Manipur Violence: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು

ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ವಿಚಾರಣೆಯು ಕಾಲಮಿತಿಯಾಗಿರಬೇಕು ಮತ್ತು ಮಣಿಪುರದ ಹೊರಗೆ ನಡೆಯಬೇಕು ಎಂದು ಕೇಂದ್ರವು ಗುರುವಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

Manipur Violence: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು
ಸಿಬಿಐ
Follow us
|

Updated on: Jul 29, 2023 | 3:32 PM

ದೆಹಲಿ ಜುಲೈ 29:  ಮೇ 4 ರಂದು ಮಣಿಪುರದಲ್ಲಿ (Manipur Horror) ಜನರ ಗುಂಪೊಂದು ಮೂವರು ಕುಕಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಅವರಲ್ಲಿ ಒಬ್ಬಾಕೆಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ವಹಿಸಿಕೊಂಡಿದೆ. ತನಿಖೆಯನ್ನು ಕೈಗೆತ್ತಿಕೊಂಡ ನಂತರ, ಸಂಸ್ಥೆಯು ಮಣಿಪುರ ಪೊಲೀಸರು ದಾಖಲಿಸಿದ ಪ್ರಥಮ ಮಾಹಿತಿ ವರದಿಯನ್ನು (FIR) ಮರು ನೋಂದಾಯಿಸಿದೆ ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಈ ಭೀಕರ ಅಪರಾಧದ ವೈರಲ್ ವಿಡಿಯೊ ಜುಲೈ 19 ರಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಈ ವಿಡಿಯೊ ಘಟನೆ ನಡೆದು ಸುಮಾರು ಮೂರು ತಿಂಗಳ ನಂತರ ಬೆಳಕಿಗೆ ಬಂದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಮೇ 4 ರಂದು ಒಬ್ಬಾಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆಯ ಕುಟುಂಬದ ಇಬ್ಬರು ಪುರುಷರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ವಿಚಾರಣೆಯು ಕಾಲಮಿತಿಯಾಗಿರಬೇಕು ಮತ್ತು ಮಣಿಪುರದ ಹೊರಗೆ ನಡೆಯಬೇಕು ಎಂದು ಕೇಂದ್ರವು ಗುರುವಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಕೇಂದ್ರ ಸರ್ಕಾರವು ಈಗಿನ ಅಪರಾಧಗಳನ್ನು ತುಂಬಾ ಘೋರವೆಂದು ಪರಿಗಣಿಸುತ್ತದೆ.  ಅದನ್ನು ಗಂಭೀರವಾಗಿಯೇ ತೆಗೆದುಕೊಳ್ಳಬೇಕು. ಆದರೆ ನ್ಯಾಯವನ್ನು ನೋಡಬೇಕು. ಅದು ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ರಾಷ್ಟ್ರದಾದ್ಯಂತ ಪ್ರತಿಬಂಧಕ ಪರಿಣಾಮವನ್ನು ಬೀರುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ವಿಡಿಯೊ ವೈರಲ್ ಆದ ನಂತರ, ಇಬ್ಬರು ಮಹಿಳೆಯರ ಮೇಲಿನ ಹಲ್ಲೆಗಳು ಅಕ್ಷಮ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇತ್ತ ಕಾಂಗ್ರೆಸ್ ನೇತೃತ್ವದ ವಿಪಕ್ಷ ಗುಂಪುಗಳು ಮಣಿಪುರ ವಿಷಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿಯವರ ಹೇಳಿಕೆ ಮತ್ತು ನಂತರ ಉಭಯ ಸದನಗಳಲ್ಲಿ ಚರ್ಚೆಗೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: Manipur Violence: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ

ಈ ಪ್ರಕರಣದಲ್ಲಿ ಮಣಿಪುರ ಪೊಲೀಸರು ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್ ವೀಡಿಯೊದಲ್ಲಿ ಕಂಡುಬರುವ ಕೆಲವರು ಸೇರಿದಂತೆ ಇತರರ ಹುಡುಕಾಟ ನಡೆಯುತ್ತಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಬಿಐನ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಮಣಿಪುರದಲ್ಲಿ ಹಿಂಸಾಚಾರ ಮತ್ತು ರಾಜ್ಯದ ಶಸ್ತ್ರಾಗಾರಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿಗೆ ಸಂಬಂಧಿಸಿದ ಇತರ ಆರು ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ಪೊಲೀಸರು ಬಂಧಿಸಿರುವ ಆರೋಪಿಗಳನ್ನು ಏಜೆನ್ಸಿ ವಶಕ್ಕೆ ಪಡೆದು ವಿಚಾರಣೆ ನಡೆಸುವುದಲ್ಲದೆ, ಸಂತ್ರಸ್ತರು, ಅವರ ಕುಟುಂಬಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತದೆ ಎಂದು ಸಿಬಿಐ ತನಿಖೆಯ ಪರಿಚಯವಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?