Odisha Train Accident: ಒಡಿಶಾ ರೈಲು ಅಪಘಾತ: ಎಫ್ಐಆರ್ ದಾಖಲಿಸಿದ ಸಿಬಿಐ

ಈ ಅಪಘಾತದ ಕುರಿತು 03.06.2023 ರ GRPS ಪ್ರಕರಣ ಸಂಖ್ಯೆ.64 ರಡಿಯಲ್ಲಿ ಬಾಲಸೋರ್ GRPS, ಜಿಲ್ಲಾ ಕಟಕ್ (ಒಡಿಶಾ) ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

Odisha Train Accident: ಒಡಿಶಾ ರೈಲು ಅಪಘಾತ: ಎಫ್ಐಆರ್ ದಾಖಲಿಸಿದ ಸಿಬಿಐ
ಒಡಿಶಾ ರೈಲು ಅಪಘಾತ
ರಶ್ಮಿ ಕಲ್ಲಕಟ್ಟ

Updated on: Jun 06, 2023 | 5:15 PM

ಒಡಿಶಾ ರೈಲು ಅಪಘಾತದ ತನಿಖೆಯನ್ನು (Odisha Train Accident) ಕೇಂದ್ರೀಯ ತನಿಖಾ ದಳ (CBI) ಮಂಗಳವಾರ ವಹಿಸಿಕೊಂಡಿದ್ದು ಎಫ್‌ಐಆರ್ (FIR) ದಾಖಲಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್, ಯಶವಂತಪುರ-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡಿದಿದ್ದ ಒಡಿಶಾದ ಬಾಲಸೋರ್‌ನ ಬಹನಾಗ ಬಜಾರ್‌ನಲ್ಲಿ ತನಿಖೆ ನಡೆಸಲು ಸಿಬಿಐ, ವಿಧಿವಿಜ್ಞಾನ ತಜ್ಞರೊಂದಿಗೆ ಬಾಲಸೋರ್‌ಗೆ ತಲುಪಿತ್ತು. ಈ ಅಪಘಾತದ ಕುರಿತು 03.06.2023 ರ GRPS ಪ್ರಕರಣ ಸಂಖ್ಯೆ.64 ರಡಿಯಲ್ಲಿ ಬಾಲಸೋರ್ GRPS, ಜಿಲ್ಲಾ ಕಟಕ್ (ಒಡಿಶಾ) ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ನಿಗದಿತ ಕಾರ್ಯವಿಧಾನವನ್ನು ಅನುಸರಿಸಿ, ಜೂನ್ 3 ರಂದು ಐಪಿಸಿ ಸೆಕ್ಷನ್‌ಗಳು 337, 338, 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಮತ್ತು 34 (ಸಾಮಾನ್ಯ ಉದ್ದೇಶ), ಮತ್ತು ಸೆಕ್ಷನ್ 153 (ಕಾನೂನುಬಾಹಿರ ಮತ್ತು ನಿರ್ಲಕ್ಷ್ಯದಿಂದ ರೈಲ್ವೆ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡುವುದು), ರೈಲ್ವೇ ಕಾಯಿದೆಯ 154 ಮತ್ತು 175 (ಜೀವಕ್ಕೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಬಾಲಸೋರ್ ಜಿಆರ್‌ಪಿ ದಾಖಲಿಸಿದ ಎಫ್‌ಐಆರ್ ಅನ್ನು ಕೇಂದ್ರೀಯ ಸಂಸ್ಥೆ ವಹಿಸಿಕೊಂಡಿದೆ.

ಕೇಂದ್ರೀಯ ತನಿಖಾ ದಳವು ರೈಲ್ವೇ ಸಚಿವಾಲಯದ ಕೋರಿಕೆ, ಒಡಿಶಾ ಸರ್ಕಾರದ ಒಪ್ಪಿಗೆ ಮತ್ತು ಡಿಒಪಿಟಿ (ಭಾರತ ಸರ್ಕಾರ) ದಿಂದ ಹೆಚ್ಚಿನ ಆದೇಶಗಳ ಮೇರೆಗೆ ಪ್ರಕರಣ ದಾಖಲಿಸಿದೆ ಎಂದು ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ ರೈಲುಗಳ ಉಪಸ್ಥಿತಿಯನ್ನು ಪತ್ತೆಹಚ್ಚುವ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಮ್‌ನಲ್ಲಿ ದೋಷ ಎತ್ತಿ ತೋರಿಸಿದ ನಂತರ ರೈಲ್ವೇ ಸಚಿವಾಲಯವು ಕೇಂದ್ರ ತನಿಖಾ ಸಂಸ್ಥೆಯನ್ನು ನಿಯೋಜಿಸಿದೆ. ಅಧಿಕಾರಿಗಳು ಒಡಿಶಾ ರೈಲು ಅಪಘಾತದ ಹಿಂದೆ ವಿಧ್ವಂಸಕ ಕೃತ್ಯ ಇದೆ ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾ ರೈಲು ಅಪಘಾತದ ತನಿಖೆ ಆರಂಭಿಸಿದ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ

ರೈಲ್ವೆಯ ಕಾರ್ಯನಿರ್ವಹಣೆಯಲ್ಲಿ ಕಡಿಮೆ ಪರಿಣತಿಯನ್ನು ಹೊಂದಿರುವ ಏಜೆನ್ಸಿಗೆ ಪ್ರಕರಣದ ತಳಹದಿಯನ್ನು ಪಡೆಯಲು ರೈಲು ಸುರಕ್ಷತೆ ಮತ್ತು ವಿಧಿವಿಜ್ಞಾನ ತಜ್ಞರ ಸಹಾಯ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us