AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು. 

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 08, 2021 | 6:16 PM

Share

ಖಲಿಸ್ತಾನ ಹಾಗೂ ಪಾಕಿಸ್ತಾನದ ಜತೆ ನಂಟು ಹೊಂದಿರುವ 1,178 ಟ್ವಿಟ್ಟರ್​ ಖಾತೆಗಳ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ಗೆ ಸೂಚನೆ ನೀಡಿದೆ. ನಕಲಿ ಸುದ್ದಿ ಹರಡುತ್ತಿರುವ ಆರೋಪದ ಮೇಲೆ 250 ಟ್ವಿಟರ್​ ಖಾತೆಗಳನ್ನು ಹೆಸರಿಸಿ ಅವನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ ಬಳಿ ಈ ಮೊದಲು ಕೋರಿತ್ತು. ಇದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಕಳೆದ ಗುರುವಾರವೇ ಟ್ವಿಟ್ಟರ್​ಗೆ ಈ ನೋಟಿಸ್​ ನೀಡಿದೆ. ಐಟಿ ಇಲಾಖೆ ಹೇಳುವ ಪ್ರಕಾರ ಅವರು ಉಲ್ಲೇಖಿಸಿರುವ 1,178 ಟ್ವಿಟ್ಟರ್​ ಖಾತೆಗಳಿಗೆ ಖಲಿಸ್ತಾನ ಇಲ್ಲವೇ ಪಾಕಿಸ್ತಾನದ ಲಿಂಕ್​ ಇದೆಯಂತೆ. ಇದರಿಂದ ದೇಶದ ಸೌಹಾರ್ದತೆ ಹಾಳಾಗಲಿದೆ ಎಂಬುದು ಕೇಂದ್ರ ಸರ್ಕಾರದ ಆರೋಪ.

ರೈತ ಪ್ರತಿಭಟನೆ ವಿಚಾರ ಇಟ್ಟುಕೊಂಡು ನಕಲಿ ಸುದ್ದಿ ಹರಡುತ್ತಿರುವ ಹಾಗೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ವಿರುದ್ಧ ಟ್ವಿಟ್ಟರ್​ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತದ ನೀತಿಯನ್ನು ಅವರು​ ಉಲ್ಲಂಘನೆ ಮಾಡುತ್ತಿದ್ದಾರೆ ಎನ್ನುವುದು ಕೇಂದ್ರ ಸರ್ಕಾರದ ಆರೋಪವಾಗಿದೆ. ಈಗ ಉಲ್ಲೇಖ ಮಾಡಿರುವ ಟ್ವಿಟ್ಟರ್​ ಖಾತೆಗಳು ಕೂಡ ದೇಶಕ್ಕೆ ತೊಂದರೆ ತಂದೊಡ್ಡಬಹುದು. ಹೀಗಾಗಿ ಅವನ್ನು ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರ ಕಳಕಳಿ.

ಇನ್ನು, ಇತ್ತೀಚೆಗಷ್ಟೇ ವೈಯಕ್ತಿಕ ಕಾರಣ ನೀಡಿ ಟ್ವಿಟ್ಟರ್​ ಇಂಡಿಯಾದ ಪಬ್ಲಿಕ್​ ಪಾಲಿಸಿ ಮಹಿಮಾ ಕೌಲ್​ ರಾಜೀನಾಮೆ ನೀಡಿದ್ದರು. ಕೌಲ್​ ಮಾರ್ಚ್​ವರೆಗೆ ಕಾರ್ಯ ನಿರ್ವಹಿಸಲಿದ್ದು, ನಂತರ ಟ್ವಿಟ್ಟರ್​ ತೊರೆಯಲಿದ್ದಾರೆ. ಒತ್ತಡಕ್ಕೆ ಮಣಿದು ಕೌಲ್​ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ.

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?

Follow Us
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​