AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಸೆಮಿಕಂಡಕ್ಟರ್ ಅಭಿವೃದ್ಧಿ ಮತ್ತು ಡಿಸ್ ಪ್ಲೇ ಉತ್ಪಾದನೆಗೆ ಪೂರಕ ವ್ಯವಸ್ಥೆ ಯೋಜನೆಗೆ ಕೇಂದ್ರ ಸಂಪುಟ ಅಸ್ತು

ತಂತ್ರಜ್ಞಾನದ ಎಲ್ಲ ವಿಧಾನಗಳಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಗಳಿಗೆ ಮತ್ತು ಸಂಯುಕ್ತ ಅರೆವಾಹಕಗಳಿಗೆ, ಪ್ಯಾಕೇಜಿಂಗ್ ಮತ್ತು ಇತರೆ ಸೆಮಿಕಂಡ್ಕರ್ ಸೌಕರ್ಯಗಳಿಗೆ ಶೇ.50ರಷ್ಟು ಪ್ರೋತ್ಸಾಹಧನ ನೀಡಲಾಗಿದೆ.

ದೇಶದಲ್ಲಿ ಸೆಮಿಕಂಡಕ್ಟರ್ ಅಭಿವೃದ್ಧಿ ಮತ್ತು ಡಿಸ್ ಪ್ಲೇ ಉತ್ಪಾದನೆಗೆ ಪೂರಕ ವ್ಯವಸ್ಥೆ ಯೋಜನೆಗೆ ಕೇಂದ್ರ ಸಂಪುಟ ಅಸ್ತು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Sep 21, 2022 | 10:16 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಅಧ್ಯಕ್ಷತೆಯಲ್ಲಿ ಇಂದು(ಬುಧವಾರ) ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತದಲ್ಲಿ ಸೆಮಿಕಂಡಕ್ಟರ್(Semiconductors) ಅಭಿವೃದ್ಧಿ ಕಾರ್ಯಕ್ರಮ ಮತ್ತು ಡಿಸ್ ಪ್ಲೇ(Display Manufacturing) ಉತ್ಪಾದನೆಗೆ ಪೂರಕ ವ್ಯವಸ್ಥೆ ನಿರ್ಮಾಣ ಕಾರ್ಯಕ್ರಮದಲ್ಲಿ ಕೆಲವು ಮಾರ್ಪಾಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಾಗೂ ತಂತ್ರಜ್ಞಾನದ ಎಲ್ಲ ವಿಧಾನಗಳಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಗಳಿಗೆ ಮತ್ತು ಸಂಯುಕ್ತ ಅರೆವಾಹಕಗಳಿಗೆ, ಪ್ಯಾಕೇಜಿಂಗ್ ಮತ್ತು ಇತರೆ ಸೆಮಿಕಂಡ್ಕರ್ ಸೌಕರ್ಯಗಳಿಗೆ ಶೇ.50ರಷ್ಟು ಪ್ರೋತ್ಸಾಹಧನ ಘೋಷಿಸಲಾಗಿದೆ.

ಕಾರ್ಯಕ್ರಮದಲ್ಲಿ ಈ ಕೆಳಗಿನ ಮಾರ್ಪಾಡಿಗೆ ಅನುಮೋದನೆ ನೀಡಲಾಗಿದೆ

  1. ಭಾರತದಲ್ಲಿ ಸೆಮಿಕಂಡಕ್ಟರ್ ಫ್ಯಾಬ್‌ಗಳನ್ನು ಸ್ಥಾಪಿಸುವ ಯೋಜನೆಯಡಿಯಲ್ಲಿ ಎಲ್ಲಾ ತಂತ್ರಜ್ಞಾನ ನೋಡ್‌ಗಳಿಗೆ ಪಾರಿ-ಪಾಸು ಆಧಾರದ ಮೇಲೆ ಯೋಜನಾ ವೆಚ್ಚದ ಶೇ.50ರಷ್ಟು ಆರ್ಥಿಕ ಬೆಂಬಲ.
  2. ಡಿಸ್‌ಪ್ಲೇ ಫ್ಯಾಬ್‌ಗಳನ್ನು ಸ್ಥಾಪಿಸುವ ಯೋಜನೆಯ ಅಡಿಯಲ್ಲಿ ಪಾರಿ-ಪಾಸು ಆಧಾರದ ಮೇಲೆ ಯೋಜನಾ ವೆಚ್ಚದ ಶೇ.50ರಷ್ಟು ಆರ್ಥಿಕ ನೆರವು.
  3. ಭಾರತದಲ್ಲಿ ಕಾಂಪೌಂಡ್ ಸೆಮಿಕಂಡಕ್ಟರ್ಸ್/ಸಿಲಿಕಾನ್ ಫೋಟೊನಿಕ್ಸ್/ಸೆನ್ಸಾರ್ಸ್ ಫ್ಯಾಬ್ ಮತ್ತು ಸೆಮಿಕಂಡಕ್ಟರ್ ಎಟಿಎಂಪಿ/ಓಎಸ್ಎಟಿ ಸೌಲಭ್ಯಗಳನ್ನು ಸ್ಥಾಪಿಸುವ ಯೋಜನೆಯ ಅಡಿಯಲ್ಲಿ ಪಾರಿ-ಪಾಸು ಆಧಾರದ ಮೇಲೆ ಬಂಡವಾಳ ವೆಚ್ಚದ ಶೇ.50 ರಷ್ಟು ಆರ್ಥಿಕ ನೆರವು. ಅಲ್ಲದೆ, ಹೆಚ್ಚುವರಿಯಾಗಿ ಯೋಜನೆಯಡಿಯಲ್ಲಿ ನಿರ್ದಿಷ್ಟ ಗುರಿ ಹೊಂದಿರುವ ತಂತ್ರಜ್ಞಾನಗಳು ಡಿಸ್ಕ್ರೀಟ್ ಸೆಮಿಕಂಡಕ್ಟರ್ ಫ್ಯಾಬ್‌ಗಳನ್ನು ಒಳಗೊಂಡಿರುತ್ತದೆ.

ಪರಿಷ್ಕೃತ ಕಾರ್ಯಕ್ರಮದಡಿಯಲ್ಲಿ, ಸೆಮಿಕಂಡಕ್ಟರ್ ಫ್ಯಾಬ್‌ಗಳನ್ನು ಸ್ಥಾಪಿಸಲು ಎಲ್ಲಾ ತಂತ್ರಜ್ಞಾನ ನೋಡ್‌ಗಳಲ್ಲಿ ಯೋಜನಾ ವೆಚ್ಚದ ಶೇ.50 ರಷ್ಟು ಏಕರೂಪದ ಆರ್ಥಿಕ ಬೆಂಬಲ ನೀಡಲಾಗುವುದು. ಸಂಯುಕ್ತ ಸೆಮಿಕಂಡಕ್ಟರ್‌ಗಳು ಮತ್ತು ಸುಧಾರಿತ ಪ್ಯಾಕೇಜಿಂಗ್‌ಗಳ ಸ್ಥಾಪಿತ ತಂತ್ರಜ್ಞಾನ ಮತ್ತು ಸ್ವರೂಪವನ್ನು ಗಮನಿಸಿದರೆ, ಪರಿಷ್ಕೃತ ಕಾರ್ಯಕ್ರಮದಡಿ ಸಂಯುಕ್ತ ಸೆಮಿಕಂಡಕ್ಟರ್‌ಗಳು / ಸಿಲಿಕಾನ್ ಫೋಟೊನಿಕ್ಸ್ / ಸೆನ್ಸಾರ್ ಗಳು / ಡಿಸ್ಕ್ರೀಟ್ ಸೆಮಿಕಂಡಕ್ಟರ್‌ಗಳ ಫ್ಯಾಬ್‌ಗಳು ಮತ್ತು ಎಟಿಎಂಪಿ/ಒಎಸ್ ಎಟಿ ಗಳನ್ನು ಸ್ಥಾಪಿಸಲು ಪಾರಿ-ಪಾಸು ಮಾದರಿಯಲ್ಲಿ ಬಂಡವಾಳ ವೆಚ್ಚದ ಶೇ.50 ರಷ್ಟು ಆರ್ಥಿಕ ನೆರವನ್ನು ಒದಗಿಸುತ್ತದೆ.

ಈ ಕಾರ್ಯಕ್ರಮವು ಭಾರತದಲ್ಲಿ ಫ್ಯಾಬ್‌ಗಳನ್ನು ಸ್ಥಾಪಿಸಲು ಅನೇಕ ಜಾಗತಿಕ ಸೆಮಿಕಂಡಕ್ಟರ್ ಉದ್ಯಮಗಳನ್ನು ಆಕರ್ಷಿಸಿದೆ. ಪರಿಷ್ಕರಿಸಿದ ಕಾರ್ಯಕ್ರಮವು, ಭಾರತದಲ್ಲಿ ಸೆಮಿಕಂಡಕ್ಟರ್ ಮತ್ತು ಡಿಸ್ ಪ್ಲೇ ಉತ್ಪಾದನೆಯಲ್ಲಿ ಹೂಡಿಕೆಗಳಿಗೆ ವೇಗ ನೀಡುತ್ತದೆ. ಸಂಭಾವ್ಯ ಹೂಡಿಕೆದಾರರೊಂದಿಗಿನ ಚರ್ಚೆಯ ಆಧಾರದ ಮೇಲೆ, ಮೊದಲ ಸೆಮಿಕಂಡಕ್ಟರ್ ಸೌಲಭ್ಯ ಸ್ಥಾಪನೆ ಕಾರ್ಯ ಶೀಘ್ರವೇ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಭಾರತದ ಸೆಮಿಕಂಡಕ್ಟರ್ ಮಿಷನ್‌ಗೆ ಸಲಹೆ ನೀಡಲು ಉದ್ಯಮ ಮತ್ತು ಶೈಕ್ಷಣಿಕ ವಲಯದ ಜಾಗತಿಕ ತಜ್ಞರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ- ಭಾರತದಲ್ಲಿ ಸೆಮಿಕಂಡಕ್ಟರ್‌ಗಳ ಅಭಿವೃದ್ಧಿ ಮತ್ತು ಡಿಸ್ ಪ್ಲೇ ಉತ್ಪಾದನೆಗೆ ಪೂರಕ ಪರಿಸರ ವ್ಯವಸ್ಥೆ ಅಭಿವೃದ್ಧಿಗೆ ಅದು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದೆ. ಸಲಹಾ ಸಮಿತಿಯು ಸೆಮಿಕಂಡಕ್ಟರ್ ಫ್ಯಾಬ್‌ಗಳು / ಸಿಲಿಕಾನ್ ಫೋಟೊನಿಕ್ಸ್ / ಸೆನ್ಸಾರ್‌ಗಳು / ಡಿಸ್ಕ್ರೀಟ್ ಸೆಮಿಕಂಡಕ್ಟರ್ ಫ್ಯಾಬ್‌ಗಳು ಮತ್ತು ಎಟಿಎಂಪಿ/ಒಎಸ್‌ಎಟಿಯ ಎಲ್ಲಾ ತಂತ್ರಜ್ಞಾನ ನೋಡ್‌ಗಳಿಗೆ ಸರ್ವಾನುಮತದಿಂದ ಏಕರೂಪದ ಬೆಂಬಲ ಶಿಫಾರಸು ಮಾಡಿದ್ದು, ಅದನ್ನು ಸರ್ಕಾರವು ಈಗಾಗಲೇ ಅಂಗೀಕರಿಸಿದೆ. 45ಎನ್ ಎಂ ಮತ್ತು ಅದಕ್ಕಿಂತ ಅಧಿಕ ತಂತ್ರಜ್ಞಾನದ ನೋಡ್‌ಗಳು ಹೆಚ್ಚಿನ ಬೇಡಿಕೆ ಹೊಂದಿವೆ, ಅವು ಆಟೋಮೋಟಿವ್, ಇಂಧನ ಮತ್ತು ದೂರಸಂಪರ್ಕ ಅಪ್ಲಿಕೇಷನ್‌ಗಳನ್ನು ಒಳಗೊಂಡಿರುತ್ತದೆ. ಅಲ್ಲದೆ, ಈ ವಿಭಾಗವು ಒಟ್ಟಾರೆ ಸೆಮಿಕಂಡಕ್ಟರ್ ಮಾರುಕಟ್ಟೆಯ ಸುಮಾರು ಶೇ 50 ರಷ್ಟು ಪಾಲು ಹೊಂದಿದೆ.

Published On - 10:16 pm, Wed, 21 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ