AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ಚಾನೆಲ್‌ಗಳ ಅಪ್‌ಲಿಂಕ್ ಮತ್ತು ಡೌನ್‌ಲಿಂಕ್​​ಗಾಗಿರುವ ಮಾರ್ಗಸೂಚಿಗೆ ಕೇಂದ್ರ ಅನುಮೋದನೆ

ಹೊಸ ಮಾರ್ಗಸೂಚಿಗಳಲ್ಲಿ, ರಾಷ್ಟ್ರೀಯ ಹಿತಾಸಕ್ತಿ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಕಾರ್ಯಕ್ರಮಗಳ ಪ್ರಸಾರಕ್ಕಾಗಿ 30 ನಿಮಿಷಗಳ ಸಮಯವನ್ನು ನೀಡಲಾಗುತ್ತದೆ.

ಟಿವಿ ಚಾನೆಲ್‌ಗಳ ಅಪ್‌ಲಿಂಕ್ ಮತ್ತು ಡೌನ್‌ಲಿಂಕ್​​ಗಾಗಿರುವ ಮಾರ್ಗಸೂಚಿಗೆ ಕೇಂದ್ರ ಅನುಮೋದನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 09, 2022 | 4:22 PM

Share

ಸುಮಾರು 11 ವರ್ಷಗಳ ನಂತರ ಭಾರತದಲ್ಲಿ ಟಿವಿ ಚಾನೆಲ್‌ಗಳ (TV channels)ಅಪ್‌ಲಿಂಕ್(uplinking) ಮತ್ತು ಡೌನ್‌ಲಿಂಕ್​​(downlinking )ಗಾಗಿರುವ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಅನುಮೋದಿಸಿದೆ. ಹೊಸ ಮಾರ್ಗಸೂಚಿಗಳಲ್ಲಿ, ರಾಷ್ಟ್ರೀಯ ಹಿತಾಸಕ್ತಿ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಕಾರ್ಯಕ್ರಮಗಳ ಪ್ರಸಾರಕ್ಕಾಗಿ 30 ನಿಮಿಷಗಳ ಸಮಯವನ್ನು ನೀಡಲಾಗುತ್ತದೆ. ಟಿವಿ ಚಾನೆಲ್‌ಗಳನ್ನು ಅಪ್‌ಲಿಂಕ್ ಮಾಡಲು ಮತ್ತು ಡೌನ್‌ಲಿಂಕ್ ಮಾಡಲು, ಟೆಲಿಪೋರ್ಟ್‌ಗಳು/ಟೆಲಿಪೋರ್ಟ್ ಹಬ್‌ಗಳ ಸ್ಥಾಪನೆ, ಡಿಜಿಟಲ್ ಸ್ಯಾಟಲೈಟ್ ನ್ಯೂಸ್ ಗ್ಯಾದರಿಂಗ್ (DSNG)/ ಸ್ಯಾಟಲೈಟ್ ನ್ಯೂಸ್ ಗ್ಯಾದರಿಂಗ್ (SNG) / ಎಲೆಕ್ಟ್ರಾನಿಕ್ ನ್ಯೂಸ್ ಗ್ಯಾದರಿಂಗ್ (ENG) ಸಿಸ್ಟಂ , ಭಾರತೀಯ ಸುದ್ದಿ ಸಂಸ್ಥೆಗಳಿಂದ ಅಪ್‌ಲಿಂಕ್ ಮಾಡುವುದು ಮತ್ತು ಲೈವ್ ಈವೆಂಟ್‌ನ ತಾತ್ಕಾಲಿಕ ಅಪ್‌ಲಿಂಕ್ ಮಾಡುವ ಬಗ್ಗೆ ಭಾರತದಲ್ಲಿ ನೋಂದಾಯಿಸಲಾದ ಕಂಪನಿಗಳು/LLP ಗಳಿಗೆ ಅನುಮತಿಗಳ ಬಗ್ಗೆ ಸಮಸ್ಯೆಗಳನ್ನು ಸರಾಗಗೊಳಿಸುವ ಗುರಿಯನ್ನು ಏಕೀಕೃತ ಮಾರ್ಗಸೂಚಿಗಳು ಹೊಂದಿವೆ.  ಭಾರತೀಯ ಸುದ್ದಿ ಸಂಸ್ಥೆಗಳಿಂದ ಅಪ್‌ಲಿಂಕ್ ಮಾಡುವುದು ಮತ್ತು ಲೈವ್ ಈವೆಂಟ್‌ನ ತಾತ್ಕಾಲಿಕ ಅಪ್‌ಲಿಂಕ್ ಮಾಡುವುದು.11 ವರ್ಷಗಳ ಹಿಂದೆ 2011 ರಲ್ಲಿ ಅಂತಹ ಮಾರ್ಗಸೂಚಿಗಳನ್ನು ಕೊನೆಯ ಬಾರಿಗೆ ತಿದ್ದುಪಡಿ ಮಾಡಲಾಗಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಕಾರ್ಯಕ್ರಮಗಳ ನೇರ ಪ್ರಸಾರಕ್ಕೆ ಯಾವುದೇ ಪೂರ್ವಾನುಮತಿ ಅಗತ್ಯವಿಲ್ಲ. ನೇರ ಪ್ರಸಾರ ಮಾಡಲು ಈವೆಂಟ್‌ಗಳ ಪೂರ್ವ ನೋಂದಣಿ ಮಾತ್ರ ಅಗತ್ಯ. ಪ್ರಸ್ತುತ ಒಂದು ಟೆಲಿಪೋರ್ಟ್/ಉಪಗ್ರಹಕ್ಕೆ ವಿರುದ್ಧವಾಗಿ ಒಂದಕ್ಕಿಂತ ಹೆಚ್ಚು ಟೆಲಿಪೋರ್ಟ್/ಉಪಗ್ರಹಗಳ ಸೌಲಭ್ಯಗಳನ್ನು ಬಳಸಿಕೊಂಡು ಚಾನಲ್ ಅನ್ನು ಅಪ್‌ಲಿಂಕ್ ಮಾಡಬಹುದು.

ಸುದ್ದಿ ಸಂಸ್ಥೆ ಎಎನ್ಐಯೊಂದಿಗೆ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ (I&B) ಕಾರ್ಯದರ್ಶಿ ಅಪೂರ್ವ ಚಂದ್ರ, ನಾವು ಸುಮಾರು 11 ವರ್ಷಗಳ ನಂತರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೇವೆ. ವರ್ಷಗಳಲ್ಲಿ ನಾವು ಪರಿಗಣಿಸಿದ ಸುಧಾರಣೆಯ ಪ್ರಕಾರ ನಾವು ಕೇಂದ್ರ ಸಚಿವ ಸಂಪುಟದ ಅನುಮೋದನೆಯನ್ನು ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ವ್ಯವಹಾರವನ್ನು ಸುಲಭಗೊಳಿಸುವ ವಿಷಯದಲ್ಲಿ ಸಚಿವಾಲಯವು ಅನೇಕ ಸುಧಾರಣೆಗಳನ್ನು ಮಾಡಿದೆ. ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳ 30 ನಿಮಿಷಗಳ ಕಾಲಾವಕಾಶವನ್ನು ಹೊಸ ಮಾರ್ಗಸೂಚಿಯಲ್ಲಿ ನೀಡಲಾಗಿದೆ ಎಂದು ಅಪೂರ್ವ ಚಂದ್ರ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗಾಗಿ, ಮಹಿಳಾ ಸಬಲೀಕರಣ, ಬೋಧನೆ ಮತ್ತು ಕೃಷಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸಲಾಗುವುದು.

ರಾಷ್ಟ್ರೀಯ ಪ್ರಾಮುಖ್ಯತೆ ಅಥವಾ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಿಗೆ 30-ನಿಮಿಷಗಳ ಸ್ಲಾಟ್ ನೀಡಬೇಕು ಎಂಬ ನಿಬಂಧನೆಯನ್ನು ನಾವು ಇಟ್ಟುಕೊಂಡಿದ್ದೇವೆ. ಇದಕ್ಕಾಗಿ ಮಹಿಳಾ ಸಬಲೀಕರಣ, ಕೃಷಿ, ಬೋಧನೆ ಮೊದಲಾದ ಏಳು ಪ್ರಬಲ ವಿಷಯಗಳನ್ನು ನೀಡಲಾಗಿದೆ ಎಂದು ಅಪೂರ್ವ ಚಂದ್ರ ಹೇಳಿದರು, ಆದ್ದರಿಂದ ಇದನ್ನು ಪ್ರಸಾರ ಮಾಡುವ ಜವಾಬ್ದಾರಿಗಳನ್ನು ನೀಡಲಾಗಿದೆ, ಇದು ಹೊಸ ವಿಷಯವಾಗಿದ್ದು, ನಾವು ಹೆಚ್ಚು ವಿವರವಾದ ಮಾರ್ಗಸೂಚಿಗಳೊಂದಿಗೆ ಚಾನೆಲ್‌ಗಳನ್ನು ಸಮಾಲೋಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.

Published On - 4:21 pm, Wed, 9 November 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು