AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಹೆಲ್ಮೆಟ್​​ಗೆ ಕೇಂದ್ರ ತಡೆ: ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ

ಕೇಂದ್ರ ಸರ್ಕಾರವು ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಖಚಿತಪಡಿಸಲು ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. BIS (ಭಾರತೀಯ ಮಾನದಂಡಗಳ ಬ್ಯೂರೋ) ದೆಹಲಿಯಲ್ಲಿ 2500ಕ್ಕೂ ಹೆಚ್ಚು ಕಳಪೆ ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡಿದೆ ಮತ್ತು ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ಆರಂಭಿಸಿದೆ. ಸವಾರರು BIS ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಧರಿಸುವುದು ಕಡ್ಡಾಯ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಕಳಪೆ ಹೆಲ್ಮೆಟ್​​ಗೆ ಕೇಂದ್ರ ತಡೆ: ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ
ಹೆಲ್ಮೆಟ್‌
ಗಂಗಾಧರ​ ಬ. ಸಾಬೋಜಿ
|

Updated on: Jul 06, 2025 | 8:33 AM

Share

ನವದೆಹಲಿ, ಜುಲೈ 06: ದೇಶದಲ್ಲಿ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಕಳಪೆ ಗುಣಮಟ್ಟದ ಹೆಲ್ಮೆಟ್‌ ಮಾರಾಟ ಮತ್ತು ಬಳಕೆಗೆ ತಡೆಯೊಡ್ಡಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್ (Helmet) ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ, ರಸ್ತೆ ಬದಿಗಳಲ್ಲಿ ಮಾರಾಟ ಆಗುತ್ತಿರುವ ಕಳಪೆ ಹೆಲ್ಮೆಟ್​ಗಳಿಗೆ ಬ್ರೇಕ್‌ ಹಾಕುವ ಜತೆಗೆ ವಾಹನ ಸವಾರರಿಗೆ ಬಿಐಎಸ್​ (BIS) ಪ್ರಮಾಣೀಕರಿಸಿದ ಐಎಸ್​ಐ (ISI) ಗುರುತುಳ್ಳ ಹೆಲ್ಮೆಟ್‌ ಬಳಕೆಯನ್ನೇ ಕಡ್ಡಾಯ ಎಂದು ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ಸೂಚಿಸಿದ್ದಾರೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಭಾರತೀಯ ಮಾನದಂಡಗಳ ಬ್ಯೂರೋ (BIS) ಕಳಪೆ ಹೆಲ್ಮೆಟ್ ತಯಾರಕರು ಮತ್ತು ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು, ದೆಹಲಿಯಲ್ಲಿ ಈಗಾಗಲೇ 2500ಕ್ಕೂ ಹೆಚ್ಚು ಕಳಪೆ ಹೆಲ್ಮೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಹೆಲ್ಮೆಟ್​ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

ಇದನ್ನೂ ಓದಿ
Image
ಕುಡಿದ ಮತ್ತಿನಲ್ಲಿ ವಾಗ್ವಾದ, ಬಿಜೆಪಿ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ
Image
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
Image
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ 75 ಸಾವು, 288 ಜನರಿಗೆ ಗಾಯ
Image
ಬೆಂಗಳೂರಿನ ಹೆಲ್ಮೆಟ್​ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

2024-25ನೇ ಆರ್ಥಿಕ ವರ್ಷದಲ್ಲಿ BIS ದೆಹಲಿಯಲ್ಲಿ 30ಕ್ಕೂ ಹೆಚ್ಚು ಹೆಲ್ಮೆಟ್‌ ತಯಾರಕ ಘಟಕಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಪರವಾನಗಿ ರದ್ದಾದ ಹಾಗೂ ಅವಧಿ ಮುಗಿದ 9 ತಯಾರಕರು ಕಂಡುಬಂದಿದ್ದು, ಇವರಿಂದ 2,500ಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡಿದೆ. ದೆಹಲಿಯ 17 ಅಂಗಡಿಗಳು ಮತ್ತು ರಸ್ತೆ ಬದಿ ವ್ಯಾಪಾರಸ್ಥರಲ್ಲೂ ಶೋಧ ನಡೆಸಿ, 500ಕ್ಕೂ ಹೆಚ್ಚು ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡ BIS ಅಧಿಕಾರಿಗಳ ತಂಡ, ವರ್ತಕರು ಮತ್ತು ತಯಾರಕರ ವಿರುದ್ಧ ಕಾನೂನು ಕ್ರಮ ಜರುಗಿಸಿದೆ.

176 ತಯಾರಕರಿಗೆ BIS ಮಾನ್ಯತೆ

2025ರ ಜೂನ್ ವೇಳೆಗೆ ದೇಶಾದ್ಯಂತ 176 ಹೆಲ್ಮೆಟ್‌ ತಯಾರಕರು ಮಾತ್ರ ರಕ್ಷಣಾತ್ಮಕ ಹೆಲ್ಮೆಟ್‌ ಉತ್ಪಾದನೆಗೆ ಮಾನ್ಯವಾದ BIS ಪರವಾನಗಿ ಹೊಂದಿದ್ದಾರೆ. ರಸ್ತೆ ಬದಿಗಳಲ್ಲಿ ಮಾರಾಟವಾಗುತ್ತಿರುವ ಅನೇಕ ಹೆಲ್ಮೆಟ್‌ಗಳು BIS ಪ್ರಮಾಣೀಕರಣ ಹೊಂದಿರುವುದಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್‌ ಇಲ್ಲದೆ ಮತ್ತು ಹೆಲ್ಮೆಟ್‌ ಧರಿಸಿದ್ದರೂ ಕಳಪೆ ಗುಣಮಟ್ಟದ್ದಾಗಿದ್ದರಿಂದ ತಲೆಗೆ ತೀವ್ರ ಪೆಟ್ಟು ಬಿದ್ದು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು BIS ಅನೇಕ ಪ್ರಕರಣಗಳಲ್ಲಿ ಇದನ್ನು ಗಮನಿಸಿದ್ದು, ಬೈಕ್‌ ಸವಾರರ ಸುರಕ್ಷತೆ ದೃಷ್ಟಿಯಿಂದ ಕಳಪೆ ಗುಣಮಟ್ಟದ ಹೆಲ್ಮೆಟ್‌ ತಯಾರಕರು ಮತ್ತು ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಇದನ್ನೂ ಓದಿ: ನೈಸ್ ಯೋಜನೆಗಾಗಿ 300 ಎಕರೆಗೂ ಹೆಚ್ಚಿನ ಕೆಐಎಡಿಬಿ ಭೂಸ್ವಾಧೀನ ರದ್ದು

BIS, ನಿಯಮಿತ ಕಾರ್ಖಾನೆ ಮತ್ತು ಮಾರುಕಟ್ಟೆ ಮೇಲೆ ಕಣ್ಗಾವಲಿರಿಸಿದ್ದು, 500ಕ್ಕೂ ಹೆಚ್ಚು ಹೆಲ್ಮೆಟ್ ಮಾದರಿಗಳನ್ನು ಪರೀಕ್ಷಿಸಿದೆ. 30ಕ್ಕೂ ಹೆಚ್ಚು ಶೋಧ ಕಾರ್ಯಾಚರಣೆ ನಡೆಸಿ ಗುಣಮಟ್ಟದ ಮಾನದಂಡಗಳನ್ನು ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ಸಹ ಗ್ರಾಹಕರ ರಕ್ಷಣೆ ಮತ್ತು ಸುರಕ್ಷಿತ ವಾಹನ ಸಂಚಾರಕ್ಕಾಗಿ ಕಳಪೆ-ಗುಣಮಟ್ಟದ ಹೆಲ್ಮೆಟ್‌ ಮಾರಾಟದ ವಿರುದ್ಧ ಸಮರ ಸಾರಿದೆ. ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಾವು-ನೋವು ತಡೆಯುವ ಉದ್ದೇಶದಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್‌ ಮಾರಾಟ-ಖರೀದಿಗೆ ಆದ್ಯತೆ ನೀಡುತ್ತಿದೆ.

ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ

ವಾಹನ ಸವಾರರ ಸುರಕ್ಷತೆ ಹಾಗೂ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳಿಂದ ಗ್ರಾಹಕರನ್ನು ರಕ್ಷಿಸುವ ಪ್ರಯತ್ನವಾಗಿ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ ನಡೆಸುತ್ತಿದೆ. ಎಲ್ಲಾ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಪತ್ರ ಬರೆದು ಮಾರುಕಟ್ಟೆಯಲ್ಲಿ ಹೆಲ್ಮೆಟ್‌ಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ ನೀಡಿದೆ. ದೆಹಲಿಯಲ್ಲಿ ಈ ಅಭಿಯಾನಕ್ಕೆ ಬೆಂಬಲ ವ್ಯಕ್ತವಾಗುತ್ತಿದ್ದು, ದೇಶದ ಇತರೆಡೆಯೂ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಅಭಿಯಾನ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬಿಐಎಸ್ ಕೇರ್ ಅಪ್ಲಿಕೇಶನ್‌

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ BIS ಪ್ರಾಮಾಣಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು ಹಾಗೂ ಪ್ರಮಾಣೀಕರಣವಿಲ್ಲದ ಹೆಲ್ಮೆಟ್‌ಗಳ ತಯಾರಿಕೆ ಅಥವಾ ಮಾರಾಟ ಕಂಡುಬಂದರೆ ಗ್ರಾಹಕ ವ್ಯವಹಾರಗಳ ಇಲಾಖೆ ಅಥವಾ BIS ಗಮನಕ್ಕೆ ತರಬೇಕು. ಇದಕ್ಕಾಗಿ ‘ಬಿಐಎಸ್ ಕೇರ್ ಅಪ್ಲಿಕೇಶನ್‌ʼ ಮತ್ತು ‘ಬಿಐಎಸ್ ಪೋರ್ಟಲ್‌ʼನಲ್ಲಿ ದೂರು ದಾಖಲಿಸಲು ಅವಕಾಶ ಕಲ್ಪಿಸಿದೆ. ರಾಷ್ಟ್ರವ್ಯಾಪಿ ಗ್ರಾಹಕರ ಜಾಗೃತಿಗಾಗಿ ಬಿಐಎಸ್ ಕ್ವಾಲಿಟಿ ಕನೆಕ್ಟ್ ಅಭಿಯಾನ ಸಹ ಆಯೋಜಿಸುತ್ತಿದೆ. ‘ಮನಕ್ ಮಿತ್ರ’ ಸ್ವಯಂ ಸೇವಕರು ಹೆಲ್ಮೆಟ್‌ ಮತ್ತಿತರ ಉತ್ಪನ್ನಗಳ ಕಡ್ಡಾಯ ಪ್ರಮಾಣೀಕರಣ ಬಗ್ಗೆ ಗ್ರಾಹಕರಿಗೆ ಅಗತ್ಯ ಮಾಹಿತಿ ಒದಗಿಸುತ್ತಾರೆ ಎಂದಿದೆ BIS.

ಸಚಿವ ಪ್ರಲ್ಹಾದ್​​ ಜೋಶಿ ಹೇಳಿದ್ದಿಷ್ಟು 

ಈ ಬಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ್​​ ಜೋಶಿ ಪ್ರತಿಕ್ರಿಯಿಸಿದ್ದು, ದೇಶದಲ್ಲಿ 21 ಕೋಟಿಗೂ ಹೆಚ್ಚು ದ್ವಿಚಕ್ರ ವಾಹನಗಳಿದ್ದು, ಸವಾರರ ಸುರಕ್ಷತೆ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಮೋಟಾರು ವಾಹನ ಕಾಯ್ದೆ, 1988ರಡಿ ಹೆಲ್ಮೆಟ್ ಕಡ್ಡಾಯವಾಗಿದ್ದು, ಅದರ ಗುಣಮಟ್ಟಕ್ಕೂ ಆದ್ಯತೆ ಕೊಡಬೇಕಿದೆ. ಹಾಗಾಗಿ 2021ರಿಂದ ಗುಣಮಟ್ಟ ನಿಯಂತ್ರಣ ಆದೇಶ ಜಾರಿಯಲ್ಲಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್‌ಗೆ ಅವಕಾಶವಿಲ್ಲ. ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ BIS ಮಾನದಂಡದಂತೆ (IS 4151:2015) ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ಗಳನ್ನು ಗ್ರಾಹಕ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸುತ್ತದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು