AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Internet ಗೆ ಶರವೇಗ? 4ಜಿ ತರಂಗಾಂತರ ಹರಾಜಿಗೆ ಕೇಂದ್ರ ಕ್ಯಾಬಿನೆಟ್​ ಅಸ್ತು

ಒಟ್ಟೂ 2251.25 ಮೆಗಾಹರ್ಟ್ಸ್​ಗಳನ್ನು ಕೇಂದ್ರ ಸರ್ಕಾರ ಹರಾಜಿಗೆ ಇಡುತ್ತಿದೆ.  ಇದರಿಂದ, ಸರ್ಕಾರಕ್ಕೆ 3.92 ಲಕ್ಷ ಕೋಟಿ ರೂಪಾಯಿ ಸಿಗುವ ಸಾಧ್ಯತೆ ಇದೆ. ಮಾರ್ಚ್​ 2021ರಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

Internet ಗೆ ಶರವೇಗ? 4ಜಿ ತರಂಗಾಂತರ ಹರಾಜಿಗೆ ಕೇಂದ್ರ ಕ್ಯಾಬಿನೆಟ್​ ಅಸ್ತು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 16, 2020 | 5:19 PM

Share

ನವದೆಹಲಿ: ದೇಶದಲ್ಲಿ Internet ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತು ದೂರ ಸಂಪರ್ಕದಲ್ಲಿ ಕ್ಷಮತೆ ಸಾಧಿಸಲು 4ಜಿ ತರಂಗಾಂತರಗಳನ್ನ ಹರಾಜು ಹಾಕಲಾಗಿದೆ. ಅಂದಾಜು 3.92 ಲಕ್ಷ ಕೋಟಿ ರೂಪಾಯಿಗೆ ಹರಾಜು ಹಾಕಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

700 ಮೆಗಾಹರ್ಟ್ಸ್​, 800 ಮೆಗಾಹರ್ಟ್ಸ್​, 900 ಮೆಗಾಹರ್ಟ್ಸ್​, 1800 ಮೆಗಾಹರ್ಟ್ಸ್​, 2100 ಮೆಗಾಹರ್ಟ್ಸ್​, 2300 ಮೆಗಾಹರ್ಟ್ಸ್​ ಹಾಗೂ 2500 ಮೆಗಾಹರ್ಟ್ಸ್ ಫ್ರೀಕ್ವೆನ್ಸಿಯ ಬ್ಯಾಂಡ್​ಗಳನ್ನು ಮಾರಾಟ ಮಾಡಲಾಗುತ್ತಿದೆ. 20 ವರ್ಷಗಳ ಕಾಲ ಇದರ ವ್ಯಾಲಿಡಿಟಿ ಇರಲಿದೆ.

ಒಟ್ಟೂ 2251.25 ಮೆಗಾಹರ್ಟ್ಸ್​ಗಳನ್ನು ಕೇಂದ್ರ ಸರ್ಕಾರ ಹರಾಜಿಗೆ ಇಡುತ್ತಿದೆ.  ಇದರಿಂದ, ಸರ್ಕಾರಕ್ಕೆ 3.92 ಲಕ್ಷ ಕೋಟಿ ರೂಪಾಯಿ ಸಿಗುವ ಸಾಧ್ಯತೆ ಇದೆ. ಮಾರ್ಚ್​ 2021ರಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. 2016ರಲ್ಲಿ ಕೊನೆಯದಾಗಿ ತರಂಗಾಂತರಗಳನ್ನು ಹರಾಜು ಹಾಕಲಾಗಿತ್ತು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ  ಸಚಿವ ರವಿಶಂಕರ್ ಪ್ರಸಾದ್​ ತಿಳಿಸಿದ್ದಾರೆ.

ಅಂದಹಾಗೆ, ಕೇಂದ್ರ ಸರ್ಕಾರ 5ಜಿ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಹೀಗಾಗಿ, ಮಾರ್ಚ್​​ನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆ ಕೇವಲ 4ಜಿಗೆ ಮಾತ್ರ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇಂದು, ಕೇಂದ್ರ ಸರ್ಕಾರ ಸಂಪುಟ ಸಭೆ ಕರೆದಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೆ, ಕೆಲ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ಕೂಡ ದೊರೆತಿದೆ.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ