AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು. 

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 08, 2021 | 6:16 PM

Share

ಖಲಿಸ್ತಾನ ಹಾಗೂ ಪಾಕಿಸ್ತಾನದ ಜತೆ ನಂಟು ಹೊಂದಿರುವ 1,178 ಟ್ವಿಟ್ಟರ್​ ಖಾತೆಗಳ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ಗೆ ಸೂಚನೆ ನೀಡಿದೆ. ನಕಲಿ ಸುದ್ದಿ ಹರಡುತ್ತಿರುವ ಆರೋಪದ ಮೇಲೆ 250 ಟ್ವಿಟರ್​ ಖಾತೆಗಳನ್ನು ಹೆಸರಿಸಿ ಅವನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ ಬಳಿ ಈ ಮೊದಲು ಕೋರಿತ್ತು. ಇದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಕಳೆದ ಗುರುವಾರವೇ ಟ್ವಿಟ್ಟರ್​ಗೆ ಈ ನೋಟಿಸ್​ ನೀಡಿದೆ. ಐಟಿ ಇಲಾಖೆ ಹೇಳುವ ಪ್ರಕಾರ ಅವರು ಉಲ್ಲೇಖಿಸಿರುವ 1,178 ಟ್ವಿಟ್ಟರ್​ ಖಾತೆಗಳಿಗೆ ಖಲಿಸ್ತಾನ ಇಲ್ಲವೇ ಪಾಕಿಸ್ತಾನದ ಲಿಂಕ್​ ಇದೆಯಂತೆ. ಇದರಿಂದ ದೇಶದ ಸೌಹಾರ್ದತೆ ಹಾಳಾಗಲಿದೆ ಎಂಬುದು ಕೇಂದ್ರ ಸರ್ಕಾರದ ಆರೋಪ.

ರೈತ ಪ್ರತಿಭಟನೆ ವಿಚಾರ ಇಟ್ಟುಕೊಂಡು ನಕಲಿ ಸುದ್ದಿ ಹರಡುತ್ತಿರುವ ಹಾಗೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ವಿರುದ್ಧ ಟ್ವಿಟ್ಟರ್​ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತದ ನೀತಿಯನ್ನು ಅವರು​ ಉಲ್ಲಂಘನೆ ಮಾಡುತ್ತಿದ್ದಾರೆ ಎನ್ನುವುದು ಕೇಂದ್ರ ಸರ್ಕಾರದ ಆರೋಪವಾಗಿದೆ. ಈಗ ಉಲ್ಲೇಖ ಮಾಡಿರುವ ಟ್ವಿಟ್ಟರ್​ ಖಾತೆಗಳು ಕೂಡ ದೇಶಕ್ಕೆ ತೊಂದರೆ ತಂದೊಡ್ಡಬಹುದು. ಹೀಗಾಗಿ ಅವನ್ನು ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರ ಕಳಕಳಿ.

ಇನ್ನು, ಇತ್ತೀಚೆಗಷ್ಟೇ ವೈಯಕ್ತಿಕ ಕಾರಣ ನೀಡಿ ಟ್ವಿಟ್ಟರ್​ ಇಂಡಿಯಾದ ಪಬ್ಲಿಕ್​ ಪಾಲಿಸಿ ಮಹಿಮಾ ಕೌಲ್​ ರಾಜೀನಾಮೆ ನೀಡಿದ್ದರು. ಕೌಲ್​ ಮಾರ್ಚ್​ವರೆಗೆ ಕಾರ್ಯ ನಿರ್ವಹಿಸಲಿದ್ದು, ನಂತರ ಟ್ವಿಟ್ಟರ್​ ತೊರೆಯಲಿದ್ದಾರೆ. ಒತ್ತಡಕ್ಕೆ ಮಣಿದು ಕೌಲ್​ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ.

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?