AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ
ಸಂಸತ್ ಭವನ
TV9 Web
| Edited By: |

Updated on: Jun 23, 2021 | 9:21 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ಈ ಯೋಜನೆಯಡಿ ಅರ್ಹ ಕುಟುಂಬಗಳ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯ ಸಿಗಲಿದೆ. ಮೊದಲಿಗೆ ಎಪ್ರಿಲ್, ಮೇ ಮತ್ತು ಜೂನ್​ನ ಮೂರು ತಿಂಗಳ ಅವಧಿಗೆ ಎಂದು ಯೋಜನೆಯನ್ನು ಜಾರಿ ಮಾಡಲಾಗಿತ್ತು. ಇದೀಗ ಮತ್ತೆ 5 ತಿಂಗಳ ಅವಧಿಗೆ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಕೆಲ ದಿನಗಳ ಹಿಂದೆ ಪ್ರಧಾನಿ ಪ್ರಕಟಿಸಿದ್ದರು. ಈ ಪ್ರಸ್ತಾವಕ್ಕೆ ಈಗ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಜಾರಿ ಮಾಡಲು ಕೇಂದ್ರ ಸರ್ಕಾರವು ₹ 67,266.44 ಕೋಟಿ ವೆಚ್ಚ ಮಾಡಲಿದೆ. ಈ ಯೋಜನೆಯಡಿ ರಾಜ್ಯಗಳಿಗೆ 204 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಸಿಗಲಿದೆ ಎಂದು ಕೇಂದ್ರ ಆಹಾರ ಇಲಾಖೆ ವಿವರಿಸಿದೆ.

ಕೇಂದ್ರ ಸಚಿವ ಸಂಪುಟವು ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅದರಂತೆ ಸೆಂಟ್ರಲ್ ರೈಲ್​ಸೈಡ್​ ವೇರ್​ಹೌಸ್​ ಕಂಪನಿಯನ್ನು ಸೆಂಟ್ರಲ್ ವೇರ್​ಹೌಸಿಂಗ್ ಕಾರ್ಪೋರೇಷನ್​​ನಲ್ಲಿ ವಿಲೀನಗೊಳಿಸಲು ಕೇಂದ್ರ ಸಂಪುಟ ತೀರ್ಮಾನಿಸಿದೆ. ಮಿನಿಮಮ್ ಗವರ್ನಮೆಂಟ್ – ಮ್ಯಾಗ್ಸಿಮಮ್ ಗವರ್ನನ್ಸ್​ ಘೋಷಣೆಯ ಆಶಯವನ್ನು ಜಾರಿ ಮಾಡುವ ಉದ್ದೇಶದಿಂದ ವಿಲೀನದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ಹೇಳಿದೆ.

ವಿಲೀನದ ನಂತರ ನಿರ್ವಹಣೆ ವೆಚ್ಚ ₹ 5 ಕೋಟಿಗೂ ಅಧಿಕ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಹೊಸದಾಗಿ ಇನ್ನೂ 50 ರೈಲ್​ಸೈಡ್ ವೇರ್​ಹೌಸ್​ನಿರ್ಮಾಣಕ್ಕೆ ಈ ಕ್ರಮದಿಂದ ಉಪಯೋಗವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

(Central Cabinet Okays Narendra Modi Proposal of Food for Poor to extend another three months)

ಇದನ್ನೂ ಓದಿ: ಬೆಂಗಳೂರಿನ ದೇವಾಲಯದ ಅರ್ಚಕರಿಗೆ, ಸಿಬ್ಬಂದಿಗಳಿಗೆ ಸುಹರ್ತ್ ಫೌಂಡೇಶನ್​ನಿಂದ ಉಚಿತ ಪಡಿತರ ಕಿಟ್ ವಿತರಣೆ

ಇದನ್ನೂ ಓದಿ: ಆಹಾರ ಸಚಿವರ ತವರಿನ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಂಶ ಆರೋಪ; ಬಡವರ ಹೊಟ್ಟೆಗೆ ಏನು ಗತಿ ಎಂದು ಜನರ ಆಕ್ರೋಶ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ