ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ. 

ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್
ಅರುಣ್ ಗೋಯಲ್
Follow us
|

Updated on:Mar 09, 2024 | 9:44 PM

ದೆಹಲಿ, ಮಾರ್ಚ್​​ 09: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ (Arun Goel) ಅವರು ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಹೀಗಾಗಿ ಚುನಾವಣಾ ವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ. ಗೋಯಲ್​ ಅವರ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ.

ಮುಂದಿನ ವಾರ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಗೋಯಲ್​ ಅವರ ರಾಜೀನಾಮೆಯಿಂದ ಚುನಾವಣಾ ದಿನಾಂಕ ಘೋಷಣೆ ಮತ್ತಷ್ಟು ಮುಂದೆ ಹೋಗಬಹುದು ಎಂದು ವರದಿ ಆಗಿದೆ.

ಅರುಣ್ ಗೋಯಲ್ ಯಾರು?

ಅರುಣ್ ಗೋಯೆಲ್ ಪಂಜಾಬ್ ಕೇಡರ್‌ಗೆ ಸೇರಿದ 1985-ಬ್ಯಾಚ್‌ನ ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಆಗಿದ್ದರು. ನವೆಂಬರ್ 19, 2022 ರಂದು, ಅವರು ಭಾರತದ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು. ನವೆಂಬರ್ 21, 2022 ರಂದು ಅಧಿಕಾರ ವಹಿಸಿಕೊಂಡರು. ಕಾರ್ಯವಿಧಾನದ ಕಾಳಜಿಯಿಂದಾಗಿ ಅವರ ನೇಮಕಾತಿಯನ್ನು ಭಾರತೀಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ 3 ಆಗಸ್ಟ್ 2023 ರಂದು ಅನುಮತಿ ನೀಡಲಾಯಿತು.

ಇದನ್ನೂ ಓದಿ: Lok Sabha Election Dates: ಲೋಕಸಭೆ ಚುನಾವಣೆ ದಿನಾಂಕ ಮುಂದಿನ ಗುರುವಾರ ಪ್ರಕಟ ಸಾಧ್ಯತೆ

ಅರುಣ್ ಗೋಯೆಲ್​ ಅವರು ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿ ಸಿದ್ಧತೆ ಪರಿಶೀಲನೆಗಾಗಿ ನಿರಂತರ ಪ್ರವಾಸ ಕೈಗೊಂಡಿದ್ದರು. ಆದರೆ ಇದೇ ವಾರದ ಅಂತ್ಯದೊಳಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎನ್ನುವ ವರದಿಗಳ ಮಧ್ಯೆಯೇ ಅವರು ರಾಜೀನಾಮೆ ನೀಡಿದ್ದಾರೆ. ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ತಮಿಳುನಾಡಿನಲ್ಲಿ ಕಾಂಗ್ರೆಸ್, ಡಿಎಂಕೆ ಮೈತ್ರಿ: 9 ಕ್ಷೇತ್ರದಲ್ಲಿ ಕಾಂಗ್ರೆಸ್​ ಸ್ಪರ್ಧೆ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಇತ್ತೀಚಿಗಷ್ಟೇ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿ ಇಂಡಿಯಾ ಒಕ್ಕೂಟಕ್ಕೆ ವಿದಾಯ ಹೇಳಿತ್ತು. ಇದೀಗ ಕಾಂಗ್ರೆಸ್ ನಿನ್ನೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳು ಸೇರಿ ಒಟ್ಟು 39 ಕ್ಷೇತ್ರಗಳಿಗೆ ಕದನ ಕಲಿಗಳನ್ನು ಘೋಷಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 pm, Sat, 9 March 24

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ