AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು. 

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 08, 2021 | 6:16 PM

ಖಲಿಸ್ತಾನ ಹಾಗೂ ಪಾಕಿಸ್ತಾನದ ಜತೆ ನಂಟು ಹೊಂದಿರುವ 1,178 ಟ್ವಿಟ್ಟರ್​ ಖಾತೆಗಳ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ಗೆ ಸೂಚನೆ ನೀಡಿದೆ. ನಕಲಿ ಸುದ್ದಿ ಹರಡುತ್ತಿರುವ ಆರೋಪದ ಮೇಲೆ 250 ಟ್ವಿಟರ್​ ಖಾತೆಗಳನ್ನು ಹೆಸರಿಸಿ ಅವನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ ಬಳಿ ಈ ಮೊದಲು ಕೋರಿತ್ತು. ಇದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಕಳೆದ ಗುರುವಾರವೇ ಟ್ವಿಟ್ಟರ್​ಗೆ ಈ ನೋಟಿಸ್​ ನೀಡಿದೆ. ಐಟಿ ಇಲಾಖೆ ಹೇಳುವ ಪ್ರಕಾರ ಅವರು ಉಲ್ಲೇಖಿಸಿರುವ 1,178 ಟ್ವಿಟ್ಟರ್​ ಖಾತೆಗಳಿಗೆ ಖಲಿಸ್ತಾನ ಇಲ್ಲವೇ ಪಾಕಿಸ್ತಾನದ ಲಿಂಕ್​ ಇದೆಯಂತೆ. ಇದರಿಂದ ದೇಶದ ಸೌಹಾರ್ದತೆ ಹಾಳಾಗಲಿದೆ ಎಂಬುದು ಕೇಂದ್ರ ಸರ್ಕಾರದ ಆರೋಪ.

ರೈತ ಪ್ರತಿಭಟನೆ ವಿಚಾರ ಇಟ್ಟುಕೊಂಡು ನಕಲಿ ಸುದ್ದಿ ಹರಡುತ್ತಿರುವ ಹಾಗೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ವಿರುದ್ಧ ಟ್ವಿಟ್ಟರ್​ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತದ ನೀತಿಯನ್ನು ಅವರು​ ಉಲ್ಲಂಘನೆ ಮಾಡುತ್ತಿದ್ದಾರೆ ಎನ್ನುವುದು ಕೇಂದ್ರ ಸರ್ಕಾರದ ಆರೋಪವಾಗಿದೆ. ಈಗ ಉಲ್ಲೇಖ ಮಾಡಿರುವ ಟ್ವಿಟ್ಟರ್​ ಖಾತೆಗಳು ಕೂಡ ದೇಶಕ್ಕೆ ತೊಂದರೆ ತಂದೊಡ್ಡಬಹುದು. ಹೀಗಾಗಿ ಅವನ್ನು ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರ ಕಳಕಳಿ.

ಇನ್ನು, ಇತ್ತೀಚೆಗಷ್ಟೇ ವೈಯಕ್ತಿಕ ಕಾರಣ ನೀಡಿ ಟ್ವಿಟ್ಟರ್​ ಇಂಡಿಯಾದ ಪಬ್ಲಿಕ್​ ಪಾಲಿಸಿ ಮಹಿಮಾ ಕೌಲ್​ ರಾಜೀನಾಮೆ ನೀಡಿದ್ದರು. ಕೌಲ್​ ಮಾರ್ಚ್​ವರೆಗೆ ಕಾರ್ಯ ನಿರ್ವಹಿಸಲಿದ್ದು, ನಂತರ ಟ್ವಿಟ್ಟರ್​ ತೊರೆಯಲಿದ್ದಾರೆ. ಒತ್ತಡಕ್ಕೆ ಮಣಿದು ಕೌಲ್​ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ.

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ