AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ
ಸಂಸತ್ ಭವನ
TV9 Web
| Edited By: |

Updated on: Jun 23, 2021 | 9:21 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ಈ ಯೋಜನೆಯಡಿ ಅರ್ಹ ಕುಟುಂಬಗಳ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯ ಸಿಗಲಿದೆ. ಮೊದಲಿಗೆ ಎಪ್ರಿಲ್, ಮೇ ಮತ್ತು ಜೂನ್​ನ ಮೂರು ತಿಂಗಳ ಅವಧಿಗೆ ಎಂದು ಯೋಜನೆಯನ್ನು ಜಾರಿ ಮಾಡಲಾಗಿತ್ತು. ಇದೀಗ ಮತ್ತೆ 5 ತಿಂಗಳ ಅವಧಿಗೆ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಕೆಲ ದಿನಗಳ ಹಿಂದೆ ಪ್ರಧಾನಿ ಪ್ರಕಟಿಸಿದ್ದರು. ಈ ಪ್ರಸ್ತಾವಕ್ಕೆ ಈಗ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಜಾರಿ ಮಾಡಲು ಕೇಂದ್ರ ಸರ್ಕಾರವು ₹ 67,266.44 ಕೋಟಿ ವೆಚ್ಚ ಮಾಡಲಿದೆ. ಈ ಯೋಜನೆಯಡಿ ರಾಜ್ಯಗಳಿಗೆ 204 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಸಿಗಲಿದೆ ಎಂದು ಕೇಂದ್ರ ಆಹಾರ ಇಲಾಖೆ ವಿವರಿಸಿದೆ.

ಕೇಂದ್ರ ಸಚಿವ ಸಂಪುಟವು ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅದರಂತೆ ಸೆಂಟ್ರಲ್ ರೈಲ್​ಸೈಡ್​ ವೇರ್​ಹೌಸ್​ ಕಂಪನಿಯನ್ನು ಸೆಂಟ್ರಲ್ ವೇರ್​ಹೌಸಿಂಗ್ ಕಾರ್ಪೋರೇಷನ್​​ನಲ್ಲಿ ವಿಲೀನಗೊಳಿಸಲು ಕೇಂದ್ರ ಸಂಪುಟ ತೀರ್ಮಾನಿಸಿದೆ. ಮಿನಿಮಮ್ ಗವರ್ನಮೆಂಟ್ – ಮ್ಯಾಗ್ಸಿಮಮ್ ಗವರ್ನನ್ಸ್​ ಘೋಷಣೆಯ ಆಶಯವನ್ನು ಜಾರಿ ಮಾಡುವ ಉದ್ದೇಶದಿಂದ ವಿಲೀನದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ಹೇಳಿದೆ.

ವಿಲೀನದ ನಂತರ ನಿರ್ವಹಣೆ ವೆಚ್ಚ ₹ 5 ಕೋಟಿಗೂ ಅಧಿಕ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಹೊಸದಾಗಿ ಇನ್ನೂ 50 ರೈಲ್​ಸೈಡ್ ವೇರ್​ಹೌಸ್​ನಿರ್ಮಾಣಕ್ಕೆ ಈ ಕ್ರಮದಿಂದ ಉಪಯೋಗವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

(Central Cabinet Okays Narendra Modi Proposal of Food for Poor to extend another three months)

ಇದನ್ನೂ ಓದಿ: ಬೆಂಗಳೂರಿನ ದೇವಾಲಯದ ಅರ್ಚಕರಿಗೆ, ಸಿಬ್ಬಂದಿಗಳಿಗೆ ಸುಹರ್ತ್ ಫೌಂಡೇಶನ್​ನಿಂದ ಉಚಿತ ಪಡಿತರ ಕಿಟ್ ವಿತರಣೆ

ಇದನ್ನೂ ಓದಿ: ಆಹಾರ ಸಚಿವರ ತವರಿನ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಂಶ ಆರೋಪ; ಬಡವರ ಹೊಟ್ಟೆಗೆ ಏನು ಗತಿ ಎಂದು ಜನರ ಆಕ್ರೋಶ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು