Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವರ ಸಂವಾದ: ಆಗಸ್ಟ್​​ನಲ್ಲಿ ಸಿಬಿಎಸ್​ಇ ಆಪ್ಷನಲ್ ಪರೀಕ್ಷೆ

ವಿದ್ಯಾರ್ಥಿಗಳ ಹಿಂದಿನ ಅಂಕಗಳಿಕೆ ಮತ್ತು ಕ್ಷಮತೆ ಆಧರಿಸಿ ಮಂಡಳಿಯು ನೀಡುವ ಅಂಕಗಳ ಬಗ್ಗೆ ಅಸಮಾಧಾನ ಇದ್ದವರು ಲಿಖಿತ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.

ವಿದ್ಯಾರ್ಥಿಗಳೊಂದಿಗೆ ಕೇಂದ್ರ ಶಿಕ್ಷಣ ಸಚಿವರ ಸಂವಾದ: ಆಗಸ್ಟ್​​ನಲ್ಲಿ ಸಿಬಿಎಸ್​ಇ ಆಪ್ಷನಲ್ ಪರೀಕ್ಷೆ
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 25, 2021 | 9:33 PM

ದೆಹಲಿ: ಸೆಂಟ್ರಲ್ ಬೋರ್ಡ್ ಅಫ್ ಸೆಕಂಡರಿ ಎಜುಕೇಶನ್ (Central Board of Secondary Education – CBSE) ಮಂಡಳಿಯು ಆಗಸ್ಟ್​ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ವಿದ್ಯಾರ್ಥಿಗಳೊಂದಿಗೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಹೇಳಿದರು. ವಿದ್ಯಾರ್ಥಿಗಳ ಹಿಂದಿನ ಅಂಕಗಳಿಕೆ ಮತ್ತು ಕ್ಷಮತೆ ಆಧರಿಸಿ ಮಂಡಳಿಯು ನೀಡುವ ಅಂಕಗಳ ಬಗ್ಗೆ ಅಸಮಾಧಾನ ಇದ್ದವರು ಲಿಖಿತ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು.

ಪರೀಕ್ಷೆ ತೆಗೆದುಕೊಳ್ಳಲೇಬೇಕು ಎಂಬ ಮನೋಭಾವದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷೆಯನ್ನು ರದ್ದುಪಡಿಸಿರುವ ವಿವಿಧ ಮಂಡಳಿಗಳು ಮೌಲ್ಯಮಾಪನಕ್ಕೆ ಒಂದು ಪರ್ಯಾಯ ಸೂತ್ರ ರೂಪಿಸಿದೆ. ಇದು ವಿದ್ಯಾರ್ಥಿಯ ಒಂದಿಡೀ ವರ್ಷದ ಸಾಧನೆಯನ್ನು ಅವಲಂಬಿಸಿರುತ್ತದೆ ಎಂದು ಹೇಳಿದರು.

ಕಾಲೇಜುಗಳಿಗೆ ದಾಖಲಾತಿ, ಪ್ರವೇಶ ಪರೀಕ್ಷೆ, ಮೌಲ್ಯಮಾಪನ ಸೂತ್ರ ಮತ್ತು ಫಲಿತಾಂಶ ದಿನಾಂಕಗಳ ಬಗ್ಗೆ ವಿದ್ಯಾರ್ಥಿಗಳು ಗೊಂದಲ ಎದುರಿಸುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಸಚಿವರ ವರ್ಚುವಲ್ ಸಂವಾದವು ಫೇಸ್​ಬುಕ್​ನಲ್ಲಿ ಲೈವ್ ಆಗಿ ಪ್ರಸಾರವಾಗಿತ್ತು.

ವಿದ್ಯಾರ್ಥಿಗಳೊಂದಿಗೆ ನಡೆಸಿದ ಲೈವ್ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯ ಮತ್ತು ಆರೋಗ್ಯದ ಕಾಳಜಿ ಸರ್ಕಾರಕ್ಕೆ ಇದೆ ಎಂದರು. ಪ್ರಶ್ನೆಗಳನ್ನು ಕಳಿಸುವಂತೆ ಸಂವಾದದ ವೇಳೆ ಸಚಿವರು ಕೋರಿದ್ದರು. ಕೆಲ ವಿದ್ಯಾರ್ಥಿಗಳು ಪ್ರಶ್ನೆಗಳನ್ನೂ ಕಳಿಸಿದರು. ಆದರೆ ಸಚಿವರು ಈ ಪ್ರಶ್ನೆಗಳಿಗೆ ಉತ್ತರಿಸಲು ಮುಂದಾಗಲಿಲ್ಲ.

ಬಹುತೇಕ ವಿದ್ಯಾರ್ಥಿಗಳು ಮೌಲ್ಯಮಾಪನ ಮಾನದಂಡ, ಪರೀಕ್ಷಾ ದಿನಾಂಕಗಳ ಬಗ್ಗೆ ಪ್ರಶ್ನೆ ಕೇಳಿದ್ದರು. ಕಾಲೇಜುಗಳಿಗೆ ಸೇರುವ ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕಾದ CUCET ಪರೀಕ್ಷೆಗಳ ಬಗ್ಗೆಯೂ ಕೆಲ ವಿದ್ಯಾರ್ಥಿಗಳು ಪ್ರಸ್ತಾಪಿಸಿದರು. JEE Main ಮತ್ತು NEET ಪರೀಕ್ಷೆಗಳ ಬಗ್ಗೆ ಹಲವರು ತಮ್ಮ ಗೊಂದಲಗಳನ್ನು ಹಂಚಿಕೊಂಡರು.

JEE Main ಮತ್ತು NEET ಆಕಾಂಕ್ಷಿಗಳು ಪರೀಕ್ಷೆಯ ಬಗೆಗಿನ ತಮ್ಮ ಬಹುಕಾಲದ ಪ್ರಶ್ನೆಗಳನ್ನೇ ಮತ್ತೊಮ್ಮೆ ಪ್ರಸ್ತಾಪಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಜೆಇಇ ಮೇನ್​ ಬಾಕಿ ಪರೀಕ್ಷೆಗಳು ಜುಲೈ ತಿಂಗಳಲ್ಲಿ ಮತ್ತು NEET ಪರೀಕ್ಷೆಗಳು ಸೆಪ್ಟೆಂಬರ್​ವರೆಗೆ ಮುಂದೂಡಿಕೆಯಾಗಿವೆ ಎಂದು ಮಾಹಿತಿ ನೀಡಿದರು.

(Central Education Minister Live with Students clarifies CBSE Optional Exams)

ಇದನ್ನೂ ಓದಿ: ಸಿಬಿಎಸ್​ಇ, ಐಎಸ್​ಸಿಇ 12ನೇ ತರಗತಿ ಪರೀಕ್ಷೆ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂಕೋರ್ಟ್

ಇದನ್ನೂ ಓದಿ: CBSE 12th Board Exam 2021: 12 ನೇ ತರಗತಿಯ ಸಿಬಿಎಸ್‌ಇ, ಸಿಐಎಸ್‌ಸಿಇ ಪರೀಕ್ಷೆ ರದ್ದು: ಪ್ರಧಾನಿ ಮೋದಿ

Published On - 9:25 pm, Fri, 25 June 21

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ