AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ
ಸಂಸತ್ ಭವನ
TV9 Web
| Edited By: |

Updated on: Jun 23, 2021 | 9:21 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ಈ ಯೋಜನೆಯಡಿ ಅರ್ಹ ಕುಟುಂಬಗಳ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯ ಸಿಗಲಿದೆ. ಮೊದಲಿಗೆ ಎಪ್ರಿಲ್, ಮೇ ಮತ್ತು ಜೂನ್​ನ ಮೂರು ತಿಂಗಳ ಅವಧಿಗೆ ಎಂದು ಯೋಜನೆಯನ್ನು ಜಾರಿ ಮಾಡಲಾಗಿತ್ತು. ಇದೀಗ ಮತ್ತೆ 5 ತಿಂಗಳ ಅವಧಿಗೆ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಕೆಲ ದಿನಗಳ ಹಿಂದೆ ಪ್ರಧಾನಿ ಪ್ರಕಟಿಸಿದ್ದರು. ಈ ಪ್ರಸ್ತಾವಕ್ಕೆ ಈಗ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಜಾರಿ ಮಾಡಲು ಕೇಂದ್ರ ಸರ್ಕಾರವು ₹ 67,266.44 ಕೋಟಿ ವೆಚ್ಚ ಮಾಡಲಿದೆ. ಈ ಯೋಜನೆಯಡಿ ರಾಜ್ಯಗಳಿಗೆ 204 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಸಿಗಲಿದೆ ಎಂದು ಕೇಂದ್ರ ಆಹಾರ ಇಲಾಖೆ ವಿವರಿಸಿದೆ.

ಕೇಂದ್ರ ಸಚಿವ ಸಂಪುಟವು ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅದರಂತೆ ಸೆಂಟ್ರಲ್ ರೈಲ್​ಸೈಡ್​ ವೇರ್​ಹೌಸ್​ ಕಂಪನಿಯನ್ನು ಸೆಂಟ್ರಲ್ ವೇರ್​ಹೌಸಿಂಗ್ ಕಾರ್ಪೋರೇಷನ್​​ನಲ್ಲಿ ವಿಲೀನಗೊಳಿಸಲು ಕೇಂದ್ರ ಸಂಪುಟ ತೀರ್ಮಾನಿಸಿದೆ. ಮಿನಿಮಮ್ ಗವರ್ನಮೆಂಟ್ – ಮ್ಯಾಗ್ಸಿಮಮ್ ಗವರ್ನನ್ಸ್​ ಘೋಷಣೆಯ ಆಶಯವನ್ನು ಜಾರಿ ಮಾಡುವ ಉದ್ದೇಶದಿಂದ ವಿಲೀನದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ಹೇಳಿದೆ.

ವಿಲೀನದ ನಂತರ ನಿರ್ವಹಣೆ ವೆಚ್ಚ ₹ 5 ಕೋಟಿಗೂ ಅಧಿಕ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಹೊಸದಾಗಿ ಇನ್ನೂ 50 ರೈಲ್​ಸೈಡ್ ವೇರ್​ಹೌಸ್​ನಿರ್ಮಾಣಕ್ಕೆ ಈ ಕ್ರಮದಿಂದ ಉಪಯೋಗವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

(Central Cabinet Okays Narendra Modi Proposal of Food for Poor to extend another three months)

ಇದನ್ನೂ ಓದಿ: ಬೆಂಗಳೂರಿನ ದೇವಾಲಯದ ಅರ್ಚಕರಿಗೆ, ಸಿಬ್ಬಂದಿಗಳಿಗೆ ಸುಹರ್ತ್ ಫೌಂಡೇಶನ್​ನಿಂದ ಉಚಿತ ಪಡಿತರ ಕಿಟ್ ವಿತರಣೆ

ಇದನ್ನೂ ಓದಿ: ಆಹಾರ ಸಚಿವರ ತವರಿನ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಂಶ ಆರೋಪ; ಬಡವರ ಹೊಟ್ಟೆಗೆ ಏನು ಗತಿ ಎಂದು ಜನರ ಆಕ್ರೋಶ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ