Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಬೆಲೆ ಕಡಿಮೆ ಮಾಡಲು ಉತ್ಪಾದಕರಿಗೆ ಕೇಂದ್ರ ಸರ್ಕಾರ ಸೂಚನೆ

ಕೊವಿಡ್​ ಲಸಿಕೆಯ ದರ ಜಾಸ್ತಿ ಆಯ್ತು ಎಂಬ ಟೀಕೆಯ ಮಧ್ಯೆ ಕೊವಿಡ್​ ಲಸಿಕೆ ಉತ್ಪಾದನೆ ಮಾಡುವ ಎರಡು ಕಂಪೆನಿಗಳಿಗೆ ಕೇಂದ್ರ ಸರಕಾರ ಇಂದು ಲಸಿಕೆಯ ದರ ಕಡಿಮೆ ಮಾಡುವಂತೆ ಕೋರಿದೆ.

ಕೊವಿಡ್ ಲಸಿಕೆ ಬೆಲೆ ಕಡಿಮೆ ಮಾಡಲು ಉತ್ಪಾದಕರಿಗೆ ಕೇಂದ್ರ ಸರ್ಕಾರ ಸೂಚನೆ
ಪ್ರಾತಿನಿಧಿಕ ಚಿತ್ರ
Follow us
ಡಾ. ಭಾಸ್ಕರ ಹೆಗಡೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 26, 2021 | 10:23 PM

ದೆಹಲಿ: ಕೊವಿಡ್​ ​ ಲಸಿಕೆಯ ದರ ಹೆಚ್ಚಾಯಿತೆಂದು ಹಲವಾರು ವರ್ಗದ ಜನ ಹೇಳಿರುವ ಹಿನ್ನೆಲೆಯಲ್ಲಿ,  ಮೇ 1 ರಿಂದ ರಾಷ್ಟ್ರವ್ಯಾಪಿ ಜಾರಿಗೊಳ್ಳಲಿರುವ ಮೂರನೇ ಹಂತದ ಕೊವಿಡ್​ ಲಸಿಕಾ ಅಭಿಯಾನಕ್ಕೆ ಮುಂಚಿತವಾಗಿ ಕೋವಿಡ್ -19 ವಿರುದ್ಧದ ಲಸಿಕೆಗಳ ಬೆಲೆಯನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ಸೋಮವಾರ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಭಾರತ್ ಬಯೋಟೆಕ್‌ಗೆ ಸೂಚಿಸಿದೆ.  ಮೇ 1 ರಿಂದ 18 ವರ್ಷ ವಯಸ್ಸಿನವರಿಗೆ ಡೋಸೇಜ್ ನೀಡಲಾಗುತ್ತದೆ.

ಎಸ್‌ಐಐ ಮತ್ತು ಬ್ರಿಟಿಷ್  ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ಕೋವಿಶೀಲ್ಡ್ ಅನ್ನು ಉತ್ಪಾದಿಸುತ್ತಿದ್ದರೆ , ಭಾರತ್ ಬಯೋಟೆಕ್ ಕಂಪೆನಿಯು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸಹಯೋಗದೊಂದಿಗೆ ಕೊವಾಕ್ಸಿನ್ ಅನ್ನು ಉತ್ಪಾದಿಸುತ್ತಿದೆ. ಎರಡೂ ಲಸಿಕೆಗಳಿಗೆ ಈ ವರ್ಷದ ಜನವರಿ 3 ರಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ತುರ್ತು ಬಳಕೆಗಾಗಿ ಅನುಮೋದನೆ ನೀಡಿತು.

ಲಸಿಕೆ ಅಭಿಯಾನದ ಮೂರನೇ ಹಂತಕ್ಕಿಂತ ಮುಂಚಿತವಾಗಿ ಲಸಿಕೆ ಬೆಲೆಗಳ ಬಗ್ಗೆ ಸತತವಾಗಿ ಟೀಕೆಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಡಿರುವ ಈ ಸೂಚನೆ ಮಹತ್ವ ಪಡೆದಿದೆ. ಮೂರನೇ ಹಂತದ ಅಡಿಯಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಕೇಂದ್ರ ಡ್ರಗ್ಸ್ ಲ್ಯಾಬೊರೇಟರಿ (ಸಿಡಿಎಲ್) ಪ್ರಮಾಣವನ್ನು ಶೇ 50 ರಷ್ಟು ಕೇಂದ್ರ ಸರ್ಕಾರಕ್ಕೆ ಪೂರೈಸುತ್ತಾರೆ ಮತ್ತು ಉಳಿದ ಶೇ 50ರಷ್ಟು ಪ್ರಮಾಣವನ್ನು ರಾಜ್ಯಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರೈಸಲು ಅವಕಾಶವಿದೆ.

ಎಸ್‌ಐಐನ ಕೋವಿಶೀಲ್ಡ್ ಅನ್ನು ಪ್ರತಿ ಡೋಸ್‌ಗೆ ₹ 400 ರಂತೆ ರಾಜ್ಯಗಳಿಗೆ ಮಾರಾಟ ಮಾಡಲಾಗುವುದು ಮತ್ತು ಖಾಸಗಿ ಆಸ್ಪತ್ರೆಗಳು ಪ್ರತಿ ಡೋಸ್‌ಗೆ ₹ 600 ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.  ಕೊವಾಕ್ಸಿನ್ ಅನ್ನು ಪ್ರತಿ ಸರ್ಕಾರಿ ಆಸ್ಪತ್ರೆಗಳಿಗೆ ರೂ. 600 ಮತ್ತು ಖಾಸಗಿ ಆಸ್ಪತ್ರೆಗಳಿಗೆ 1,200 ಕ್ಕೆ  ಮಾರಾಟ ಮಾಡಲು ನಿರ್ಧರಿಸಿದೆ. ಆದಾಗ್ಯೂ, ಎರಡೂ ಲಸಿಕೆಗಳನ್ನು  ಕೇಂದ್ರ ಸರ್ಕಾರವು ಪ್ರತಿ ಡೋಸ್‌ಗೆ ₹ 150 ದರದಲ್ಲಿ ಖರೀದಿಸುತ್ತದೆ. ಕೇಂದ್ರ ಸರಕಾರದ ಈ ಕೋರಿಕೆಗೆ ಎರಡೂ ಸಂಸ್ಥೆಗಳು ಇನ್ನು ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

(Central government asks Serum Institute and Bharat Biotech to reduce the prices of Covid 19 vaccine)

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್