

“ಐಪಿ ವಿಳಾಸಗಳು ಮತ್ತು ಇಮೇಲ್ ಸಂವಹನಗಳು ಸೇರಿದಂತೆ ಡಿಜಿಟಲ್ ಹೆಜ್ಜೆಗುರುತುಗಳ ವಿವರವಾದ ವಿಶ್ಲೇಷಣೆಯ ಮೂಲಕ ರಂಜನ್ ಅವರನ್ನು ಪತ್ತೆಹಚ್ಚಲಾಗಿದೆ. ಭ್ರಷ್ಟಾಚಾರ ಮತ್ತು ವಂಚನೆಯನ್ನು ಎದುರಿಸಲು ತನ್ನ ಪ್ರಯತ್ನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವಲ್ಲಿ ಏಜೆನ್ಸಿಯ ಸಮರ್ಪಣೆಯನ್ನು ಒತ್ತಿಹೇಳುತ್ತದೆ” ಎಂದು ಅಧಿಕಾರಿಯೊಬ್ಬರು  ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ

ಮೇ 5, 2024 ರಂದು ನಡೆದ NEET-UG ಪರೀಕ್ಷೆಯಲ್ಲಿ ವಂಚನೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ನಡಿದಿದೆ ಎಂಬ ಆರೋಪ ಕೇಳಿ ಬಂದಿತ್ತು.  ಪ್ರಕ್ರಿಯೆಯಲ್ಲಿಯೂ ವ್ಯತ್ಯಾಸಗಳಿದ್ದು, 67 ಆಕಾಂಕ್ಷಿಗಳು 720/ 720 ಅಂಕಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಬಿಎಂಡಬ್ಲ್ಯು ಗುದ್ದೋಡು ಪ್ರಕರಣ: ಆರೋಪಿ ಮಿಹಿರ್ ಶಾಗೆ ಜುಲೈ 30ರವರೆಗೆ ನ್ಯಾಯಾಂಗ ಬಂಧನ

ಪರೀಕ್ಷೆಯನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತೀವ್ರ ಟೀಕೆಗಳಿಗೆ ಗುರಿಯಾಗಿದ್ದು ಸರ್ಕಾರವು NTA ಮುಖ್ಯಸ್ಥರನ್ನು ತೆಗೆದುಹಾಕಿತು. ಅದೇ ವೇಳ  ಅದರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಮತ್ತು ಸುಧಾರಿಸಲು ಸಮಿತಿಯನ್ನು ರಚಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Tue, 16 July 24

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ