AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OBC Reservation: ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ

OBC Reservation in Medical Education: ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

OBC Reservation: ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Jul 29, 2021 | 4:08 PM

Share

ನವದೆಹಲಿ: ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ. 27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಹಾಗೇ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ.

ಈ ಮೀಸಲಾತಿ ಎಂಬಿಬಿಎಸ್ (MBBS) ಮತ್ತು ಬಿಡಿಎಸ್​(BDS)ಗೂ ಅನ್ವಯವಾಗಲಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಒಬಿಸಿ )OBC) ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.

ಮೆಡಿಕಲ್ ಕಾಲೇಜುಗಳಲ್ಲಿ ಓಬಿಸಿ (OBC) ಮತ್ತು ಇಡಬ್ಲುಎಸ್ (EWS) ಕೆಟಗರಿಯ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳ ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.

ಈ ಮೀಸಲಾತಿಯಿಂದಾಗಿ ಎಂಬಿಬಿಎಸ್​ನ 1,500 ಒಬಿಸಿ (OBC) ಅಭ್ಯರ್ಥಿಗಳು, ಸ್ನಾತಕೋತ್ತರ ವಿಭಾಗದ 2,500 ಒಬಿಸಿ ವಿದ್ಯಾರ್ಥಿಗಳು, ಎಂಬಿಬಿಎಸ್​ನ ಆರ್ಥಿಕವಾಗಿ ಹಿಂದುಳಿದ (EWS) 550 ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿಭಾಗದ 1000 EWS ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: CBSE Class 10 Board Result 2021: ಶೀಘ್ರದಲ್ಲೇ ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ

 (Central Government Announces 27% Reservation for OBC in Medical Education 10% Reservation for EWS)

Published On - 3:45 pm, Thu, 29 July 21

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !