ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ […]

ಭಾರತದಿಂದ ಸದ್ಯಕ್ಕೆ ಈ ದೇಶಗಳಿಗೆ ಯಾರೂ ಹೋಗುವಂತಿಲ್ಲ
ಪಾಸ್​ಪೋರ್ಟ್ (ಪ್ರಾತಿನಿಧಿಕ ಚಿತ್ರ)
ಸಾಧು ಶ್ರೀನಾಥ್​

Updated on: Mar 04, 2020 | 9:43 AM

ದೆಹಲಿ: ಚೀನಾದಲ್ಲಿ ದಿಢೀರನೇ ಉದ್ಭವಿಸಿ ಅಲ್ಲಿನ ಜನರನ್ನು ಹೈರಾಣಗೊಳಿಸಿದ ಬಳಿಕ ಇತರ ದೇಶಗಳಲ್ಲೂ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಕೊರೊನಾ ಎಂಬ ಡ್ರ್ಯಾಗನ್ ಮೃತ್ಯು ಕಾಯಿಲೆ ಭಾರತದಲ್ಲೂ ಕಾಣಿಸಿಕೊಂಡಿದೆ. ಇದನ್ನು ಮೊಳಕೆಯಲ್ಲೇ ಚಿವುಟಿಹಾಕಲು ಭಾರತ ಸರ್ಕಾರ ಸನ್ನದ್ಧವಾಗಿದೆ.

ಈ ನಿಟ್ಟಿನಲ್ಲಿ ಕೆಲ ದೇಶಗಳಿಗೆ ಭಾರತದಿಂದ ಯಾರೂ ಹೋಗಬಾರದೆಂದು ಆದೇಶಿಸಿ ಕೇಂದ್ರ ಸರ್ಕಾರ ಕೆಲ ದೇಶಗಳಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಕೈ ಹಾಕಿದ್ದು ಇಟಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ, ಇರಾನ್ ಸೇರಿದಂತೆ ಹಲವು ದೇಶಗಳಿಗೆ ತೆರಳಲು ವೀಸಾ ರದ್ದುಗೊಳಿಸಿ ಆದೇಶ ನೀಡಿದೆ.

Published On - 3:49 pm, Tue, 3 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us