AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಅನುಮೋದನೆ ನೀಡಿದ ಕೇಂದ್ರ ಸಚಿವ ಸಂಪುಟ
ಸಂಸತ್ ಭವನ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 23, 2021 | 9:21 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದ ಉಚಿತ ಪಡಿತರ ವಿತರಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ತಿಂಗಳ ಅವಧಿಗೆ ಅಂದರೆ ಜುಲೈನಿಂದ ನವೆಂಬರ್​ವರೆಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿದೆ.

ಈ ಯೋಜನೆಯಡಿ ಅರ್ಹ ಕುಟುಂಬಗಳ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯ ಸಿಗಲಿದೆ. ಮೊದಲಿಗೆ ಎಪ್ರಿಲ್, ಮೇ ಮತ್ತು ಜೂನ್​ನ ಮೂರು ತಿಂಗಳ ಅವಧಿಗೆ ಎಂದು ಯೋಜನೆಯನ್ನು ಜಾರಿ ಮಾಡಲಾಗಿತ್ತು. ಇದೀಗ ಮತ್ತೆ 5 ತಿಂಗಳ ಅವಧಿಗೆ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಕೆಲ ದಿನಗಳ ಹಿಂದೆ ಪ್ರಧಾನಿ ಪ್ರಕಟಿಸಿದ್ದರು. ಈ ಪ್ರಸ್ತಾವಕ್ಕೆ ಈಗ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಜಾರಿ ಮಾಡಲು ಕೇಂದ್ರ ಸರ್ಕಾರವು ₹ 67,266.44 ಕೋಟಿ ವೆಚ್ಚ ಮಾಡಲಿದೆ. ಈ ಯೋಜನೆಯಡಿ ರಾಜ್ಯಗಳಿಗೆ 204 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಸಿಗಲಿದೆ ಎಂದು ಕೇಂದ್ರ ಆಹಾರ ಇಲಾಖೆ ವಿವರಿಸಿದೆ.

ಕೇಂದ್ರ ಸಚಿವ ಸಂಪುಟವು ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಅದರಂತೆ ಸೆಂಟ್ರಲ್ ರೈಲ್​ಸೈಡ್​ ವೇರ್​ಹೌಸ್​ ಕಂಪನಿಯನ್ನು ಸೆಂಟ್ರಲ್ ವೇರ್​ಹೌಸಿಂಗ್ ಕಾರ್ಪೋರೇಷನ್​​ನಲ್ಲಿ ವಿಲೀನಗೊಳಿಸಲು ಕೇಂದ್ರ ಸಂಪುಟ ತೀರ್ಮಾನಿಸಿದೆ. ಮಿನಿಮಮ್ ಗವರ್ನಮೆಂಟ್ – ಮ್ಯಾಗ್ಸಿಮಮ್ ಗವರ್ನನ್ಸ್​ ಘೋಷಣೆಯ ಆಶಯವನ್ನು ಜಾರಿ ಮಾಡುವ ಉದ್ದೇಶದಿಂದ ವಿಲೀನದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ಹೇಳಿದೆ.

ವಿಲೀನದ ನಂತರ ನಿರ್ವಹಣೆ ವೆಚ್ಚ ₹ 5 ಕೋಟಿಗೂ ಅಧಿಕ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಹೊಸದಾಗಿ ಇನ್ನೂ 50 ರೈಲ್​ಸೈಡ್ ವೇರ್​ಹೌಸ್​ನಿರ್ಮಾಣಕ್ಕೆ ಈ ಕ್ರಮದಿಂದ ಉಪಯೋಗವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

(Central Cabinet Okays Narendra Modi Proposal of Food for Poor to extend another three months)

ಇದನ್ನೂ ಓದಿ: ಬೆಂಗಳೂರಿನ ದೇವಾಲಯದ ಅರ್ಚಕರಿಗೆ, ಸಿಬ್ಬಂದಿಗಳಿಗೆ ಸುಹರ್ತ್ ಫೌಂಡೇಶನ್​ನಿಂದ ಉಚಿತ ಪಡಿತರ ಕಿಟ್ ವಿತರಣೆ

ಇದನ್ನೂ ಓದಿ: ಆಹಾರ ಸಚಿವರ ತವರಿನ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಂಶ ಆರೋಪ; ಬಡವರ ಹೊಟ್ಟೆಗೆ ಏನು ಗತಿ ಎಂದು ಜನರ ಆಕ್ರೋಶ

ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು