AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು. 

ಖಲಿಸ್ತಾನ, ಪಾಕಿಸ್ತಾನದ ಜತೆ ನಂಟು ಹೊಂದಿರುವ 1178 ಟ್ವಿಟ್ಟರ್ ಖಾತೆ ರದ್ದಿಗೆ ಕೋರಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 08, 2021 | 6:16 PM

Share

ಖಲಿಸ್ತಾನ ಹಾಗೂ ಪಾಕಿಸ್ತಾನದ ಜತೆ ನಂಟು ಹೊಂದಿರುವ 1,178 ಟ್ವಿಟ್ಟರ್​ ಖಾತೆಗಳ ಮೇಲೆ ನಿರ್ಬಂಧ ಹೇರುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ಗೆ ಸೂಚನೆ ನೀಡಿದೆ. ನಕಲಿ ಸುದ್ದಿ ಹರಡುತ್ತಿರುವ ಆರೋಪದ ಮೇಲೆ 250 ಟ್ವಿಟರ್​ ಖಾತೆಗಳನ್ನು ಹೆಸರಿಸಿ ಅವನ್ನು ರದ್ದು ಮಾಡುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್​ ಬಳಿ ಈ ಮೊದಲು ಕೋರಿತ್ತು. ಇದಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಕಳೆದ ಗುರುವಾರವೇ ಟ್ವಿಟ್ಟರ್​ಗೆ ಈ ನೋಟಿಸ್​ ನೀಡಿದೆ. ಐಟಿ ಇಲಾಖೆ ಹೇಳುವ ಪ್ರಕಾರ ಅವರು ಉಲ್ಲೇಖಿಸಿರುವ 1,178 ಟ್ವಿಟ್ಟರ್​ ಖಾತೆಗಳಿಗೆ ಖಲಿಸ್ತಾನ ಇಲ್ಲವೇ ಪಾಕಿಸ್ತಾನದ ಲಿಂಕ್​ ಇದೆಯಂತೆ. ಇದರಿಂದ ದೇಶದ ಸೌಹಾರ್ದತೆ ಹಾಳಾಗಲಿದೆ ಎಂಬುದು ಕೇಂದ್ರ ಸರ್ಕಾರದ ಆರೋಪ.

ರೈತ ಪ್ರತಿಭಟನೆ ವಿಚಾರ ಇಟ್ಟುಕೊಂಡು ನಕಲಿ ಸುದ್ದಿ ಹರಡುತ್ತಿರುವ ಹಾಗೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ವಿರುದ್ಧ ಟ್ವಿಟ್ಟರ್​ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತದ ನೀತಿಯನ್ನು ಅವರು​ ಉಲ್ಲಂಘನೆ ಮಾಡುತ್ತಿದ್ದಾರೆ ಎನ್ನುವುದು ಕೇಂದ್ರ ಸರ್ಕಾರದ ಆರೋಪವಾಗಿದೆ. ಈಗ ಉಲ್ಲೇಖ ಮಾಡಿರುವ ಟ್ವಿಟ್ಟರ್​ ಖಾತೆಗಳು ಕೂಡ ದೇಶಕ್ಕೆ ತೊಂದರೆ ತಂದೊಡ್ಡಬಹುದು. ಹೀಗಾಗಿ ಅವನ್ನು ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರ ಕಳಕಳಿ.

ಇನ್ನು, ಇತ್ತೀಚೆಗಷ್ಟೇ ವೈಯಕ್ತಿಕ ಕಾರಣ ನೀಡಿ ಟ್ವಿಟ್ಟರ್​ ಇಂಡಿಯಾದ ಪಬ್ಲಿಕ್​ ಪಾಲಿಸಿ ಮಹಿಮಾ ಕೌಲ್​ ರಾಜೀನಾಮೆ ನೀಡಿದ್ದರು. ಕೌಲ್​ ಮಾರ್ಚ್​ವರೆಗೆ ಕಾರ್ಯ ನಿರ್ವಹಿಸಲಿದ್ದು, ನಂತರ ಟ್ವಿಟ್ಟರ್​ ತೊರೆಯಲಿದ್ದಾರೆ. ಒತ್ತಡಕ್ಕೆ ಮಣಿದು ಕೌಲ್​ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ.

ಜನವರಿ 26ರಂದು ನಡೆದ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್​ ರ್ಯಾಲಿ ವೇಳೆ ಖಲಿಸ್ತಾನ ​ ಬಾವುಟ ಹಾರಾಡಿದ್ದವು. ಈ ಮೂಲಕ ರೈತರ ಪ್ರತಿಭಟನೆಗೆ ಖಲಿಸ್ತಾನ​ ಲಿಂಕ್​ ಸಿಕ್ಕಿತ್ತು.

ಟ್ರಂಪ್​ ಟ್ವಿಟ್ಟರ್​ ಖಾತೆ ರದ್ದುಗೊಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಇದೇ ಮಹಿಳೆ! ಪ್ರಕ್ರಿಯೆ ಹೇಗಿತ್ತು ಗೊತ್ತಾ?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ