AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು. 

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 08, 2021 | 6:16 PM

Share

ಖಲಿಸ್ತಾನ ಹಾಗೂ ಪಾಕಿಸ್ತಾನದ ಜತೆ ನಂಟು ಹೊಂದಿರುವ 1,178 ಟ್ವಿಟ್ಟರ್​ ಖಾತೆಗಳ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ಗೆ ಸೂಚನೆ ನೀಡಿದೆ. ನಕಲಿ ಸುದ್ದಿ ಹರಡುತ್ತಿರುವ ಆರೋಪದ ಮೇಲೆ 250 ಟ್ವಿಟರ್​ ಖಾತೆಗಳನ್ನು ಹೆಸರಿಸಿ ಅವನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ ಬಳಿ ಈ ಮೊದಲು ಕೋರಿತ್ತು. ಇದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಕಳೆದ ಗುರುವಾರವೇ ಟ್ವಿಟ್ಟರ್​ಗೆ ಈ ನೋಟಿಸ್​ ನೀಡಿದೆ. ಐಟಿ ಇಲಾಖೆ ಹೇಳುವ ಪ್ರಕಾರ ಅವರು ಉಲ್ಲೇಖಿಸಿರುವ 1,178 ಟ್ವಿಟ್ಟರ್​ ಖಾತೆಗಳಿಗೆ ಖಲಿಸ್ತಾನ ಇಲ್ಲವೇ ಪಾಕಿಸ್ತಾನದ ಲಿಂಕ್​ ಇದೆಯಂತೆ. ಇದರಿಂದ ದೇಶದ ಸೌಹಾರ್ದತೆ ಹಾಳಾಗಲಿದೆ ಎಂಬುದು ಕೇಂದ್ರ ಸರ್ಕಾರದ ಆರೋಪ.

ರೈತ ಪ್ರತಿಭಟನೆ ವಿಚಾರ ಇಟ್ಟುಕೊಂಡು ನಕಲಿ ಸುದ್ದಿ ಹರಡುತ್ತಿರುವ ಹಾಗೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ವಿರುದ್ಧ ಟ್ವಿಟ್ಟರ್​ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತದ ನೀತಿಯನ್ನು ಅವರು​ ಉಲ್ಲಂಘನೆ ಮಾಡುತ್ತಿದ್ದಾರೆ ಎನ್ನುವುದು ಕೇಂದ್ರ ಸರ್ಕಾರದ ಆರೋಪವಾಗಿದೆ. ಈಗ ಉಲ್ಲೇಖ ಮಾಡಿರುವ ಟ್ವಿಟ್ಟರ್​ ಖಾತೆಗಳು ಕೂಡ ದೇಶಕ್ಕೆ ತೊಂದರೆ ತಂದೊಡ್ಡಬಹುದು. ಹೀಗಾಗಿ ಅವನ್ನು ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರ ಕಳಕಳಿ.

ಇನ್ನು, ಇತ್ತೀಚೆಗಷ್ಟೇ ವೈಯಕ್ತಿಕ ಕಾರಣ ನೀಡಿ ಟ್ವಿಟ್ಟರ್​ ಇಂಡಿಯಾದ ಪಬ್ಲಿಕ್​ ಪಾಲಿಸಿ ಮಹಿಮಾ ಕೌಲ್​ ರಾಜೀನಾಮೆ ನೀಡಿದ್ದರು. ಕೌಲ್​ ಮಾರ್ಚ್​ವರೆಗೆ ಕಾರ್ಯ ನಿರ್ವಹಿಸಲಿದ್ದು, ನಂತರ ಟ್ವಿಟ್ಟರ್​ ತೊರೆಯಲಿದ್ದಾರೆ. ಒತ್ತಡಕ್ಕೆ ಮಣಿದು ಕೌಲ್​ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ.

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್