AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾ ರೈಲು ಅಪಘಾತ: ಎಫ್ಐಆರ್ ದಾಖಲಿಸಿದ ಸಿಬಿಐ

ಈ ಅಪಘಾತದ ಕುರಿತು 03.06.2023 ರ GRPS ಪ್ರಕರಣ ಸಂಖ್ಯೆ.64 ರಡಿಯಲ್ಲಿ ಬಾಲಸೋರ್ GRPS, ಜಿಲ್ಲಾ ಕಟಕ್ (ಒಡಿಶಾ) ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

Odisha Train Accident: ಒಡಿಶಾ ರೈಲು ಅಪಘಾತ: ಎಫ್ಐಆರ್ ದಾಖಲಿಸಿದ ಸಿಬಿಐ
ಒಡಿಶಾ ರೈಲು ಅಪಘಾತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 06, 2023 | 5:15 PM

Share

ಒಡಿಶಾ ರೈಲು ಅಪಘಾತದ ತನಿಖೆಯನ್ನು (Odisha Train Accident) ಕೇಂದ್ರೀಯ ತನಿಖಾ ದಳ (CBI) ಮಂಗಳವಾರ ವಹಿಸಿಕೊಂಡಿದ್ದು ಎಫ್‌ಐಆರ್ (FIR) ದಾಖಲಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್, ಯಶವಂತಪುರ-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡಿದಿದ್ದ ಒಡಿಶಾದ ಬಾಲಸೋರ್‌ನ ಬಹನಾಗ ಬಜಾರ್‌ನಲ್ಲಿ ತನಿಖೆ ನಡೆಸಲು ಸಿಬಿಐ, ವಿಧಿವಿಜ್ಞಾನ ತಜ್ಞರೊಂದಿಗೆ ಬಾಲಸೋರ್‌ಗೆ ತಲುಪಿತ್ತು. ಈ ಅಪಘಾತದ ಕುರಿತು 03.06.2023 ರ GRPS ಪ್ರಕರಣ ಸಂಖ್ಯೆ.64 ರಡಿಯಲ್ಲಿ ಬಾಲಸೋರ್ GRPS, ಜಿಲ್ಲಾ ಕಟಕ್ (ಒಡಿಶಾ) ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ನಿಗದಿತ ಕಾರ್ಯವಿಧಾನವನ್ನು ಅನುಸರಿಸಿ, ಜೂನ್ 3 ರಂದು ಐಪಿಸಿ ಸೆಕ್ಷನ್‌ಗಳು 337, 338, 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಮತ್ತು 34 (ಸಾಮಾನ್ಯ ಉದ್ದೇಶ), ಮತ್ತು ಸೆಕ್ಷನ್ 153 (ಕಾನೂನುಬಾಹಿರ ಮತ್ತು ನಿರ್ಲಕ್ಷ್ಯದಿಂದ ರೈಲ್ವೆ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡುವುದು), ರೈಲ್ವೇ ಕಾಯಿದೆಯ 154 ಮತ್ತು 175 (ಜೀವಕ್ಕೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಬಾಲಸೋರ್ ಜಿಆರ್‌ಪಿ ದಾಖಲಿಸಿದ ಎಫ್‌ಐಆರ್ ಅನ್ನು ಕೇಂದ್ರೀಯ ಸಂಸ್ಥೆ ವಹಿಸಿಕೊಂಡಿದೆ.

ಕೇಂದ್ರೀಯ ತನಿಖಾ ದಳವು ರೈಲ್ವೇ ಸಚಿವಾಲಯದ ಕೋರಿಕೆ, ಒಡಿಶಾ ಸರ್ಕಾರದ ಒಪ್ಪಿಗೆ ಮತ್ತು ಡಿಒಪಿಟಿ (ಭಾರತ ಸರ್ಕಾರ) ದಿಂದ ಹೆಚ್ಚಿನ ಆದೇಶಗಳ ಮೇರೆಗೆ ಪ್ರಕರಣ ದಾಖಲಿಸಿದೆ ಎಂದು ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ ರೈಲುಗಳ ಉಪಸ್ಥಿತಿಯನ್ನು ಪತ್ತೆಹಚ್ಚುವ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಮ್‌ನಲ್ಲಿ ದೋಷ ಎತ್ತಿ ತೋರಿಸಿದ ನಂತರ ರೈಲ್ವೇ ಸಚಿವಾಲಯವು ಕೇಂದ್ರ ತನಿಖಾ ಸಂಸ್ಥೆಯನ್ನು ನಿಯೋಜಿಸಿದೆ. ಅಧಿಕಾರಿಗಳು ಒಡಿಶಾ ರೈಲು ಅಪಘಾತದ ಹಿಂದೆ ವಿಧ್ವಂಸಕ ಕೃತ್ಯ ಇದೆ ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾ ರೈಲು ಅಪಘಾತದ ತನಿಖೆ ಆರಂಭಿಸಿದ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ

ರೈಲ್ವೆಯ ಕಾರ್ಯನಿರ್ವಹಣೆಯಲ್ಲಿ ಕಡಿಮೆ ಪರಿಣತಿಯನ್ನು ಹೊಂದಿರುವ ಏಜೆನ್ಸಿಗೆ ಪ್ರಕರಣದ ತಳಹದಿಯನ್ನು ಪಡೆಯಲು ರೈಲು ಸುರಕ್ಷತೆ ಮತ್ತು ವಿಧಿವಿಜ್ಞಾನ ತಜ್ಞರ ಸಹಾಯ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ