AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Internet ಗೆ ಶರವೇಗ? 4ಜಿ ತರಂಗಾಂತರ ಹರಾಜಿಗೆ ಕೇಂದ್ರ ಕ್ಯಾಬಿನೆಟ್​ ಅಸ್ತು

ಒಟ್ಟೂ 2251.25 ಮೆಗಾಹರ್ಟ್ಸ್​ಗಳನ್ನು ಕೇಂದ್ರ ಸರ್ಕಾರ ಹರಾಜಿಗೆ ಇಡುತ್ತಿದೆ.  ಇದರಿಂದ, ಸರ್ಕಾರಕ್ಕೆ 3.92 ಲಕ್ಷ ಕೋಟಿ ರೂಪಾಯಿ ಸಿಗುವ ಸಾಧ್ಯತೆ ಇದೆ. ಮಾರ್ಚ್​ 2021ರಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

Internet ಗೆ ಶರವೇಗ? 4ಜಿ ತರಂಗಾಂತರ ಹರಾಜಿಗೆ ಕೇಂದ್ರ ಕ್ಯಾಬಿನೆಟ್​ ಅಸ್ತು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 5:19 PM

Share

ನವದೆಹಲಿ: ದೇಶದಲ್ಲಿ Internet ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ದೂರ ಸಂಪರ್ಕದಲ್ಲಿ ಕ್ಷಮತೆ ಸಾಧಿಸಲು 4ಜಿ ತರಂಗಾಂತರಗಳನ್ನ ಹರಾಜು ಹಾಕಲಾಗಿದೆ. ಅಂದಾಜು 3.92 ಲಕ್ಷ ಕೋಟಿ ರೂಪಾಯಿಗೆ ಹರಾಜು ಹಾಕಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

700 ಮೆಗಾಹರ್ಟ್ಸ್​, 800 ಮೆಗಾಹರ್ಟ್ಸ್​, 900 ಮೆಗಾಹರ್ಟ್ಸ್​, 1800 ಮೆಗಾಹರ್ಟ್ಸ್​, 2100 ಮೆಗಾಹರ್ಟ್ಸ್​, 2300 ಮೆಗಾಹರ್ಟ್ಸ್​ ಹಾಗೂ 2500 ಮೆಗಾಹರ್ಟ್ಸ್ ಫ್ರೀಕ್ವೆನ್ಸಿಯ ಬ್ಯಾಂಡ್​ಗಳನ್ನು ಮಾರಾಟ ಮಾಡಲಾಗುತ್ತಿದೆ. 20 ವರ್ಷಗಳ ಕಾಲ ಇದರ ವ್ಯಾಲಿಡಿಟಿ ಇರಲಿದೆ.

ಒಟ್ಟೂ 2251.25 ಮೆಗಾಹರ್ಟ್ಸ್​ಗಳನ್ನು ಕೇಂದ್ರ ಸರ್ಕಾರ ಹರಾಜಿಗೆ ಇಡುತ್ತಿದೆ.  ಇದರಿಂದ, ಸರ್ಕಾರಕ್ಕೆ 3.92 ಲಕ್ಷ ಕೋಟಿ ರೂಪಾಯಿ ಸಿಗುವ ಸಾಧ್ಯತೆ ಇದೆ. ಮಾರ್ಚ್​ 2021ರಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. 2016ರಲ್ಲಿ ಕೊನೆಯದಾಗಿ ತರಂಗಾಂತರಗಳನ್ನು ಹರಾಜು ಹಾಕಲಾಗಿತ್ತು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ  ಸಚಿವ ರವಿಶಂಕರ್ ಪ್ರಸಾದ್​ ತಿಳಿಸಿದ್ದಾರೆ.

ಅಂದಹಾಗೆ, ಕೇಂದ್ರ ಸರ್ಕಾರ 5ಜಿ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಹೀಗಾಗಿ, ಮಾರ್ಚ್​​ನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆ ಕೇವಲ 4ಜಿಗೆ ಮಾತ್ರ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇಂದು, ಕೇಂದ್ರ ಸರ್ಕಾರ ಸಂಪುಟ ಸಭೆ ಕರೆದಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೆ, ಕೆಲ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ಕೂಡ ದೊರೆತಿದೆ.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ